Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಬಿಗ್ ಬಾಸ್ ಫಿನಾಲೆ ರೇಸ್​​ನಿಂದ ದಿವ್ಯಾ ಉರುಡುಗ ಔಟ್; ಹಿನ್ನಡೆಗೆ ಕಾರಣವಾಯ್ತು ಈ ಅಂಶ

ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು. ಆದರೂ ಅವರು ಬಿಗ್ ಬಾಸ್ ಫಿನಾಲೆ ತಲುಪಿದರು.

Divya Uruduga: ಬಿಗ್ ಬಾಸ್ ಫಿನಾಲೆ ರೇಸ್​​ನಿಂದ ದಿವ್ಯಾ ಉರುಡುಗ ಔಟ್; ಹಿನ್ನಡೆಗೆ ಕಾರಣವಾಯ್ತು ಈ ಅಂಶ
ದಿವ್ಯಾ ಉರುಡುಗ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 30, 2022 | 10:55 PM

ದಿವ್ಯಾ ಉರುಡುಗ (Divya Uruduga) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ‘ಬಿಗ್ ಬಾಸ್​ ಕನ್ನಡ ಸೀಸನ್​ 9’ರ (BBK 9) ಫೈನಲಿಸ್ಟ್​​ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದರು. ಈಗ ಅವರು ಫಿನಾಲೆ ರೇಸ್​ನಿಂದ ಔಟ್ ಆಗಿದ್ದಾರೆ. ಈ ಮೂಲಕ ಫಿನಾಲೆಯಿಂದ ಮೊದಲು ಹೊರ ಹೋದ ಸ್ಪರ್ಧಿ ಅವರಾಗಿದ್ದಾರೆ.

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು. ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು. ಆದರೂ ಅವರು ಬಿಗ್ ಬಾಸ್ ಫಿನಾಲೆ ತಲುಪಿದರು.

ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ, ದೀಪಿಕಾ ದಾಸ್ ನಡುವೆ ಅವರು ಫಿನಾಲೆಯಲ್ಲಿ ಸ್ಪರ್ಧೆ ಮಾಡಿದರು. ಆದರೆ, ಫಿನಾಲೆಯಲ್ಲಿ ಈ ಸ್ಪರ್ಧಿಗಳ ಜತೆ ಸ್ಪರ್ಧೆ ಮಾಡಲು ದಿವ್ಯಾಗೆ ಸಾಧ್ಯವಾಗಿಲ್ಲ. ಕಡಿಮೆ ವೋಟ್ ಪಡೆದು ಅವರು ಎಲಿಮಿನೇಟ್ ಆಗಿದ್ದಾರೆ. ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ, ದೀಪಿಕಾ ದಾಸ್ ಮಧ್ಯೆ ಸ್ಪರ್ಧೆ ಮುಂದುವರಿದಿದೆ.

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು
Image
ಅರವಿಂದ್ ಬಳಿಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ವಾಸುಕಿ ವೈಭವ್​; ಸ್ಪರ್ಧಿಗಳಿಗೆ ಸಿಕ್ಕಾಪಟ್ಟೆ ಸರ್​ಪ್ರೈಸ್​
Image
ದಿವ್ಯಾ ಉರುಡುಗಗೆ ಕಣ್ಣೀರು ಹಾಕಿಸಿದ್ದ ರೂಪೇಶ್ ರಾಜಣ್ಣ; ದೊಡ್ಮನೆಯಲ್ಲಿ ಟಾಂಗ್ ಕೊಟ್ಟ ಅರವಿಂದ್ ಕೆಪಿ
Image
Divya Uruduga: ದಿವ್ಯಾ ಉರುಡುಗ ಸಲುವಾಗಿ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ ಅರವಿಂದ್ ಕೆಪಿ

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು

ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ

ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ