AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೀಕೆಂಡ್ ವಿತ್ ರಮೇಶ್’ನಲ್ಲಿ ತಮ್ಮನ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ ಡಿಕೆ ಶಿವಕುಮಾರ್​

DK Shivakumar: ಸಹೋದರ ಡಿಕೆ ಸುರೇಶ್ ಬಗ್ಗೆ ಶಿವಕುಮಾರ್​ಗೆ ವಿಶೇಷ ಪ್ರೀತಿ ಇದೆ. ಇದು ಅನೇಕ ಬಾರಿ ಸಾಬೀತಾಗಿದೆ. ತಮ್ಮನ ಜೊತೆಗಿನ ಒಡನಾಟದ ಕುರಿತು ಮಾತನಾಡುವಾಗ ಡಿಕೆಶಿ ಭಾವುಕರಾಗಿ ಕಣ್ಣೀರು ಹಾಕಿದರು.

‘ವೀಕೆಂಡ್ ವಿತ್ ರಮೇಶ್’ನಲ್ಲಿ ತಮ್ಮನ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ ಡಿಕೆ ಶಿವಕುಮಾರ್​
ಡಿಕೆ ಸುರೇಶ್​-ಡಿಕೆ ಶಿವಕುಮಾರ್
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Jun 07, 2023 | 12:16 PM

Share

ಡಿ.ಕೆ. ಶಿವಕುಮಾರ್ ಅವರು ‘ವೀಕೆಂಡ್ ವಿತ್ ರಮೇಶ್​​’ನ (Weekend With Ramesh) ಈ ವಾರದ ಎಪಿಸೋಡ್​ಗೆ ಬರುತ್ತಿದ್ದಾರೆ. ಶನಿವಾರ ಹಾಗೂ ಭಾನುವಾರ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಡಿಕೆಶಿ ಅವರ ಜೀವನವನ್ನು ಜನರ ಮುಂದಿಡುವ ಕೆಲಸ ಆಗಲಿದೆ. ಇದು ‘ವೀಕೆಂಡ್ ವಿತ್ ರಮೇಶ್ ಸೀಸನ್​ 5’ರ ಕೊನೆಯ ಎಪಿಸೋಡ್ ಆದ ಕಾರಣ ಹೆಚ್ಚು ಪ್ರಮೋಷನ್ ಮಾಡಲಾಗುತ್ತಿದೆ. ಜೀ ಕನ್ನಡ ವಾಹಿನಿ ವಿವಿಧ ಪ್ರೋಮೋ ಹಂಚಿಕೊಳ್ಳುತ್ತಿದೆ. ಈಗ ಡಿಕೆ ಶಿವಕುಮಾರ್ (DK Shivakumar) ಅವರು ತಮ್ಮ ಕುಟುಂಬದ ಬಗ್ಗೆ ಮಾತನಾಡಿದ್ದಾರೆ.

ಸಹೋದರ ಡಿಕೆ ಸುರೇಶ್ ಬಗ್ಗೆ ಶಿವಕುಮಾರ್​ಗೆ ವಿಶೇಷ ಪ್ರೀತಿ ಇದೆ. ಇದು ಅನೇಕ ಬಾರಿ ಸಾಬೀತಾಗಿದೆ. ಇಬ್ಬರೂ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರೆ, ಸುರೇಶ್ ಬೆಂಗಳೂರು ಗ್ರಾಮಾಂತರದಲ್ಲಿ ಸ್ಪರ್ಧಿಸಿದ್ದಾರೆ. ತಮ್ಮನ ಜೊತೆಗಿನ ಒಡನಾಟದ ಕುರಿತು ಮಾತನಾಡುವಾಗ ಡಿಕೆಶಿ ಭಾವುಕರಾಗಿ ಕಣ್ಣೀರು ಹಾಕಿದರು.

ಇದನ್ನೂ ಓದಿ: ಹೊರಗೆ ಟಫ್ ಆಗಿರೋ ಡಿಕೆ ಶಿವಕುಮಾರ್​ ಮನೆಯಲ್ಲಿ ಹೇಗಿರ್ತಾರೆ?; ವೀಕೆಂಡ್​ ವಿತ್ ರಮೇಶ್​ನಲ್ಲಿ ವಿವರಿಸಿದ ಮಗಳು ಐಶ್ವರ್ಯಾ

‘ನಾವು ಮೂರು ಜನರು ಒಟ್ಟಿಗೆ ಇರೋಕೆ ಆಗಲೇ ಇಲ್ಲ. ನನ್ನ ಅಂತರಾಳ ಅನೇಕರಿಗೆ ಗೊತ್ತಿಲ್ಲ. ಅವನು ನನ್ನ ತಮ್ಮ ಆದರೂ ಮಗ ಇದ್ದ ಹಾಗೆ’ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ ಡಿಕೆ ಶಿವಕುಮಾರ್. ಡಿಕೆ ಶಿವಕುಮಾರ್ ಓದಿ ಒಳ್ಳೆಯ ಕೆಲಸ ಹಿಡಿಯಬೇಕು ಎಂಬುದು ಅವರ ಪಾಲಕರ ಕನಸಾಗಿತ್ತು. ಆದರೆ ಅವರು ಓದಲೇ ಇಲ್ಲ. ಇದನ್ನು ಅವರು ಹೇಳಿಕೊಂಡಿದ್ದಾರೆ. ಅವರ ಕುಟುಂಬದವರು ‘ವೀಕೆಂಡ್ ವಿತ್ ರಮೇಶ್’ ವೇದಿಕೆ ಏರಿದ್ದಾರೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಡಿಕೆ ಶಿವಕುಮಾರ್​​ನ ಮೊದಲು ನೋಡಿದ ರಾಜೀವ್ ಗಾಂಧಿ ಹೇಳಿದ್ದು ಒಂದೇ ಮಾತು; ‘ವೀಕೆಂಡ್..’ ಶೋನಲ್ಲಿ​ ವಿವರಿಸಿದ ಡಿಕೆಶಿ

‘ವೀಕೆಂಡ್ ವಿತ್ ರಮೇಶ್​ ಸೀಸನ್ 5’ ಮಾರ್ಚ್​ ತಿಂಗಳಲ್ಲಿ ಆರಂಭ ಆಯಿತು. ಮೊದಲ ಅತಿಥಿಯಾಗಿ ರಮ್ಯಾ ಆಗಮಿಸಿದ್ದರು. ನಂತರ ಡ್ಯಾನ್ಸಿಂಗ್ ಸ್ಟಾರ್ ಪ್ರಭುದೇವ, ಡಾಕ್ಟರ್​ ಮಂಜುನಾಥ್, ಹಿರಿಯ ನಟ ದತ್ತಣ್ಣ, ಅವಿನಾಶ್, ಮಂಡ್ಯ ರಮೇಶ್, ಸಿಹಿ ಕಹಿ ಚಂದ್ರು, ನೆನಪಿರಲಿ ಪ್ರೇಮ್ ಮೊದಲಾದವರು ಬಂದು ಸಾಧಕರ ಚೇರ್ ಮೇಲೆ ಕುಳಿತಿದ್ದಾರೆ. ಈಗ ಡಿಕೆ ಶಿವಕುಮಾರ್ ಅವರ ಬದುಕಿನ ಬಗ್ಗೆ ತಿಳಿದುಕೊಳ್ಳುವ ಸಮಯ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:25 am, Wed, 7 June 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!