AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾತ್ರೋ ರಾತ್ರಿ ಬಿಗ್ ಬಾಸ್ ಮನೆ ಓಪನ್ ಮಾಡಿಸಿದೆ’: ಪೂರ್ತಿ ವಿಷಯ ತಿಳಿಸಿದ ಡಿಕೆ ಶಿವಕುಮಾರ್

ಕಿಚ್ಚ ಸುದೀಪ್ ನಡೆಸಿಕೊಡುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಕಾರ್ಯಕ್ರಮಕ್ಕೆ ಬೀಗ ಹಾಕಲಾಗಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಬಿಗ್ ಬಾಸ್ ನಿಲ್ಲಿಸಲಾಗಿತ್ತು. ಆಗ ಡಿಕೆ ಶಿವಕುಮಾರ್ ಅವರು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಪರಿಹರಿಸಿದರು. ಆ ಬಗ್ಗೆ ಅವರ ಮಾತಾಡಿದ್ದಾರೆ.

‘ರಾತ್ರೋ ರಾತ್ರಿ ಬಿಗ್ ಬಾಸ್ ಮನೆ ಓಪನ್ ಮಾಡಿಸಿದೆ’: ಪೂರ್ತಿ ವಿಷಯ ತಿಳಿಸಿದ ಡಿಕೆ ಶಿವಕುಮಾರ್
Dk Shivakumar, Bigg Boss Kannada
ಮದನ್​ ಕುಮಾರ್​
|

Updated on: Oct 19, 2025 | 7:11 AM

Share

ಕೆಲವು ದಿನಗಳ ಹಿಂದೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋಗೆ ವಿಘ್ನ ಎದುರಾಗಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಸ್ ಸಂಸ್ಥೆಗೆ ಬೀಗ ಜಡಿದರು. ಅದೇ ಜಾಗದಲ್ಲಿ ರಿಯಾಲಿಟಿ ಶೋ ನಡೆಯುತ್ತಿದ್ದರಿಂದ ಬಿಗ್ ಬಾಸ್ ಕೂಡ ಸ್ಥಗಿತಗೊಳ್ಳಬೇಕಾಯಿತು. ಆಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಪರಿಹರಿಸಿದರು. 2 ದಿನಗಳ ಬಳಿಕ ಬಿಗ್ ಬಾಸ್ ಮನೆಯನ್ನು ಓಪನ್ ಮಾಡಿಸಲಾಯಿತು. ಆ ಘಟನೆ ಬಗ್ಗೆ ಡಿಕೆ ಶಿವಕುಮಾರ್ (DK Shivakumar) ಅವರು ಮಾತನಾಡಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಆ ವೇಳೆ ಅವರು ಚಿತ್ರರಂಗ ಹಾಗೂ ಬಿಗ್​ ಬಾಸ್ ಕುರಿತು ಮಾತಾಡಿದರು. ‘ಮೊನ್ನೆ ಯಾರೋ ನಮ್ಮ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೋಟಿಸ್ ನೀಡಿ, ಬಿಗ್ ಬಾಸ್ ಶೋ ನಿಲ್ಲಿಸಿಬಿಟ್ಟಿದ್ದರು. ನಾನು ಟಿವಿಯಲ್ಲಿ ನೋಡಿದೆ. ಅವರು ಯಾಕೆ ಮಾಡಿದರೋ ಗೊತ್ತಿಲ್ಲ. ನಾನು ತಕ್ಷಣಕ್ಕೆ ಮಧ್ಯಸ್ಥಿಕೆ ವಹಿಸಬೇಕಾಯಿತು’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

‘ಆ ಶೋ ಹಿಂದೆ ಎಷ್ಟು ಪ್ರತಿಕ್ರಿಯೆ ಇರುತ್ತದೆ, ಸಾರ್ವಜನಿಕರ ಗಮನ ಇರುತ್ತದೆ ಎಂಬುದರ ಅರಿವು ನನಗೆ ಇದೆ. ಶೂಟಿಂಗ್ ಮಾಡುವಾಗ ಅಂತ ದೊಡ್ಡ ಮಾಲಿನ್ಯ ಏನು ಮಾಡುತ್ತಾರೆ? ಇವೆಲ್ಲ ಬೇಡಪ್ಪ ಅಂತ ಅಧಿಕಾರಿಗಳಿಗೆ ಹೇಳಿ ರಾತ್ರೋ ರಾತ್ರಿ ಬಿಗ್ ಬಾಸ್ ಮನೆ ಓಪನ್ ಮಾಡಿಸಿ ಕೊಟ್ಟೆ’ ಎಂದು ಆ ಘಟನೆಯನ್ನು ಡಿಕೆ ಶಿವಕುಮಾರ್ ಅವರು ವಿವರಿಸಿದ್ದಾರೆ.

‘ಇಂದು ಚಿತ್ರರಂಗ ಬೆಳೆದಿದೆ. ಪೈಪೋಟಿ ಕೂಡ ಜಾಸ್ತಿ ಆಗಿದೆ. ಈಗ ತಂತ್ರಜ್ಞಾನ ಎಷ್ಟೋ ಬದಲಾಗಿದೆ. ಕೃತಕ ಬುದ್ಧಿಮತ್ತೆ ಬಂದಿರುವುದರಿಂದ ನಟನೆ ಮಾಡದೇ ಇದ್ದರೂ ಕೂಡ ಅನಂತ್ ನಾಗ್ ಅವರು ನಟಿಸಿದ ರೀತಿಯಲ್ಲಿ ಹೊಸದಾಗಿ ಸೃಷ್ಟಿ ಮಾಡುವ ಅವಕಾಶ ಇದೆ. ಹಳೇ ಕಾಲವೇ ಬೇರೆ, ಈಗಿನ ಕಾಲವೇ ಬೇರೆ. ಇಡೀ ಪ್ರಪಂಚ ಈ ಚಿತ್ರರಂಗಕ್ಕೆ ಬಹಳ ಗೌರವ ಕೊಟ್ಟುಕೊಂಡು ಬಂದಿದೆ’ ಎಂದಿದ್ದಾರೆ ಡಿಕೆಶಿ.

ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯ ಡ್ರಾಮಾಗಳನ್ನು ಬಿಚ್ಚಿಟ್ಟ ಸತೀಶ್

ಪದ್ಮಭೂಷಣ ಪ್ರಶಸ್ತಿ ಪಡೆದ ಅನಂತ್ ನಾಗ್ ಅವರಿಗೆ ಚಿತ್ರರಂಗದಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಅದರಲ್ಲಿ ಡಿಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ‘ಅನಂತ್ ನಾಗ್ ಅವರು ರಾಜಕೀಯಕ್ಕೆ ಪ್ರವೇಶಿಸಿ ನನ್ನ ರೀತಿಯೇ ಬೆಂಗಳೂರು ನಗರಾಭಿವೃದ್ಧಿ ಮಂತ್ರಿಯಾಗಿ ಕೆಲಸ ಮಾಡಿದ್ದರು. ಯಾವ ವಿವಾದಕ್ಕೂ ಅವರು ಸಿಕ್ಕಿಕೊಳ್ಳಲಿಲ್ಲ. ಅವರು ಈಗಲೂ ಯುವಕನಂತೆ ಕಾಣುತ್ತಾರೆ’ ಎಂದು ಡಿಕೆಶಿ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?