AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ಫೋಟೋ ವೈರಲ್​ ಪ್ರಕರಣ; ಕೋರ್ಟ್​ ಮೊರೆ ಹೋದ ಬಿಗ್​ ಬಾಸ್​ ಸ್ಪರ್ಧಿ ದಿವ್ಯಾ ಉರುಡುಗ

ಬಿಗ್​ ಬಾಸ್​ ಮನೆಯಲ್ಲಿ ಇರುವಾಗಲೇ ದಿವ್ಯಾ ಉರುಡುಗ ಹಳೆಯ ಫೋಟೋ ಒಂದು ವೈರಲ್​ ಆಗಿತ್ತು. ಸಾಕಷ್ಟು ಟ್ರೋಲ್​ ಪೇಜ್​ಗಳು ಈ ಫೋಟೋಗಳನ್ನು ಇಟ್ಟುಕೊಂಡು ಟ್ರೋಲ್​ ಮಾಡಿದ್ದವು.

ಹಳೆಯ ಫೋಟೋ ವೈರಲ್​ ಪ್ರಕರಣ; ಕೋರ್ಟ್​ ಮೊರೆ ಹೋದ ಬಿಗ್​ ಬಾಸ್​ ಸ್ಪರ್ಧಿ ದಿವ್ಯಾ ಉರುಡುಗ
ದಿವ್ಯಾ ಉರುಡುಗ
TV9 Web
| Edited By: |

Updated on: Jul 31, 2021 | 5:16 PM

Share

ದಿವ್ಯಾ ಉರುಡುಗ ಬಿಗ್​ ಬಾಸ್​ ಮನೆಯಲ್ಲಿ ಮಿಂಚುತ್ತಿದ್ದಾರೆ. ಅವರು ಫಿನಾಲೆ ತಲುಪುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಅವರು ಬಿಗ್​ ಬಾಸ್​ ಮನೆಯಲ್ಲಿ ಇರುವಾಗಲೇ ಅವರ ಹಳೆಯ ಫೋಟೋ ಒಂದು ವೈರಲ್​ ಆಗಿತ್ತು. ಸಾಕಷ್ಟು ಟ್ರೋಲ್​ ಪೇಜ್​ಗಳು ಈ ಫೋಟೋಗಳನ್ನು ಇಟ್ಟುಕೊಂಡು ಟ್ರೋಲ್​ ಮಾಡಿದ್ದವು. ಈಗ ಈ ವಿಚಾರಕ್ಕೆ ಸಂಬಂಧಿಸಿ ದಿವ್ಯಾ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಮಾನಹಾನಿಕರ ಸುದ್ದಿ ಪ್ರಸಾರ‌ ಮಾಡದಂತೆ ನಿರ್ಬಂಧ ಕೋರಿ ದಿವ್ಯಾ ಪರ ವಕೀಲರು ಬೆಂಗಳೂರು ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಒಂದೊಮ್ಮೆ ಕೋರ್ಟ್​ನಿಂದ ಈ ಬಗ್ಗೆ ಆದೇಶ ಬಂದರೆ, ಅವರ ವಿರುದ್ಧ ಮಾನಹಾನಿ ಆಗುವಂಥ ಸುದ್ದಿ ಪ್ರಸಾರ ಮಾಡುವಂತಿಲ್ಲ. ಒಂದೊಮ್ಮೆ ಆದೇಶ ಮೀರಿದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬಹುದು.

ಫಿನಾಲೆಗೆ ಬೆರಳೆಣಿಕೆ ದಿನ:

ಬಿಗ್​ ಬಾಸ್​ ಫಿನಾಲೆ ವಾರದಲ್ಲಿ ಐವರು ಉಳಿದುಕೊಳ್ಳುತ್ತಾರೆ. ಇದು ಬಿಗ್​ ಬಾಸ್​ ಸಂಪ್ರದಾಯ. ಅಂದರೆ, ಫಿನಾಲೆ ಬರುವುದರೊಳಗೆ ಬಿಗ್​ ಬಾಸ್​ ಮನೆಯಿಂದ ಮೂವರು ಎಲಿಮಿನೇಷನ್​ ಆಗೋದು ಪಕ್ಕಾ ಎನ್ನಲಾಗುತ್ತಿದೆ. ಆ ಮೂವರು ಸ್ಪರ್ಧಿಗಳು ಯಾರು ಅನ್ನೋದು ಸದ್ಯದ ಕುತೂಹಲ.

ಮಂಜು ಪಾವಗಡ, ಅರವಿಂದ್​ ಕೆ.ಪಿ. ಹಾಗೂ ವೈಷ್ಣವಿ ಬಿಗ್​ ಬಾಸ್​ ಮನೆಯಲ್ಲಿ ಸ್ಟ್ರಾಂಗ್​ ಕಂಟೆಸ್ಟೆಂಟ್ಸ್​​ ಎನಿಸಿಕೊಂಡಿದ್ದಾರೆ. ಇವರು ಫಿನಾಲೆ ವೀಕ್​ನಲ್ಲಿ ಉಳಿಯೋದು ಬಹುತೇಕ ಖಚಿತ. ಟಾಸ್ಕ್​ ವಿಚಾರಕ್ಕಿರಲಿ ಅಥವಾ ಮನೆಯಲ್ಲಿ ಹೊಂದಿಕೊಂಡು ಹೋಗುವ ವಿಚಾರದಲ್ಲಿರಲಿ ಈ ಮೂವರು ಮುಂದಿರುತ್ತಾರೆ.

ಇನ್ನು ದಿವ್ಯಾ ಉರುಡುಗ ಕೂಡ ಪ್ರಮುಖ ಸ್ಪರ್ಧಿಯಾಗಿದ್ದಾರೆ. ಇವರು ಕೂಡ ಸ್ಟ್ರಾಂಗ್​ ಎನಿಸಿಕೊಂಡಿದ್ದಾರೆ. ಅರವಿಂದ್​ ಹಾಗೂ ದಿವ್ಯಾ ಕೆಮಿಸ್ಟ್ರಿ ಎಲ್ಲರಿಗೂ ಇಷ್ಟವಾಗಿದೆ. ಈ ಕಾರಣಕ್ಕೆ ದಿವ್ಯಾ ಪ್ರಮುಖ ಎನಿಸಿಕೊಂಡಿದ್ದಾರೆ. ಈ ವಾರ ಕ್ಯಾಪ್ಟನ್​ ಕೂಡ ಆಗಿರುವುದರಿಂದ ಟಾಪ್​ 5ನಲ್ಲಿ ದಿವ್ಯಾ ಕಾಣಿಸಿಕೊಂಡರೂ ಅಚ್ಚರಿ ಇಲ್ಲ.

ಇನ್ನು ಐದನೇ ಸ್ಥಾನಕ್ಕೆ ಯಾರು ಅನ್ನೋದು ಸದ್ಯದ ಕುತೂಹಲ. ಶುಭಾ, ಪ್ರಶಾಂತ್​, ಶಮಂತ್​ ಹಾಗೂ ದಿವ್ಯಾ ಸುರೇಶ್ ಈ ನಾಲ್ವರ ನಡುವೆ ಟಫ್​ ಕಾಂಪಿಟೇಷನ್​ ಇದೆ. ಫಿನಾಲೆಗೂ ಮೊದಲು ಈ ನಾಲ್ವರಲ್ಲಿ ಮೂವರು ಹೊರಹೋಗಬಹುದು ಎಂಬುದು ವೀಕ್ಷಕರ ಲೆಕ್ಕಾಚಾರ.

ಇದನ್ನೂ ಓದಿ: ಸೀರೆಯಲ್ಲಿ ಕಾಣಿಸಿಕೊಂಡ ದಿವ್ಯಾ ಉರುಡುಗ; ನಾಚಿ ನೀರಾದ ಅರವಿಂದ್

ದಿವ್ಯಾ ಉರುಡುಗ-ಅರವಿಂದ್ ಒಡನಾಟದಿಂದ ಮನೆಯವರಿಗೆ ಕಿರಿಕಿರಿ; ಎಲ್ಲರೆದುರು ಅಸಮಾಧಾನ ಹೊರಹಾಕಿದ ಶುಭಾ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?