AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ‘ಮನೆಯೊಳಗೆ ಇದ್ದಾಗ ನನ್ನ ಮಗಳು ಅಂತಾರೆ, ಆದರೆ ಹೊರಗೆ..’: ಗುರೂಜಿ ಮೇಲೆ ದಿವ್ಯಾ ಗರಂ

Aryavardhan Guruji | BBK 9: ತಮ್ಮ ಮಾತನ್ನು ಸಮರ್ಥಿಸಿಕೊಳ್ಳಲು ಆರ್ಯವರ್ಧನ್​ ಗುರೂಜಿ ಮುಂದಾದರು. ‘ರೀ ಸುಮ್ಮನೆ ಕುಳಿತುಕೊಳ್ರಿ’ ಎಂದು ದಿವ್ಯಾ ಉರುಡುಗ ಏರುಧ್ವನಿಯಲ್ಲಿ ಮಾತನಾಡಿದರು.

Divya Uruduga: ‘ಮನೆಯೊಳಗೆ ಇದ್ದಾಗ ನನ್ನ ಮಗಳು ಅಂತಾರೆ, ಆದರೆ ಹೊರಗೆ..’: ಗುರೂಜಿ ಮೇಲೆ ದಿವ್ಯಾ ಗರಂ
ದಿವ್ಯಾ ಉರುಡುಗ, ಆರ್ಯವರ್ಧನ್ ಗುರೂಜಿ
TV9 Web
| Updated By: ಮದನ್​ ಕುಮಾರ್​|

Updated on: Dec 31, 2022 | 3:46 PM

Share

ನಟಿ ದಿವ್ಯಾ ಉರುಡುಗ (Divya Uruduga) ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ. ಟಾಪ್​ 5ರ ತನಕ ಬಂದ ಅವರು ಫಿನಾಲೆ (BBK 9 Finale) ಸಂಚಿಕೆಯಲ್ಲಿ ಎಲಿಮಿನೇಟ್​ ಆಗಬೇಕಾಯಿತು. 4ನೇ ರನ್ನರ್​ ಅಪ್​ ಆಗಿ ಹೊರಬಂದ ಅವರನ್ನು ಕಿಚ್ಚ ಸುದೀಪ್​ ಅವರು ವೇದಿಕೆ ಮೇಲೆ ಮಾತನಾಡಿಸಿದರು. ಈ ವೇಳೆ ದಿವ್ಯಾ ಉರುಡುಗ ಬಗ್ಗೆ ಪ್ರಶಾಂತ್​ ಸಂಬರ್ಗಿ ಮತ್ತು ಆರ್ಯವರ್ಧನ್​ ಗುರೂಜಿ (Aryavardhan Guruji) ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗುರೂಜಿ ಹೇಳಿದ ಮಾತುಗಳು ದಿವ್ಯಾಗೆ ಹಿಡಿಸಲಿಲ್ಲ. ಅದಕ್ಕೆ ಅವರು ವೇದಿಕೆಯಲ್ಲೇ ಗರಂ ಆದರು. ಸುದೀಪ್​ ಎದುರಲ್ಲಿ ಆರ್ಯವರ್ಧನ್​ ಬಗ್ಗೆ ದಿವ್ಯಾ ಕೆಲವು ಆರೋಪಗಳನ್ನು ಮಾಡಿದರು.

ದಿವ್ಯಾ ಉರುಡುಗ ಅವರು ಅದೃಷ್ಟದ ಬಲದಿಂದ ಫಿನಾಲೆ ತನಕ ಬಂದಿದ್ದಾರೆ ಎಂಬುದು ಪ್ರಶಾಂತ್​ ಸಂಬರ್ಗಿ ಅವರ ಅಭಿಪ್ರಾಯ. ಅದೇ ಮಾತಿಗೆ ಆರ್ಯವರ್ಧನ್​ ಗುರೂಜಿ ಕೂಡ ಸಹಮತ ಸೂಚಿಸಿದರು. ಇದು ದಿವ್ಯಾ ಅವರ ಕೋಪಕ್ಕೆ ಕಾರಣ ಆಯಿತು. ತಾವು ಅದೃಷ್ಟದಿಂದ ಫಿನಾಲೆ ತಲುಪಿದ್ದಲ್ಲ ಎಂದು ಮೊದಲಿಗೆ ದಿವ್ಯಾ ಸ್ಪಷ್ಟಪಡಿಸಿದರು. ಅಲ್ಲದೇ, ಸಂಬರ್ಗಿಯ ಮಾತಿಗೆ ಹೌದು ಎಂಬಂತೆ ಧ್ವನಿ ಗೂಡಿಸಿದ ಆರ್ಯವರ್ಧನ್​ ಅವರನ್ನು ದಿವ್ಯಾ ನೇರವಾಗಿ ಟೀಕಿಸಿದರು.

ಇದನ್ನೂ ಓದಿ: Roopesh Shetty: ‘ಬಿಗ್​ ಬಾಸ್​ನಿಂದ ಹೊರಬಂದು ಸಾನ್ಯಾನ ತಬ್ಬಿಕೊಂಡು ಈ ವಿಚಾರ ಫಸ್ಟ್​ ಕೇಳ್ತೀನಿ’: ರೂಪೇಶ್​ ಶೆಟ್ಟಿ ಮನದ ಮಾತು

ಇದನ್ನೂ ಓದಿ
Image
Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ
Image
Aryavardhan Guruji: ಕನ್ನಡ ಓದಲು ಕಷ್ಟಪಟ್ಟ ಗುರೂಜಿ; ಸಹಾಯ ಮಾಡಿದ ರಾಕೇಶ್​: ಇಲ್ಲಿದೆ ವಿಡಿಯೋ
Image
ಮೀಸೆ, ತಲೆ ಬೋಳಿಸಿಕೊಂಡ ಆರ್ಯವರ್ಧನ್​; ಗುರೂಜಿ ಹೊಸ ಲುಕ್ ಹೇಗಿದೆ ನೋಡಿ
Image
ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು

‘ಮನೆಯೊಳಗೆ ಇದ್ದಾಗ ಇವರು ನನಗೆ ಮಗಳೇ ಅಂತಾರೆ. ಆದರೆ ಇಲ್ಲಿ ಕುಳಿತುಕೊಂಡು ಹಂಗೆ, ಹಿಂಗೆ ಅಂತಾರೆ’ ಎಂದರು ದಿವ್ಯಾ ಉರುಡುಗ. ತಮ್ಮ ಮಾತನ್ನು ಸಮರ್ಥಿಸಿಕೊಳ್ಳಲು ಆರ್ಯವರ್ಧನ್​ ಗುರೂಜಿ ಮುಂದಾದರು. ‘ರೀ ಸುಮ್ಮನೆ ಕುಳಿತುಕೊಳ್ರಿ’ ಎಂದು ಏರುಧ್ವನಿಯಲ್ಲಿ ದಿವ್ಯಾ ಮಾತನಾಡಿದರು.  ಬಿಗ್​ ಬಾಸ್​ ಫಿನಾಲೆಯ ವೇದಿಕೆ ಮೇಲೆ ನಡೆದ ಈ ಮಾತಿನ ಚಕಮಕಿಯಿಂದ ಎಲ್ಲರಿಗೂ ನಗು ಮೂಡಿತು.

ಇದನ್ನೂ ಓದಿ: Bigg Boss Finale: ಬಿಗ್​ ಬಾಸ್​ ಫಿನಾಲೆಗಾಗಿ ವಿಶೇಷ ಗೆಟಪ್​ನೊಂದಿಗೆ ಕ್ಯಾಮೆರಾ ಮುಂದೆ ಬಂದ ರಾಕೇಶ್​ ಅಡಿಗ

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿಸಿದ್ದ ದಿವ್ಯಾ ಉರುಡುಗ ಅವರು ಆಗಲೂ ಫಿನಾಲೆ ತನಕ ಬಂದು ಔಟ್​ ಆಗಿದ್ದರು. 9ನೇ ಸೀಸನ್​ನಲ್ಲಾದರೂ ಟ್ರೋಫಿ ಗೆಲ್ಲಬೇಕು ಎಂದುಕೊಂಡಿದ್ದ ಅವರ ಕನಸು ಭಗ್ನವಾಯಿತು. ಒಟ್ಟಿನಲ್ಲಿ ಎರಡು ಬಾರಿ ಫಿನಾಲೆ ತಲುಪಿದ ಏಕೈಕ ಸ್ಪರ್ಧಿ ಎಂಬ ದಾಖಲೆ ಅವರ ಹೆಸರಿನಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ