AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೆ ನೇರವಾಗಿ ಆಯ್ಕೆಯಾದ ದಿವ್ಯಾ ಉರುಡುಗ; ಮಂಜು-ಅರವಿಂದ್ ಅವರನ್ನು ಬೀಟ್​ ಮಾಡಿದ್ದು ಹೇಗೆ?

ಈ ವಾರ ಬಿಗ್​ ಬಾಸ್​ ಮನೆಯಲ್ಲಿ​ ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹತೆ ಪಡೆದುಕೊಳ್ಳಲು ಬಿಗ್​ ಬಾಸ್​ ‘ನೀನಾ ನಾನಾ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಇದರಡಿಯಲ್ಲಿ ನೀಡಿದ ಪ್ರತಿ ಟಾಸ್ಕ್​ಗಳೂ ವೈಯಕ್ತಿಕ ಟಾಸ್ಕ್​ಗಳೇ.

ಬಿಗ್​ ಬಾಸ್​ ಫಿನಾಲೆಗೆ ನೇರವಾಗಿ ಆಯ್ಕೆಯಾದ ದಿವ್ಯಾ ಉರುಡುಗ; ಮಂಜು-ಅರವಿಂದ್ ಅವರನ್ನು ಬೀಟ್​ ಮಾಡಿದ್ದು ಹೇಗೆ?
ದಿವ್ಯಾ ಉರುಡುಗ - ಅರವಿಂದ್​ ಕೆಪಿ
TV9 Web
| Edited By: |

Updated on: Jul 23, 2021 | 3:09 PM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಸ್ಟ್ರಾಂಗ್​ ಕಂಟೆಸ್ಟೆಂಟ್​ ಆಗಿ ಗುರುತಿಸಿಕೊಂಡಿದ್ದಾರೆ. ಸೀಸನ್​ 8ರ ಮೊದಲ ಮಹಿಳಾ ಕ್ಯಾಪ್ಟನ್​ ಆಗುವ ಮೂಲಕ ಹೊಸ ದಾಖಲೆಯನ್ನು ಅವರು ಬರೆದಿದ್ದರು. ಈಗ ಸೀಸನ್​8ರಲ್ಲಿ ಫಿನಾಲೆಗೆ ಏರಿದ ಮೊದಲ ಸ್ಪರ್ಧಿ ಇವರೇ ಅನ್ನೋದು ವಿಶೇಷ. ಈ ಮೂಲಕ ದಿವ್ಯಾ ಫಿನಾಲೆಗೆ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. 

ಈ ವಾರ ಬಿಗ್​ ಬಾಸ್​ ಮನೆಯಲ್ಲಿ​ ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹತೆ ಪಡೆದುಕೊಳ್ಳಲು ಬಿಗ್​ ಬಾಸ್​ ‘ನೀನಾ ನಾನಾ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಇದರಡಿಯಲ್ಲಿ ನೀಡಿದ ಪ್ರತಿ ಟಾಸ್ಕ್​ಗಳೂ ವೈಯಕ್ತಿಕ ಟಾಸ್ಕ್​ಗಳೇ. ಕಳೆದ ವಾರ ದಿವ್ಯಾ ಕೈಗೆ ಪೆಟ್ಟಾಗಿತ್ತು. ಹೀಗಾಗಿ, ಈ ವಾರ ಅವರಿಗೆ ಆಡೋದು ಬಹಳ ಕಷ್ಟವಾಗಿತ್ತು. ಆದರೆ, ಇದೆಲ್ಲವನ್ನೂ ಮೀರಿ ದಿವ್ಯಾ ಈ ವಾರ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಸ್ಟ್ರಾಂಗ್​ ಕಂಟೆಸ್ಟಂಟ್​ಗಳ ಎದುರು ಅವರು ಗೆದ್ದು ಕ್ಯಾಪ್ಟನ್​ ಆಗಿದ್ದಾರೆ ಎನ್ನಲಾಗಿದೆ.

ಈ ವಾರ ಹೊರತು ಪಡಿಸಿದರೆ ಬಿಗ್​ ಬಾಸ್​ ಮನೆಯಲ್ಲಿ ಉಳಿದಿರೋದು ಕೇವಲ ಎರಡು ವಾರ ಮಾತ್ರ. ಕ್ಯಾಪ್ಟನ್​ ಆದವರನ್ನು ನಾಮಿನೇಟ್​ ಮಾಡುವಂತಿಲ್ಲ. ಹೀಗಾಗಿ, ದಿವ್ಯಾ ಉರುಡುಗ ಮುಂದಿನ ವಾರದ ನಾಮಿನೇಷನ್​ನಿಂದ ಬವಾವ್​ ಆಗಲಿದ್ದಾರೆ. ನಂತರ ಉಳಿಯೋದು ಒಂದು ವಾರ ಮಾತ್ರ. ಹೀಗಾಗಿ, ಈ ವಾರ ಕ್ಯಾಪ್ಟನ್​ ಆಗುವ ಮೂಲಕ ದಿವ್ಯಾ ಉರುಡುಗ ಫಿನಾಲೆಗೆ ನೇರವಾಗಿ ಆಯ್ಕೆ ಆದಂತಾಗಿದೆ. ಈ ವಾರ ಅವರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಸ್ಟ್ರಾಂಗ್​ ಕಂಟೆಸ್ಟಂಟ್​ ಎನಿಸಿಕೊಂಡಿರುವುದರಿಂದ ಅವರು ಸೇವ್​ ಆಗೋದು ಬಹುತೇಕ ಖಚಿತವಾಗಿದೆ.

ಇನ್ನು, ಈ ವಾರ ದಿವ್ಯಾ ಪ್ರಯಾಣ ಅಷ್ಟು ಸುಲಭವಾಗಿರಲಿಲ್ಲ. ಈ ವಾರ ಅವರ ಕೈಗೆ ಪೆಟ್ಟಾಗಿತ್ತು. ಅಷ್ಟೇ ಅಲ್ಲ, ಆಪ್ತ ಎನಿಸಿಕೊಂಡಿದ್ದ ಅರವಿಂದ್​ ಕೆ.ಪಿ ಅವರು ದಿವ್ಯಾ ಉರುಡುಗ ವಿರುದ್ಧ ತಿರುಗಿ ಬಿದ್ದಿದ್ದರು. ಇಬ್ಬರ ನಡುವೆ ಮನಸ್ತಾಪ ಕೂಡ ಉಂಟಾಗಿತ್ತು. ಇದು ದಿವ್ಯಾ ಅವರನ್ನು ಮಾನಸಿಕವಾಗಿ ಕುಗ್ಗಿಸಿತ್ತು. ಆದರೆ, ಅವರು ಛಲ ಬಿಡದೆ ಈ ವಾರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಈ ವಾರದ ಕ್ಯಾಪ್ಟನ್​ ಆಗಿದ್ದಾರೆ. ಸದ್ಯ, ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭಾಶಯಗಳ ಮಳೆ ಹರಿದು ಬರುತ್ತಿದೆ.

ಇದನ್ನೂ ಓದಿ: ಆಗಸ್ಟ್​ 8ರಿಂದ ಹಿಂದಿ ಬಿಗ್​ ಬಾಸ್​ ಸೀಸನ್​ 15; ಆದರೆ, ಟಿವಿಯಲ್ಲಿ ಇದನ್ನು ನೋಡೋಕಾಗಲ್ಲ

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ