AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​, ದಿವ್ಯಾಗೆ ಗೆಲ್ಲೋ ಚಾನ್ಸ್​ ಎಷ್ಟು?

ಐದು ಸ್ಪರ್ಧಿಗಳು ಸದ್ಯ ಫಿನಾಲೆ ತಲುಪಿದ್ದು, ಇದರಲ್ಲಿ ಒಬ್ಬರು ಗೆಲ್ಲಲಿದ್ದಾರೆ. ಬಿಗ್​ ಬಾಸ್​ ಗೆಲ್ಲುವ ಸ್ಪರ್ಧಿ ಕಪ್​ ಜತೆಗೆ 50 ಲಕ್ಷ ರೂಪಾಯಿ ಹಣವನ್ನು ಮನೆಗೆ ಕೊಂಡೊಯ್ಯಲಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​, ದಿವ್ಯಾಗೆ ಗೆಲ್ಲೋ ಚಾನ್ಸ್​ ಎಷ್ಟು?
ಪ್ರಶಾಂತ್​ ಸಂಬರಗಿ-ದಿವ್ಯಾ ಉರುಡುಗ
TV9 Web
| Updated By: ಮದನ್​ ಕುಮಾರ್​|

Updated on: Aug 07, 2021 | 7:13 AM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಫಿನಾಲೆ ಇಂದು (ಆ.7) ಹಾಗೂ ನಾಳೆ (ಆ.8) ನಡೆಯುತ್ತಿದೆ. ಈ ಬಾರಿಯ ಬಿಗ್​ ಬಾಸ್​ ಸೀಸನ್​ ಯಾರು ಗೆಲ್ಲಲಿದ್ದಾರೆ ಅನ್ನೋದು ಸದ್ಯದ ಕುತೂಹಲ. ಐದು ಸ್ಪರ್ಧಿಗಳು ಸದ್ಯ ಫಿನಾಲೆ ತಲುಪಿದ್ದು, ಇದರಲ್ಲಿ ಒಬ್ಬರು ಗೆಲ್ಲಲಿದ್ದಾರೆ. ಬಿಗ್​ ಬಾಸ್​ ಗೆಲ್ಲುವ ಸ್ಪರ್ಧಿ ಕಪ್​ ಜತೆಗೆ 50 ಲಕ್ಷ ರೂಪಾಯಿ ಹಣವನ್ನು ಮನೆಗೆ ಕೊಂಡೊಯ್ಯಲಿದ್ದಾರೆ. ಫಿನಾಲೆ ಲಿಸ್ಟ್​ನಲ್ಲಿ ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗು ಕೂಡ ಇದ್ದು ಇವರು ಗೆಲ್ಲೋ ಸಾಧ್ಯತೆ ತುಂಬಾನೇ ಕಡಿಮೆ ಅನ್ನೋದು ಅಭಿಮಾನಿಗಳ ಲೆಕ್ಕಾಚಾರ.

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಸ್ಟ್ರಾಂಗ್​ ಕಂಟೆಸ್ಟೆಂಟ್​​ ಆಗಿ ಗುರುತಿಸಿಕೊಂಡಿದ್ದಾರೆ. ಮನೆಯಲ್ಲಿ ಕ್ಯಾಪ್ಟನ್​ ಆದ ಮೊದಲ ಮಹಿಳಾ ಸ್ಪರ್ಧಿ ಎಂದರೆ ಅದು ದಿವ್ಯಾ ಉರುಡುಗ. ಪ್ರತಿ ಟಾಸ್ಕ್​ ಅನ್ನು ಅವರು ಉತ್ತಮವಾಗಿ ಆಡುತ್ತಾರೆ. ಇನ್ನು, ಅರವಿಂದ್​ ಜತೆಗಿನ ಗೆಳೆತನ ಎಲ್ಲರ ಗಮನ ಸೆಳೆಯುತ್ತಿದೆ. ಈ ಎಲ್ಲಾ ಕಾರಣಕ್ಕೆ ದಿವ್ಯಾ ಫಿನಾಲೆ ತಲುಪಿದ್ದಾರೆ. ಆದರೆ, ವೈಷ್ಣವಿ, ಮಂಜು ಹಾಗೂ ಅರವಿಂದ್​ಗೆ ಕಾಂಪಿಟೇಷನ್​ ನೀಡಿ ದಿವ್ಯಾ ಉರುಡುಗ ಬಿಗ್​ ಬಾಸ್​ ಗೆಲ್ಲುವ ಸಾಧ್ಯತೆ ತುಂಬಾನೇ ಕಡಿಮೆ ಎನ್ನಲಾಗುತ್ತಿದೆ. ಹೀಗಾಗಿ, ಅವರು ಈ ಬಾರಿ ಕಪ್​ ಗೆಲ್ಲುವ ಸಾಧ್ಯತೆ ತುಂಬಾನೇ ಕಡಿಮೆ.

ಇನ್ನು ಪ್ರಶಾಂತ್​ ಸಂಬರಗಿ ಕೂಡ ಫಿನಾಲೆ ಲಿಸ್ಟ್​ನಲ್ಲಿದ್ದಾರೆ. ಇವರು ಎರಡು ಬಾರಿ ಬಿಗ್​ ಬಾಸ್​ ಎಕ್ಸಿಟ್​ ಬಾಗಿಲನ್ನು ಮುಟ್ಟಿ ಬಂದಿದ್ದಾರೆ. ಮನೆಯಲ್ಲಿ ನ್ಯಾಯದ ಪರ ಹಾಗೂ ಗುಂಪುಗಾರಿಕೆ ವಿರುದ್ಧ ತೀವ್ರವಾಗಿ ಹೋರಾಡಿದವರು ಪ್ರಶಾಂತ್​. ಸಾಕಷ್ಟು ಬಾರಿ ಅವರು ಏರು ಧ್ವನಿಯಲ್ಲಿ ಮಾತನಾಡಿದ್ದಾರೆ. ನಾಲ್ಕು ಬಾರಿ ಕಳಪೆ ಪಟ್ಟ ಪಡೆದಿದ್ದಾರೆ ಪ್ರಶಾಂತ್​. ಅಂತಿಮವಾಗಿ ಪ್ರಶಾಂತ್​ ಸಂಪೂರ್ಣವಾಗಿ ಬದಲಾಗಿದ್ದರು. ಅವರು ಎಲ್ಲರ ಜತೆ ಬೆರೆಯೋಕೆ ಪ್ರಾರಂಭಿಸಿದ್ದರು. ಇದು ಅವರಿಗೆ ಪ್ಲಸ್​ ಪಾಯಿಂಟ್​ ಆಗಿದೆ. ಆದರೆ, ಪ್ರಶಾಂತ್​ ಗೆಲ್ಲುವ ಸಾಧ್ಯತೆ ತುಂಬಾನೇ ಕಡಿಮೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ:

ಪ್ರಶಾಂತ್​ ಕಾರಿನ ಮೇಲೆ ದೈತ್ಯ ಕಲ್ಲನ್ನು ಹಾಕಿದ್ದ ದುಷ್ಕರ್ಮಿಗಳು; ಕೊಲೆ ಪ್ರಯತ್ನದ ಬಗ್ಗೆ ಬಿಗ್​ ಬಾಸ್​ನಲ್ಲಿ ಹೇಳಿಕೊಂಡ ಸಂಬರಗಿ

ಹಳೆಯ ಫೋಟೋ ವೈರಲ್​ ಪ್ರಕರಣ; ಕೋರ್ಟ್​ ಮೊರೆ ಹೋದ ಬಿಗ್​ ಬಾಸ್​ ಸ್ಪರ್ಧಿ ದಿವ್ಯಾ ಉರುಡುಗ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!