AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಬಿಗ್ ಬಾಸ್ ಫಿನಾಲೆ ರೇಸ್​​ನಿಂದ ದಿವ್ಯಾ ಉರುಡುಗ ಔಟ್; ಹಿನ್ನಡೆಗೆ ಕಾರಣವಾಯ್ತು ಈ ಅಂಶ

ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು. ಆದರೂ ಅವರು ಬಿಗ್ ಬಾಸ್ ಫಿನಾಲೆ ತಲುಪಿದರು.

Divya Uruduga: ಬಿಗ್ ಬಾಸ್ ಫಿನಾಲೆ ರೇಸ್​​ನಿಂದ ದಿವ್ಯಾ ಉರುಡುಗ ಔಟ್; ಹಿನ್ನಡೆಗೆ ಕಾರಣವಾಯ್ತು ಈ ಅಂಶ
ದಿವ್ಯಾ ಉರುಡುಗ
TV9 Web
| Edited By: |

Updated on: Dec 30, 2022 | 10:55 PM

Share

ದಿವ್ಯಾ ಉರುಡುಗ (Divya Uruduga) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ‘ಬಿಗ್ ಬಾಸ್​ ಕನ್ನಡ ಸೀಸನ್​ 9’ರ (BBK 9) ಫೈನಲಿಸ್ಟ್​​ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದರು. ಈಗ ಅವರು ಫಿನಾಲೆ ರೇಸ್​ನಿಂದ ಔಟ್ ಆಗಿದ್ದಾರೆ. ಈ ಮೂಲಕ ಫಿನಾಲೆಯಿಂದ ಮೊದಲು ಹೊರ ಹೋದ ಸ್ಪರ್ಧಿ ಅವರಾಗಿದ್ದಾರೆ.

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು. ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು. ಆದರೂ ಅವರು ಬಿಗ್ ಬಾಸ್ ಫಿನಾಲೆ ತಲುಪಿದರು.

ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ, ದೀಪಿಕಾ ದಾಸ್ ನಡುವೆ ಅವರು ಫಿನಾಲೆಯಲ್ಲಿ ಸ್ಪರ್ಧೆ ಮಾಡಿದರು. ಆದರೆ, ಫಿನಾಲೆಯಲ್ಲಿ ಈ ಸ್ಪರ್ಧಿಗಳ ಜತೆ ಸ್ಪರ್ಧೆ ಮಾಡಲು ದಿವ್ಯಾಗೆ ಸಾಧ್ಯವಾಗಿಲ್ಲ. ಕಡಿಮೆ ವೋಟ್ ಪಡೆದು ಅವರು ಎಲಿಮಿನೇಟ್ ಆಗಿದ್ದಾರೆ. ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ, ದೀಪಿಕಾ ದಾಸ್ ಮಧ್ಯೆ ಸ್ಪರ್ಧೆ ಮುಂದುವರಿದಿದೆ.

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು
Image
ಅರವಿಂದ್ ಬಳಿಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ವಾಸುಕಿ ವೈಭವ್​; ಸ್ಪರ್ಧಿಗಳಿಗೆ ಸಿಕ್ಕಾಪಟ್ಟೆ ಸರ್​ಪ್ರೈಸ್​
Image
ದಿವ್ಯಾ ಉರುಡುಗಗೆ ಕಣ್ಣೀರು ಹಾಕಿಸಿದ್ದ ರೂಪೇಶ್ ರಾಜಣ್ಣ; ದೊಡ್ಮನೆಯಲ್ಲಿ ಟಾಂಗ್ ಕೊಟ್ಟ ಅರವಿಂದ್ ಕೆಪಿ
Image
Divya Uruduga: ದಿವ್ಯಾ ಉರುಡುಗ ಸಲುವಾಗಿ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ ಅರವಿಂದ್ ಕೆಪಿ

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು

ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ

ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್