ಹಳೆಯ ಫೋಟೋ ವೈರಲ್​ ಪ್ರಕರಣ; ಕೋರ್ಟ್​ ಮೊರೆ ಹೋದ ಬಿಗ್​ ಬಾಸ್​ ಸ್ಪರ್ಧಿ ದಿವ್ಯಾ ಉರುಡುಗ

ಬಿಗ್​ ಬಾಸ್​ ಮನೆಯಲ್ಲಿ ಇರುವಾಗಲೇ ದಿವ್ಯಾ ಉರುಡುಗ ಹಳೆಯ ಫೋಟೋ ಒಂದು ವೈರಲ್​ ಆಗಿತ್ತು. ಸಾಕಷ್ಟು ಟ್ರೋಲ್​ ಪೇಜ್​ಗಳು ಈ ಫೋಟೋಗಳನ್ನು ಇಟ್ಟುಕೊಂಡು ಟ್ರೋಲ್​ ಮಾಡಿದ್ದವು.

ಹಳೆಯ ಫೋಟೋ ವೈರಲ್​ ಪ್ರಕರಣ; ಕೋರ್ಟ್​ ಮೊರೆ ಹೋದ ಬಿಗ್​ ಬಾಸ್​ ಸ್ಪರ್ಧಿ ದಿವ್ಯಾ ಉರುಡುಗ
ದಿವ್ಯಾ ಉರುಡುಗ
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 31, 2021 | 5:16 PM

ದಿವ್ಯಾ ಉರುಡುಗ ಬಿಗ್​ ಬಾಸ್​ ಮನೆಯಲ್ಲಿ ಮಿಂಚುತ್ತಿದ್ದಾರೆ. ಅವರು ಫಿನಾಲೆ ತಲುಪುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಅವರು ಬಿಗ್​ ಬಾಸ್​ ಮನೆಯಲ್ಲಿ ಇರುವಾಗಲೇ ಅವರ ಹಳೆಯ ಫೋಟೋ ಒಂದು ವೈರಲ್​ ಆಗಿತ್ತು. ಸಾಕಷ್ಟು ಟ್ರೋಲ್​ ಪೇಜ್​ಗಳು ಈ ಫೋಟೋಗಳನ್ನು ಇಟ್ಟುಕೊಂಡು ಟ್ರೋಲ್​ ಮಾಡಿದ್ದವು. ಈಗ ಈ ವಿಚಾರಕ್ಕೆ ಸಂಬಂಧಿಸಿ ದಿವ್ಯಾ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಮಾನಹಾನಿಕರ ಸುದ್ದಿ ಪ್ರಸಾರ‌ ಮಾಡದಂತೆ ನಿರ್ಬಂಧ ಕೋರಿ ದಿವ್ಯಾ ಪರ ವಕೀಲರು ಬೆಂಗಳೂರು ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಒಂದೊಮ್ಮೆ ಕೋರ್ಟ್​ನಿಂದ ಈ ಬಗ್ಗೆ ಆದೇಶ ಬಂದರೆ, ಅವರ ವಿರುದ್ಧ ಮಾನಹಾನಿ ಆಗುವಂಥ ಸುದ್ದಿ ಪ್ರಸಾರ ಮಾಡುವಂತಿಲ್ಲ. ಒಂದೊಮ್ಮೆ ಆದೇಶ ಮೀರಿದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬಹುದು.

ಫಿನಾಲೆಗೆ ಬೆರಳೆಣಿಕೆ ದಿನ:

ಬಿಗ್​ ಬಾಸ್​ ಫಿನಾಲೆ ವಾರದಲ್ಲಿ ಐವರು ಉಳಿದುಕೊಳ್ಳುತ್ತಾರೆ. ಇದು ಬಿಗ್​ ಬಾಸ್​ ಸಂಪ್ರದಾಯ. ಅಂದರೆ, ಫಿನಾಲೆ ಬರುವುದರೊಳಗೆ ಬಿಗ್​ ಬಾಸ್​ ಮನೆಯಿಂದ ಮೂವರು ಎಲಿಮಿನೇಷನ್​ ಆಗೋದು ಪಕ್ಕಾ ಎನ್ನಲಾಗುತ್ತಿದೆ. ಆ ಮೂವರು ಸ್ಪರ್ಧಿಗಳು ಯಾರು ಅನ್ನೋದು ಸದ್ಯದ ಕುತೂಹಲ.

ಮಂಜು ಪಾವಗಡ, ಅರವಿಂದ್​ ಕೆ.ಪಿ. ಹಾಗೂ ವೈಷ್ಣವಿ ಬಿಗ್​ ಬಾಸ್​ ಮನೆಯಲ್ಲಿ ಸ್ಟ್ರಾಂಗ್​ ಕಂಟೆಸ್ಟೆಂಟ್ಸ್​​ ಎನಿಸಿಕೊಂಡಿದ್ದಾರೆ. ಇವರು ಫಿನಾಲೆ ವೀಕ್​ನಲ್ಲಿ ಉಳಿಯೋದು ಬಹುತೇಕ ಖಚಿತ. ಟಾಸ್ಕ್​ ವಿಚಾರಕ್ಕಿರಲಿ ಅಥವಾ ಮನೆಯಲ್ಲಿ ಹೊಂದಿಕೊಂಡು ಹೋಗುವ ವಿಚಾರದಲ್ಲಿರಲಿ ಈ ಮೂವರು ಮುಂದಿರುತ್ತಾರೆ.

ಇನ್ನು ದಿವ್ಯಾ ಉರುಡುಗ ಕೂಡ ಪ್ರಮುಖ ಸ್ಪರ್ಧಿಯಾಗಿದ್ದಾರೆ. ಇವರು ಕೂಡ ಸ್ಟ್ರಾಂಗ್​ ಎನಿಸಿಕೊಂಡಿದ್ದಾರೆ. ಅರವಿಂದ್​ ಹಾಗೂ ದಿವ್ಯಾ ಕೆಮಿಸ್ಟ್ರಿ ಎಲ್ಲರಿಗೂ ಇಷ್ಟವಾಗಿದೆ. ಈ ಕಾರಣಕ್ಕೆ ದಿವ್ಯಾ ಪ್ರಮುಖ ಎನಿಸಿಕೊಂಡಿದ್ದಾರೆ. ಈ ವಾರ ಕ್ಯಾಪ್ಟನ್​ ಕೂಡ ಆಗಿರುವುದರಿಂದ ಟಾಪ್​ 5ನಲ್ಲಿ ದಿವ್ಯಾ ಕಾಣಿಸಿಕೊಂಡರೂ ಅಚ್ಚರಿ ಇಲ್ಲ.

ಇನ್ನು ಐದನೇ ಸ್ಥಾನಕ್ಕೆ ಯಾರು ಅನ್ನೋದು ಸದ್ಯದ ಕುತೂಹಲ. ಶುಭಾ, ಪ್ರಶಾಂತ್​, ಶಮಂತ್​ ಹಾಗೂ ದಿವ್ಯಾ ಸುರೇಶ್ ಈ ನಾಲ್ವರ ನಡುವೆ ಟಫ್​ ಕಾಂಪಿಟೇಷನ್​ ಇದೆ. ಫಿನಾಲೆಗೂ ಮೊದಲು ಈ ನಾಲ್ವರಲ್ಲಿ ಮೂವರು ಹೊರಹೋಗಬಹುದು ಎಂಬುದು ವೀಕ್ಷಕರ ಲೆಕ್ಕಾಚಾರ.

ಇದನ್ನೂ ಓದಿ: ಸೀರೆಯಲ್ಲಿ ಕಾಣಿಸಿಕೊಂಡ ದಿವ್ಯಾ ಉರುಡುಗ; ನಾಚಿ ನೀರಾದ ಅರವಿಂದ್

ದಿವ್ಯಾ ಉರುಡುಗ-ಅರವಿಂದ್ ಒಡನಾಟದಿಂದ ಮನೆಯವರಿಗೆ ಕಿರಿಕಿರಿ; ಎಲ್ಲರೆದುರು ಅಸಮಾಧಾನ ಹೊರಹಾಕಿದ ಶುಭಾ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ