AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಹರ್ಷ ಮತ್ತು ಭುವಿ ಪಾತ್ರಗಳನ್ನು ನಿಜ ಜೀವನಕ್ಕೆ ಕನೆಕ್ಟ್​ ಮಾಡಬೇಡಿ’; ಕಿರಣ್ ರಾಜ್ ವಿಶೇಷ ಮನವಿ

ಕಿರಣ್ ರಾಜ್​ ಹಾಗೂ ರಂಜನಿ ರಾಘವನ್ ಮಾಡುತ್ತಿರುವುದು ಪಾತ್ರಗಳು ಮಾತ್ರ. ಆದರೆ ಈ ಪಾತ್ರಗಳನ್ನು ಮಾಡುತ್ತಿರುವವರು ನಿಜ ಜೀವನದಲ್ಲೂ ಒಂದಾಗಬೇಕು ಎಂದು ಕೆಲವರು ಬಯಸುತ್ತಿದ್ದಾರೆ.

 ‘ಹರ್ಷ ಮತ್ತು ಭುವಿ ಪಾತ್ರಗಳನ್ನು ನಿಜ ಜೀವನಕ್ಕೆ ಕನೆಕ್ಟ್​ ಮಾಡಬೇಡಿ’; ಕಿರಣ್ ರಾಜ್ ವಿಶೇಷ ಮನವಿ
ಕಿರಣ್​ ರಾಜ್​-ರಂಜನಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Apr 07, 2022 | 1:34 PM

ಧಾರಾವಾಹಿ ಹಾಗೂ ಸಿನಿಮಾಗಳನ್ನು ನೋಡುವವರ ಪೈಕಿ ಕೆಲವರು ಅಲ್ಲಿ ಬರುವ ಪಾತ್ರಗಳನ್ನು ತುಂಬಾನೇ ಗಂಭೀರವಾಗಿ ಸ್ವೀಕರಿಸುತ್ತಾರೆ. ತೆರೆಮೇಲೆ ನಡೆಯುವುದು ಹಾಗೂ ನಿಜ ಜೀವನ ಎರಡೂ ಒಂದೇ ಎಂದು ಭಾವಿಸುತ್ತಾರೆ. ತೆರೆಮೇಲೆ ಕಾಣಿಸಿಕೊಳ್ಳುವವರು ನಿಜ ಜೀವನದಲ್ಲೂ ಹಾಗೆಯೇ ಇರುತ್ತಾರೆ ಎಂದು ಭಾವಿಸುತ್ತಾರೆ. ನಟ ಕಿರಣ್ ರಾಜ್ (Kiran Raj)​ ಅವರಿಗೂ ಕೆಲವರಿಂದ ಇದೇ ರೀತಿಯ ಅನುಭವ ಆಗಿದೆ. ‘ಕನ್ನಡತಿ’ ಧಾರಾವಾಹಿ (Kannadathi Serial) ಮಹತ್ವದ ಘಟ್ಟ ತಲುಪಿರುವ ಈ ಸಂದರ್ಭದಲ್ಲಿ ಕಿರಣ್​ ರಾಜ್​ಗೆ ಈ ರೀತಿಯ ವಿಚಾರಗಳು ಗಮನಕ್ಕೆ ಬಂದಿವೆ. ಈ ಬಗ್ಗೆ ಅವರು ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಅವರು ವಿಶೇಷ ಮನವಿ ಮಾಡಿಕೊಳ್ಳಲು ಕಾರಣ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕಿರಣ್ ರಾಜ್​ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಆಗಿ ಕಾಣಿಸಿಕೊಂಡಿದ್ದಾರೆ. ಭುವಿ ಪಾತ್ರದಲ್ಲಿ ರಂಜನಿ ರಾಘವನ್ ನಟಿಸಿದ್ದಾರೆ. ಈ ಧಾರಾವಾಹಿ ಮಹತ್ವದ ಘಟ್ಟ ತಲುಪಿದೆ. ಹರ್ಷ ಹಾಗೂ ಭುವಿಯ ಎಂಗೇಜ್​ಮೆಂಟ್​ ನಡೆಯುತ್ತಿದೆ. ಇದಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆದಿದೆ. ಕಿರಣ್​ ಹಾಗೂ ರಂಜನಿ ಅವರು ನಿಜ ಜೀವನದಲ್ಲೂ ಮದುವೆ ಆಗಬೇಕು ಎಂದು ಕೆಲ ಅಭಿಮಾನಿಗಳು ಬಯಸಿದ್ದಾರೆ. ತೆರೆಮೇಲಿನ ಈ ಎರಡು ಪಾತ್ರಗಳು ನಿಜಜೀವನದಲ್ಲೂ ಒಂದಾಗಬೇಕು ಎಂಬುದು ಹಲವರ ಆಸೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಬರೆದುಕೊಳ್ಳುತ್ತಿದ್ದಾರೆ. ಇನ್ನು, ಕೆಲವರು ಈ ಬಗ್ಗೆ ನಕಲಿ ಸುದ್ದಿ ಹಬ್ಬಿಸುತ್ತಿದ್ದಾರೆ. ಈ ವಿಚಾರದಲ್ಲಿ ಕಿರಣ್ ರಾಜ್​ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ಕಿರಣ್ ರಾಜ್​ ಹಾಗೂ ರಂಜನಿ ರಾಘವನ್ ಮಾಡುತ್ತಿರುವುದು ಪಾತ್ರಗಳು ಮಾತ್ರ. ಆದರೆ ಈ ಪಾತ್ರಗಳನ್ನು ಮಾಡುತ್ತಿರುವವರು ನಿಜ ಜೀವನದಲ್ಲೂ ಒಂದಾಗಬೇಕು ಎಂದು ಕೆಲವರು ಬಯಸುತ್ತಿದ್ದಾರೆ. ಇವರ ಬಗ್ಗೆ ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದು ಕಿರಣ್​ ರಾಜ್​ ಅಸಮಾಧಾನಕ್ಕೆ ಕಾರಣವಾಗಿದೆ.

‘ಹರ್ಷ ಮತ್ತು ಭುವಿ ಪಾತ್ರವನ್ನು ಧಾರಾವಾಹಿ ಪಾತ್ರಗಳನ್ನಾಗಿ ಮಾತ್ರ ನೋಡಿ. ಅದನ್ನು ನಿಜ ಜೀವನದಲ್ಲಿ ಕನೆಕ್ಟ್​ ಮಾಡಬೇಡಿ. ವೀವ್ಸ್​ಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಫೇಕ್​ ನ್ಯೂಸ್ ಹಬ್ಬಿಸುವವರು ನಿಮ್ಮ ಜೀವನವನ್ನು ನೀವು ನೋಡಿಕೊಳ್ಳಿ’ ಎಂದಿದ್ದಾರೆ ಕಿರಣ್​ ರಾಜ್.

‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಮತ್ತು ಭುವಿ ನಿಶ್ಚಿತಾರ್ಥದ ದಿನ ಹತ್ತಿರವಾಗಿದೆ. ಇವರ ಮದುವೆಗೆ ಮಂಗಳಮ್ಮ ಒಪ್ಪಿಗೆ ಕೊಟ್ಟಿದ್ದಾರೆ. ಆದರೆ, ಇದಕ್ಕೆ ಕೆಲವರು ಅಡ್ಡಗಾಲು ಹಾಕಲು ಪ್ರಯತ್ನಿಸುತ್ತಿದ್ದಾರೆ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಅಜ್ಜಿಗೆ ನಿಂತ ಜಾಗದಲ್ಲೇ 32 ಲಕ್ಷ ರೂ. ನೀಡಿದ ಹರ್ಷ; ಭುವಿಗೆ ಹೀರೋನ ಬಿಟ್ಟುಕೊಟ್ಟ ವರುಧಿನಿ

ಮಂಗಳಮ್ಮನ ವಿರುದ್ಧ ತಿರುಗಿಬಿದ್ದ ಭುವಿ; ‘ಕನ್ನಡತಿ’ ಧಾರಾವಾಹಿಯಲ್ಲಿ ಹೊಸ ಟ್ವಿಸ್ಟ್​

Published On - 1:33 pm, Thu, 7 April 22

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ