AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೆ ನೇರವಾಗಿ ಆಯ್ಕೆಯಾದ ದಿವ್ಯಾ ಉರುಡುಗ; ಮಂಜು-ಅರವಿಂದ್ ಅವರನ್ನು ಬೀಟ್​ ಮಾಡಿದ್ದು ಹೇಗೆ?

ಈ ವಾರ ಬಿಗ್​ ಬಾಸ್​ ಮನೆಯಲ್ಲಿ​ ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹತೆ ಪಡೆದುಕೊಳ್ಳಲು ಬಿಗ್​ ಬಾಸ್​ ‘ನೀನಾ ನಾನಾ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಇದರಡಿಯಲ್ಲಿ ನೀಡಿದ ಪ್ರತಿ ಟಾಸ್ಕ್​ಗಳೂ ವೈಯಕ್ತಿಕ ಟಾಸ್ಕ್​ಗಳೇ.

ಬಿಗ್​ ಬಾಸ್​ ಫಿನಾಲೆಗೆ ನೇರವಾಗಿ ಆಯ್ಕೆಯಾದ ದಿವ್ಯಾ ಉರುಡುಗ; ಮಂಜು-ಅರವಿಂದ್ ಅವರನ್ನು ಬೀಟ್​ ಮಾಡಿದ್ದು ಹೇಗೆ?
ದಿವ್ಯಾ ಉರುಡುಗ - ಅರವಿಂದ್​ ಕೆಪಿ
TV9 Web
| Edited By: |

Updated on: Jul 23, 2021 | 3:09 PM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಸ್ಟ್ರಾಂಗ್​ ಕಂಟೆಸ್ಟೆಂಟ್​ ಆಗಿ ಗುರುತಿಸಿಕೊಂಡಿದ್ದಾರೆ. ಸೀಸನ್​ 8ರ ಮೊದಲ ಮಹಿಳಾ ಕ್ಯಾಪ್ಟನ್​ ಆಗುವ ಮೂಲಕ ಹೊಸ ದಾಖಲೆಯನ್ನು ಅವರು ಬರೆದಿದ್ದರು. ಈಗ ಸೀಸನ್​8ರಲ್ಲಿ ಫಿನಾಲೆಗೆ ಏರಿದ ಮೊದಲ ಸ್ಪರ್ಧಿ ಇವರೇ ಅನ್ನೋದು ವಿಶೇಷ. ಈ ಮೂಲಕ ದಿವ್ಯಾ ಫಿನಾಲೆಗೆ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. 

ಈ ವಾರ ಬಿಗ್​ ಬಾಸ್​ ಮನೆಯಲ್ಲಿ​ ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹತೆ ಪಡೆದುಕೊಳ್ಳಲು ಬಿಗ್​ ಬಾಸ್​ ‘ನೀನಾ ನಾನಾ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಇದರಡಿಯಲ್ಲಿ ನೀಡಿದ ಪ್ರತಿ ಟಾಸ್ಕ್​ಗಳೂ ವೈಯಕ್ತಿಕ ಟಾಸ್ಕ್​ಗಳೇ. ಕಳೆದ ವಾರ ದಿವ್ಯಾ ಕೈಗೆ ಪೆಟ್ಟಾಗಿತ್ತು. ಹೀಗಾಗಿ, ಈ ವಾರ ಅವರಿಗೆ ಆಡೋದು ಬಹಳ ಕಷ್ಟವಾಗಿತ್ತು. ಆದರೆ, ಇದೆಲ್ಲವನ್ನೂ ಮೀರಿ ದಿವ್ಯಾ ಈ ವಾರ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಸ್ಟ್ರಾಂಗ್​ ಕಂಟೆಸ್ಟಂಟ್​ಗಳ ಎದುರು ಅವರು ಗೆದ್ದು ಕ್ಯಾಪ್ಟನ್​ ಆಗಿದ್ದಾರೆ ಎನ್ನಲಾಗಿದೆ.

ಈ ವಾರ ಹೊರತು ಪಡಿಸಿದರೆ ಬಿಗ್​ ಬಾಸ್​ ಮನೆಯಲ್ಲಿ ಉಳಿದಿರೋದು ಕೇವಲ ಎರಡು ವಾರ ಮಾತ್ರ. ಕ್ಯಾಪ್ಟನ್​ ಆದವರನ್ನು ನಾಮಿನೇಟ್​ ಮಾಡುವಂತಿಲ್ಲ. ಹೀಗಾಗಿ, ದಿವ್ಯಾ ಉರುಡುಗ ಮುಂದಿನ ವಾರದ ನಾಮಿನೇಷನ್​ನಿಂದ ಬವಾವ್​ ಆಗಲಿದ್ದಾರೆ. ನಂತರ ಉಳಿಯೋದು ಒಂದು ವಾರ ಮಾತ್ರ. ಹೀಗಾಗಿ, ಈ ವಾರ ಕ್ಯಾಪ್ಟನ್​ ಆಗುವ ಮೂಲಕ ದಿವ್ಯಾ ಉರುಡುಗ ಫಿನಾಲೆಗೆ ನೇರವಾಗಿ ಆಯ್ಕೆ ಆದಂತಾಗಿದೆ. ಈ ವಾರ ಅವರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಸ್ಟ್ರಾಂಗ್​ ಕಂಟೆಸ್ಟಂಟ್​ ಎನಿಸಿಕೊಂಡಿರುವುದರಿಂದ ಅವರು ಸೇವ್​ ಆಗೋದು ಬಹುತೇಕ ಖಚಿತವಾಗಿದೆ.

ಇನ್ನು, ಈ ವಾರ ದಿವ್ಯಾ ಪ್ರಯಾಣ ಅಷ್ಟು ಸುಲಭವಾಗಿರಲಿಲ್ಲ. ಈ ವಾರ ಅವರ ಕೈಗೆ ಪೆಟ್ಟಾಗಿತ್ತು. ಅಷ್ಟೇ ಅಲ್ಲ, ಆಪ್ತ ಎನಿಸಿಕೊಂಡಿದ್ದ ಅರವಿಂದ್​ ಕೆ.ಪಿ ಅವರು ದಿವ್ಯಾ ಉರುಡುಗ ವಿರುದ್ಧ ತಿರುಗಿ ಬಿದ್ದಿದ್ದರು. ಇಬ್ಬರ ನಡುವೆ ಮನಸ್ತಾಪ ಕೂಡ ಉಂಟಾಗಿತ್ತು. ಇದು ದಿವ್ಯಾ ಅವರನ್ನು ಮಾನಸಿಕವಾಗಿ ಕುಗ್ಗಿಸಿತ್ತು. ಆದರೆ, ಅವರು ಛಲ ಬಿಡದೆ ಈ ವಾರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಈ ವಾರದ ಕ್ಯಾಪ್ಟನ್​ ಆಗಿದ್ದಾರೆ. ಸದ್ಯ, ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭಾಶಯಗಳ ಮಳೆ ಹರಿದು ಬರುತ್ತಿದೆ.

ಇದನ್ನೂ ಓದಿ: ಆಗಸ್ಟ್​ 8ರಿಂದ ಹಿಂದಿ ಬಿಗ್​ ಬಾಸ್​ ಸೀಸನ್​ 15; ಆದರೆ, ಟಿವಿಯಲ್ಲಿ ಇದನ್ನು ನೋಡೋಕಾಗಲ್ಲ

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ