AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ವಿತ್ ರಮೇಶ್​: ಸಂಸ್ಕೃತದಲ್ಲಿ ಶ್ಲೋಕ ಹೇಳಿ ಗಮನ ಸೆಳೆದ ಡಿಕೆ ಶಿವಕುಮಾರ್

‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ತಮ್ಮ ಬಾಲ್ಯದ ದಿನಗಳು ಹಾಗೂ ಕುಟುಂಬದ ಬಗ್ಗೆ ಡಿಕೆಶಿ ಮಾತನಾಡಿದ್ದಾರೆ. ಇದರ ಜೊತೆಗೆ ಅವರು ಹೇಳಿರುವ ಶ್ಲೋಕ ಗಮನ ಸೆಳೆಯುತ್ತಿದೆ.

ವೀಕೆಂಡ್ ವಿತ್ ರಮೇಶ್​: ಸಂಸ್ಕೃತದಲ್ಲಿ ಶ್ಲೋಕ ಹೇಳಿ ಗಮನ ಸೆಳೆದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ರಾಜೇಶ್ ದುಗ್ಗುಮನೆ
|

Updated on:Jun 09, 2023 | 8:19 AM

Share

ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ರಾಜಕೀಯದಲ್ಲಿ ಮಾಡಿರುವ ಸಾಧನೆ ತುಂಬಾನೇ ದೊಡ್ಡದು. ಇದರ ಜೊತೆಗೆ ಅವರು ಒಂದಷ್ಟು ವಿವಾದಗಳನ್ನು ಕೂಡ ಮಾಡಿಕೊಂಡಿದ್ದಾರೆ. ಡಿಕೆ ಶಿವಕುಮಾರ್ ಅವರು ಈಗ ವೀಕೆಂಡ್ ವಿತ್ ರಮೇಶ್ (Weekend With Ramesh) ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ವೀಕೆಂಡ್​ನಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಸಾಕಷ್ಟು ವಿಚಾರಗಳನ್ನು ಡಿಕೆಶಿ ಅವರು ಹೇಳಿಕೊಂಡಿದ್ದಾರೆ. ಆ ಪೈಕಿ ಅವರು ಹೇಳಿದ ಸಂಸ್ಕೃತದ ಶ್ಲೋಕ ಎಲ್ಲರ ಗಮನ ಸೆಳೆದಿದೆ. ಜೀ ಕನ್ನಡ ವಾಹಿನಿ ಈ ಪ್ರೋಮೋ ಹಂಚಿಕೊಂಡಿದೆ.

ಡಿಕೆಶಿ ಅವರು ಇಷ್ಟು ದಿನಗಳ ಕಾಲ ಚುನಾವಣೆ ಪ್ರಚಾರದಲ್ಲಿ ಬ್ಯುಸಿ ಆಗಿದ್ದರು. ಕಾಂಗ್ರೆಸ್​ನ ಅಧಿಕಾರಕ್ಕೆ ತರಬೇಕು ಎಂದು ಶತಾಯ ಗತಾಯ ಪ್ರಯತ್ನಿಸಿದ್ದರು. ಈ ಪ್ರಯತ್ನ ಯಶಸ್ಸು ಕಂಡಿದೆ. ಕಾಂಗ್ರೆಸ್ ಸ್ಪಷ್ಟಬಹುಮತದೊಂದಿಗೆ ರಾಜ್ಯದಲ್ಲಿ ಸರ್ಕಾರ ರಚಿಸಿದೆ. ಇದರಲ್ಲಿ ಡಿಕೆಶಿ ಅವರ ಶ್ರಮವೂ ಇದೆ. ಸರ್ಕಾರ ರಚಿಸಿ, ಮಂತ್ರಿ ಸ್ಥಾನ ಹಂಚಿಕೆ ಮಾಡಿದ ಬಳಿಕ ಡಿಕೆಶಿ ಅವರು ಕೊಂಚ ರಿಲೀಫ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದಾರೆ.

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಲಾಗುತ್ತದೆ. ಬಾಲ್ಯದ ದಿನಗಳು, ಸಾಧನೆ ಮಾಡಿದ್ದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಹಂಚಿಕೊಳ್ಳಲಾಗುತ್ತದೆ. ಅದೇ ರೀತಿ ಡಿಕೆಶಿ ಅವರು ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ತಮ್ಮ ಬಾಲ್ಯದ ದಿನಗಳು ಹಾಗೂ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ಇದರ ಜೊತೆಗೆ ಅವರು ಹೇಳಿರುವ ಶ್ಲೋಕ ಗಮನ ಸೆಳೆಯುತ್ತಿದೆ.

View this post on Instagram

A post shared by Zee Kannada (@zeekannada)

‘ನಾಭಿಷೇಕೋ ನ ಸಂಸ್ಕಾರಃ ಸಿಂಹಸ್ಯ ಕ್ರಿಯತೆ ವನೇ. ವಿಕ್ರಮಾರ್ಜಿತರಾಜ್ಯಸ್ಯ ಸ್ವಯಮೇವ ಮೃಗೇಂದ್ರತಾ’ ಎಂದು ಅವರು ಶ್ಲೋಕ ಹೇಳಿದ್ದಾರೆ. ಇದರ ಅರ್ಥವನ್ನೂ ಅವರು ವಿವರಿಸಿದ್ದಾರೆ.  ‘ಕಾಡಿನಲ್ಲಿ ಬೇಕಷ್ಟು ಪ್ರಾಣಿಗಳಿವೆ. ಸಿಂಹಕ್ಕೆ ಯಾರೂ ಮೃಗರಾಜ ಎಂದು ಹೆಸರಿಟ್ಟಿಲ್ಲ. ಅದಕ್ಕೆ ಯಾರೂ ಪಟ್ಟಾಭಿಷೇಕ ಮಾಡಿಲ್ಲ. ತನ್ನ ಶಕ್ತಿ ಹಾಗೂ ಸಾಮರ್ಥ್ಯದಿಂದ ಅದು ಮೃಗರಾಜ ಎನಿಸಿಕೊಂಡಿದೆ’ ಎಂದು ಸಂಸ್ಕೃತದ ಸಾಲಿನ ಅರ್ಥವನ್ನು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಹೊರಗೆ ಟಫ್ ಆಗಿರೋ ಡಿಕೆ ಶಿವಕುಮಾರ್​ ಮನೆಯಲ್ಲಿ ಹೇಗಿರ್ತಾರೆ?; ವೀಕೆಂಡ್​ ವಿತ್ ರಮೇಶ್​ನಲ್ಲಿ ವಿವರಿಸಿದ ಮಗಳು ಐಶ್ವರ್ಯಾ

‘ಸ್ವಯಂ ಶಕ್ತಿ, ಸಾಮರ್ಥ್ಯ ಇರುವವನೇ ನಿಜವಾದ ನಾಯಕ! ವೀಕೆಂಡ್ ವಿತ್ ರಮೇಶ್-5 ಗ್ರ್ಯಾಂಡ್ ಫಿನಾಲೆ, ಶನಿ-ಭಾನು ರಾತ್ರಿ ‌9ಕ್ಕೆ’ ಎಂದು ಪ್ರೋಮೋಗೆ ಕ್ಯಾಪ್ಶನ್ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Fri, 9 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ