AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್​ ಸ್ಟಾರ್​ ರಚ್ಚು ಆದ ದಿವ್ಯಾ ಉರುಡುಗ; ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಹೊಸ ಸೀರಿಯಲ್​

‘ನಿನಗಾಗಿ’ ಧಾರಾವಾಹಿಯಲ್ಲಿ ದಿವ್ಯಾ ಉರುಡುಗ ಅವರು ರಚನಾ ಅಲಿಯಾಸ್​ ಲೇಡಿ ಸೂಪರ್​ ಸ್ಟಾರ್​ ರಚ್ಚು ಎಂಬ ಪಾತ್ರ ಮಾಡುತ್ತಿದ್ದಾರೆ. ಆ ಪಾತ್ರದ ಸುತ್ತವೇ ಕಥೆ ಸಾಗಲಿದೆ. ಮೇ 27ರಿಂದ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಶುರು ಆಗಲಿದೆ. ಈ ಕುರಿತು ಮಾಹಿತಿ ನೀಡಲು ‘ನಿನಗಾಗಿ’ ಟೀಮ್​ ಸುದ್ದಿಗೋಷ್ಠಿ ನಡೆಸಿತು.

ಸೂಪರ್​ ಸ್ಟಾರ್​ ರಚ್ಚು ಆದ ದಿವ್ಯಾ ಉರುಡುಗ; ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಹೊಸ ಸೀರಿಯಲ್​
ದಿವ್ಯಾ ಉರುಡುಗ, ರಿತ್ವಿಕ್ ಮಠದ್
ಮದನ್​ ಕುಮಾರ್​
|

Updated on: May 19, 2024 | 1:22 PM

Share

ನಟಿ ದಿವ್ಯಾ ಉರುಡುಗ ಅವರು ‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋ ಮೂಲಕ ಕಿರುತೆರೆ ಪ್ರೇಕ್ಷಕರ ಮನ ಗೆದ್ದಿದ್ದರು. ಈಗ ಅವರು ಕಿರುತೆರೆ ಪ್ರೇಕ್ಷಕರಿಗೆ ಇನ್ನಷ್ಟು ಹತ್ತಿರ ಆಗಲಿದ್ದಾರೆ. ‘ಕಲರ್ಸ್​ ಕನ್ನಡ’ (Colors Kannada) ವಾಹಿನಿಯ ಹೊಸ ಧಾರಾವಾಹಿಯಲ್ಲಿ ದಿವ್ಯಾ ಉರುಡುಗ (Divya Uruduga) ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ‘ನಿನಗಾಗಿ’ (Ninagagi) ಎಂಬುದು ಈ ಹೊಸ ಸೀರಿಯಲ್​ನ ಶೀರ್ಷಿಕೆ. ಇದರಲ್ಲಿ ಅವರ ಜೊತೆ ‘ಗಿಣಿರಾಮ’ ಸೀರಿಯಲ್​ ಖ್ಯಾತಿಯ ನಟ ರಿತ್ವಿಕ್ ಮಠದ್ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಈ ಹೊಸ ಧಾರಾವಾಹಿ ಬಗ್ಗೆ ಇಲ್ಲಿದೆ ಮಾಹಿತಿ..

ಇತ್ತೀಚೆಗೆ ‘ನಿನಗಾಗಿ’ ತಂಡದವರು ಸುದ್ದಿಗೋಷ್ಠಿ ನಡೆಸಿ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಬೇರೆ ಬೇರೆ ವ್ಯಕ್ತಿತ್ವದ ಇಬ್ಬರು ಜೊತೆಯಾಗಿ ಸಾಗುವ ಕಥೆಯನ್ನು ‘ನಿನಗಾಗಿ’ ಸೀರಿಯಲ್​ ಹೊಂದಿರಲಿದೆ. ಮೇ 27ರಿಂದ ಈ ಧಾರಾವಾಹಿ ಪ್ರಸಾರ ಆರಂಭ ಆಗಲಿದೆ. ಸೋಮವಾರದಿಂದ ಶುಕ್ರವಾರ ರಾತ್ರಿ 8 ಗಂಟೆಗೆ ‘ನಿನಗಾಗಿ’ ಧಾರಾವಾಹಿ ಪ್ರಸಾರ ಆಗಲಿದೆ.

‘ಈ ಹಿಂದೆ ನನ್ನನ್ನು ಶಿವರಾಮ್ ಪಾತ್ರದಲ್ಲಿ ಮಾಸ್‌ ಆಗಿ ನೋಡಿದ್ದೀರಿ. ಆದರೆ ಈಗ ಆ ರೀತಿಯ ಮಾಸ್ ಗುಣಗಳು ಹೊಸ ಧಾರಾವಾಹಿಯ ಪಾತ್ರದಲ್ಲಿ ಇರುವುದಿಲ್ಲ. ಬಹಳ ಸರಳ ವ್ಯಕ್ತಿಯಾಗಿ ಕಾಣಿಸಿಕೊಳ್ಳುತ್ತೇನೆ. ಒಂದು ಮಗುವಿನ ತಂದೆ ಪಾತ್ರ. ದುಡ್ಡಿನ ಹಿಂದೆ ಹೋಗುವ ಮನುಷ್ಯ ಇವನಲ್ಲ. ಅಂಥ ಪಾತ್ರವನ್ನು ಮಾಡುತ್ತಿದ್ದೇನೆ’ ಎಂದಿದ್ದಾರೆ ರಿತ್ವಿಕ್ ಮಠದ್.

ಈ ಧಾರಾವಾಹಿಗೆ ಸಂಪಥ್ವಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಒಂದು ಒಳ್ಳೆಯ ಪ್ರಾಜೆಕ್ಟ್ ತೆಗೆದುಕೊಂಡು ಬಂದಿದ್ದೇನೆ ಅಂತ ಹೆಮ್ಮೆಯಿಂದ ಹೇಳುತ್ತೇನೆ. ಈ ಧಾರಾವಾಹಿ ಬಹಳ ಸ್ಕೋರ್ ಮಾಡುತ್ತದೆ. ಜೈ ಮಾತಾ ಕಂಬೈನ್ಸ್​ ಅಶ್ವಿನಿ‌ ಅವರು ನಮಗೆ ಬೆಂಬಲವಾಗಿ ನಿಂತಿದ್ದಾರೆ. ಇಡೀ‌ ಕಲರ್ಸ್ ಕನ್ನಡದ ತಂಡ ನಮ್ಮ ಬೆಂಬಲಕ್ಕೆ ಇದೆ. ಪ್ರೋವೋ ನೋಡಿ ಜನರು ಇಷ್ಟಪಟ್ಟಿದ್ದಾರೆ. ನಾನು ಈ ಮೊದಲು ‘ನಮ್ಮನೆ ಯುವರಾಣಿ’ ಧಾರಾವಾಹಿ ಮಾಡಿದ್ದೆ. ಈಗ ಹೊಸ ಕಥೆ ಹೇಳಲಿದ್ದೇನೆ’ ಎಂದಿದ್ದಾರೆ ನಿರ್ದೇಶಕರು.

ಇದನ್ನೂ ಓದಿ: ಟ್ರೆಡಿಷನಲ್​ ಲುಕ್​ನಲ್ಲಿ ಕಣ್ಣು ಕುಕ್ಕಿದ ದಿವ್ಯಾ ಉರುಡುಗ

‘ನಿನಗಾಗಿ’ ಧಾರಾವಾಹಿಯಲ್ಲಿ ನಟಿಸುತ್ತಿರುವುದಕ್ಕೆ ದಿವ್ಯಾ ಉರುಡುಗ ಖುಷಿ ವ್ಯಕ್ತಪಡಿಸಿದ್ದಾರೆ. ‘ರಚ್ಚು ಎಂಬ ಮುದ್ದಾದ ಹುಡುಗಿ ಪಾತ್ರ ನನ್ನದು. ಆಕೆ ಸೂಪರ್ ಸ್ಟಾರ್. ಆದರೂ ಸರಳವಾಗಿ ಜೀವನ ಮಾಡುವ ಕನಸು ಕಾಣುತ್ತಾಳೆ. ಅಮ್ಮನ ಮಾತೇ ಆಕೆಗೆ ವೇದ ವಾಕ್ಯ.‌ ಅಂತಹ ಪಾತ್ರ ನನಗೆ ಸಿಕ್ಕಿದೆ. ಸಿನಿಮಾದ ರೀತಿಯಲ್ಲೇ ಈ ಧಾರಾವಾಹಿ ಚಿತ್ರೀಕರಣ ನಡೆಯುತ್ತಿದೆ’ ಎಂದು ದಿವ್ಯಾ ಉರುಡುಗ ಹೇಳಿದ್ದಾರೆ.

‘ಭಾಗ್ಯಲಕ್ಷ್ಮಿ’, ‘ಕನ್ನಡತಿ’, ‘ನಮ್ಮನೆ ಯುವರಾಣಿ’ ರೀತಿಯ ಸೂಪರ್ ಹಿಟ್ ಧಾರಾವಾಹಿಗಳನ್ನು ನಿರ್ಮಾಣ ಮಾಡಿದ ‘ಜೈ ಮಾತಾ ಕಂಬೈನ್ಸ್’ ಸಂಸ್ಥೆಯು ‘ನಿನಗಾಗಿʼ ಸೀರಿಯಲ್​ ನಿರ್ಮಿಸುತ್ತಿದೆ. ರಿತ್ವಿಕ್ ಮಠದ್, ದಿವ್ಯಾ ಉರುಡುಗ ಜೊತೆ ಪ್ರಿಯಾಂಕಾ ಕಾಮತ್, ವಿಜಯ್ ಕೌಂಡಿನ್ಯ, ಕಿಶನ್ ಬಿಳಗಲಿ, ಸಿರಿ ಸಿಂಚನಾ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ