AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ‘ಮನೆಯೊಳಗೆ ಇದ್ದಾಗ ನನ್ನ ಮಗಳು ಅಂತಾರೆ, ಆದರೆ ಹೊರಗೆ..’: ಗುರೂಜಿ ಮೇಲೆ ದಿವ್ಯಾ ಗರಂ

Aryavardhan Guruji | BBK 9: ತಮ್ಮ ಮಾತನ್ನು ಸಮರ್ಥಿಸಿಕೊಳ್ಳಲು ಆರ್ಯವರ್ಧನ್​ ಗುರೂಜಿ ಮುಂದಾದರು. ‘ರೀ ಸುಮ್ಮನೆ ಕುಳಿತುಕೊಳ್ರಿ’ ಎಂದು ದಿವ್ಯಾ ಉರುಡುಗ ಏರುಧ್ವನಿಯಲ್ಲಿ ಮಾತನಾಡಿದರು.

Divya Uruduga: ‘ಮನೆಯೊಳಗೆ ಇದ್ದಾಗ ನನ್ನ ಮಗಳು ಅಂತಾರೆ, ಆದರೆ ಹೊರಗೆ..’: ಗುರೂಜಿ ಮೇಲೆ ದಿವ್ಯಾ ಗರಂ
ದಿವ್ಯಾ ಉರುಡುಗ, ಆರ್ಯವರ್ಧನ್ ಗುರೂಜಿ
TV9 Web
| Edited By: |

Updated on: Dec 31, 2022 | 3:46 PM

Share

ನಟಿ ದಿವ್ಯಾ ಉರುಡುಗ (Divya Uruduga) ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ. ಟಾಪ್​ 5ರ ತನಕ ಬಂದ ಅವರು ಫಿನಾಲೆ (BBK 9 Finale) ಸಂಚಿಕೆಯಲ್ಲಿ ಎಲಿಮಿನೇಟ್​ ಆಗಬೇಕಾಯಿತು. 4ನೇ ರನ್ನರ್​ ಅಪ್​ ಆಗಿ ಹೊರಬಂದ ಅವರನ್ನು ಕಿಚ್ಚ ಸುದೀಪ್​ ಅವರು ವೇದಿಕೆ ಮೇಲೆ ಮಾತನಾಡಿಸಿದರು. ಈ ವೇಳೆ ದಿವ್ಯಾ ಉರುಡುಗ ಬಗ್ಗೆ ಪ್ರಶಾಂತ್​ ಸಂಬರ್ಗಿ ಮತ್ತು ಆರ್ಯವರ್ಧನ್​ ಗುರೂಜಿ (Aryavardhan Guruji) ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗುರೂಜಿ ಹೇಳಿದ ಮಾತುಗಳು ದಿವ್ಯಾಗೆ ಹಿಡಿಸಲಿಲ್ಲ. ಅದಕ್ಕೆ ಅವರು ವೇದಿಕೆಯಲ್ಲೇ ಗರಂ ಆದರು. ಸುದೀಪ್​ ಎದುರಲ್ಲಿ ಆರ್ಯವರ್ಧನ್​ ಬಗ್ಗೆ ದಿವ್ಯಾ ಕೆಲವು ಆರೋಪಗಳನ್ನು ಮಾಡಿದರು.

ದಿವ್ಯಾ ಉರುಡುಗ ಅವರು ಅದೃಷ್ಟದ ಬಲದಿಂದ ಫಿನಾಲೆ ತನಕ ಬಂದಿದ್ದಾರೆ ಎಂಬುದು ಪ್ರಶಾಂತ್​ ಸಂಬರ್ಗಿ ಅವರ ಅಭಿಪ್ರಾಯ. ಅದೇ ಮಾತಿಗೆ ಆರ್ಯವರ್ಧನ್​ ಗುರೂಜಿ ಕೂಡ ಸಹಮತ ಸೂಚಿಸಿದರು. ಇದು ದಿವ್ಯಾ ಅವರ ಕೋಪಕ್ಕೆ ಕಾರಣ ಆಯಿತು. ತಾವು ಅದೃಷ್ಟದಿಂದ ಫಿನಾಲೆ ತಲುಪಿದ್ದಲ್ಲ ಎಂದು ಮೊದಲಿಗೆ ದಿವ್ಯಾ ಸ್ಪಷ್ಟಪಡಿಸಿದರು. ಅಲ್ಲದೇ, ಸಂಬರ್ಗಿಯ ಮಾತಿಗೆ ಹೌದು ಎಂಬಂತೆ ಧ್ವನಿ ಗೂಡಿಸಿದ ಆರ್ಯವರ್ಧನ್​ ಅವರನ್ನು ದಿವ್ಯಾ ನೇರವಾಗಿ ಟೀಕಿಸಿದರು.

ಇದನ್ನೂ ಓದಿ: Roopesh Shetty: ‘ಬಿಗ್​ ಬಾಸ್​ನಿಂದ ಹೊರಬಂದು ಸಾನ್ಯಾನ ತಬ್ಬಿಕೊಂಡು ಈ ವಿಚಾರ ಫಸ್ಟ್​ ಕೇಳ್ತೀನಿ’: ರೂಪೇಶ್​ ಶೆಟ್ಟಿ ಮನದ ಮಾತು

ಇದನ್ನೂ ಓದಿ
Image
Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ
Image
Aryavardhan Guruji: ಕನ್ನಡ ಓದಲು ಕಷ್ಟಪಟ್ಟ ಗುರೂಜಿ; ಸಹಾಯ ಮಾಡಿದ ರಾಕೇಶ್​: ಇಲ್ಲಿದೆ ವಿಡಿಯೋ
Image
ಮೀಸೆ, ತಲೆ ಬೋಳಿಸಿಕೊಂಡ ಆರ್ಯವರ್ಧನ್​; ಗುರೂಜಿ ಹೊಸ ಲುಕ್ ಹೇಗಿದೆ ನೋಡಿ
Image
ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು

‘ಮನೆಯೊಳಗೆ ಇದ್ದಾಗ ಇವರು ನನಗೆ ಮಗಳೇ ಅಂತಾರೆ. ಆದರೆ ಇಲ್ಲಿ ಕುಳಿತುಕೊಂಡು ಹಂಗೆ, ಹಿಂಗೆ ಅಂತಾರೆ’ ಎಂದರು ದಿವ್ಯಾ ಉರುಡುಗ. ತಮ್ಮ ಮಾತನ್ನು ಸಮರ್ಥಿಸಿಕೊಳ್ಳಲು ಆರ್ಯವರ್ಧನ್​ ಗುರೂಜಿ ಮುಂದಾದರು. ‘ರೀ ಸುಮ್ಮನೆ ಕುಳಿತುಕೊಳ್ರಿ’ ಎಂದು ಏರುಧ್ವನಿಯಲ್ಲಿ ದಿವ್ಯಾ ಮಾತನಾಡಿದರು.  ಬಿಗ್​ ಬಾಸ್​ ಫಿನಾಲೆಯ ವೇದಿಕೆ ಮೇಲೆ ನಡೆದ ಈ ಮಾತಿನ ಚಕಮಕಿಯಿಂದ ಎಲ್ಲರಿಗೂ ನಗು ಮೂಡಿತು.

ಇದನ್ನೂ ಓದಿ: Bigg Boss Finale: ಬಿಗ್​ ಬಾಸ್​ ಫಿನಾಲೆಗಾಗಿ ವಿಶೇಷ ಗೆಟಪ್​ನೊಂದಿಗೆ ಕ್ಯಾಮೆರಾ ಮುಂದೆ ಬಂದ ರಾಕೇಶ್​ ಅಡಿಗ

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿಸಿದ್ದ ದಿವ್ಯಾ ಉರುಡುಗ ಅವರು ಆಗಲೂ ಫಿನಾಲೆ ತನಕ ಬಂದು ಔಟ್​ ಆಗಿದ್ದರು. 9ನೇ ಸೀಸನ್​ನಲ್ಲಾದರೂ ಟ್ರೋಫಿ ಗೆಲ್ಲಬೇಕು ಎಂದುಕೊಂಡಿದ್ದ ಅವರ ಕನಸು ಭಗ್ನವಾಯಿತು. ಒಟ್ಟಿನಲ್ಲಿ ಎರಡು ಬಾರಿ ಫಿನಾಲೆ ತಲುಪಿದ ಏಕೈಕ ಸ್ಪರ್ಧಿ ಎಂಬ ದಾಖಲೆ ಅವರ ಹೆಸರಿನಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?