AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೋನ್ ಪ್ರತಾಪ್ ಆತ್ಮಹತ್ಯೆ ವದಂತಿ: ವೈದ್ಯರು ಹೇಳಿದ್ದೇನು?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿ ಡ್ರೋನ್ ಪ್ರತಾಪ್, ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ ಎನ್ನಲಾಗುತ್ತಿದೆ. ಪ್ರತಾಪ್​ಗೆ ಚಿಕಿತ್ಸೆ ನೀಡಿದ ವೈದ್ಯರು ಪ್ರತಾಪ್​ರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಡ್ರೋನ್ ಪ್ರತಾಪ್ ಆತ್ಮಹತ್ಯೆ ವದಂತಿ: ವೈದ್ಯರು ಹೇಳಿದ್ದೇನು?
Follow us
ಮಂಜುನಾಥ ಸಿ.
|

Updated on:Jan 04, 2024 | 3:38 PM

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10ರ ಸ್ಪರ್ಧಿ ಡ್ರೋನ್ ಪ್ರತಾಪ್ (Drone Prathap)​, ಬಿಗ್​ಬಾಸ್ ಮನೆಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ ಪ್ರತಾಪ್​ಗೆ ಅನಾರೋಗ್ಯ ಉಂಟಾದ ಕಾರಣ ಅವರು ಆಸ್ಪತ್ರೆ ಸೇರಿದ್ದಾರೆ ಎಂದು ಅವರ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಇದೀಗ ಪ್ರತಾಪ್​ರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಈ ಬಗ್ಗೆ ನಿಖರ ಮಾಹಿತಿ ನೀಡಿದ್ದಾರೆ.

ಪ್ರತಾಪ್ ಅವರನ್ನು ಶ್ರೀ ಸಂಜೀವಿನಿ ಆಸ್ಪತ್ರೆಗೆ ದಾಖಲಾಗಿಸಿತ್ತು, ಪ್ರತಾಪ್​ಗೆ ಚಿಕಿತ್ಸೆ ನೀಡಿದ ವೈದ್ಯರು, ‘ಪ್ರತಾಪ್​ ಬಂದಾಗ ಅವರಿಗೆ ವಾಂತಿ ಮತ್ತು ಬೇಧಿ ಆಗಿತ್ತು. ಅವರಿಗೆ ಫುಡ್ ಪಾಯ್ಸನ್ ಆಗಿತ್ತು, ಪ್ರತಾಪ್​ ಅಥವಾ ಬಿಗ್​ಬಾಸ್ ಕಡೆಯವರಾಗಲಿ ಅವರು ಕ್ಯಾಲ್ಶಿಯಮ್ ಮಾತ್ರೆ ತೆಗೆದುಕೊಂಡಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಸರಿಯಾಗಿ ಊಟ ಮಾಡದೇ ಇರುವುದರಿಂದ ಹೀಗಾಗಿದೆ’ ಎಂದಿದ್ದಾರೆ.

ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್​ಗೆ ಹಲವು ಪರೀಕ್ಷೆಗಳನ್ನು ವೈದ್ಯರು ಮಾಡಿದ್ದಾರೆ. ರಕ್ತ, ಮೂತ್ರ ಪರೀಕ್ಷೆ, ಹೃದಯ ಪರೀಕ್ಷೆ, ಫೋಟೊ ಥೆರಪಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗಿದೆ. ಡ್ರೋನ್ ಪ್ರತಾಪ್​ಗೆ ಆಸ್ಪತ್ರೆಯಲ್ಲಿ ಮಾಡಲಾಗಿರುವ ಪರೀಕ್ಷೆಗಳು, ಅವರಿಗೆ ಕಾಣಸಿಕೊಂಡಿದ್ದ ರೋಗಲಕ್ಷಣ, ಆಸ್ಪತ್ರೆಯಲ್ಲಿ ನೀಡಲಾಗಿರುವ ಚಿಕಿತ್ಸೆ ವೈದ್ಯರ ಭೇಟಿ ಇನ್ನಿತರೆ ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿವೆ.

ಇದನ್ನೂ ಓದಿ:ಕೀ ಕೊಟ್ಟರಷ್ಟೆ ಆಡುವ ಗೊಂಬೆ ಡ್ರೋನ್ ಪ್ರತಾಪ್, ಇದು ನಿಜವೇ?

ಬುಧವಾರ ಮಧ್ಯಾಹ್ನದ ವೇಳೆಗೆ ಡ್ರೋನ್ ಪ್ರತಾಪ್ ಆಸ್ಪತ್ರೆಗೆ ದಾಖಲಾಗಿದ್ದ ಡ್ರೋನ್ ಪ್ರತಾಪ್ ಅನ್ನು ಜನವರಿ 3ನೇ ತಾರೀಖು ಮಧ್ಯಾಹ್ನ ರಾತ್ರಿ 3 ಗಂಟೆಗೆ ಡಿಸ್​ಚಾರ್ಜ್ ಮಾಡಲಾಗಿದೆ. ಡ್ರೋನ್ ಪ್ರತಾಪ್ ಮತ್ತೆ ಬಿಗ್​ಬಾಸ್ ಮನೆ ಸೇರಿದ್ದಾರೆ ಎನ್ನಲಾಗುತ್ತಿದೆ. ಡ್ರೋನ್ ಪ್ರತಾಪ್, ಕಳೆದ ಕೆಲ ದಿನಗಳಿಂದಲೂ ಬಿಗ್​ಬಾಸ್ ಮನೆಯಲ್ಲಿ ಡಲ್ ಆಗಿದ್ದರು. ಮನೆಯಿಂದ ತಂದೆ-ತಾಯಿ ಬಂದ ದಿನ ಬಹಳ ಖುಷಿಯಿಂದ ಇದ್ದ ಪ್ರತಾಪ್, ಆ ನಂತರ ಮನೆಗೆ ಬಂದ ಸ್ವಾಮೀಜಿ, ಪ್ರತಾಪ್, ತನ್ನ ತಂದೆ-ತಾಯಿಗಳಿಂದ ದೂರವೇ ಇರಬೇಕು ಎಂದು ಹೇಳಿದ್ದು ಅವರಿಗೆ ತೀವ್ರ ಬೇಸರ ಉಂಟಾಗಿತ್ತು. ಇದೇ ಕಾರಣಕ್ಕೆ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂಬ ವದಂತಿ ಹರಿದಾಡಿತ್ತು.

ಆದರೆ ಈಗ ಬಿಡುಗಡೆ ಆಗಿರುವ ವೈದ್ಯಕೀಯ ವರದಿಗಳು ಗಮನಿಸಿದರೆ ಪ್ರತಾಪ್​ಗೆ ಕೇವಲ ಅನಾರೋಗ್ಯವಷ್ಟೆ ಆಗಿತ್ತು ಎನ್ನಬಹುದಾಗಿದೆ. ಡ್ರೋನ್ ಪ್ರತಾಪ್​ರ ಅನಾರೋಗ್ಯದ ಸಂಬಂಧ, ಕಲರ್ಸ್ ವಾಹಿನಿಯವರು ಈ ವರೆಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಡ್ರೋನ್ ಪ್ರತಾಪ್ ಬಿಗ್​ಬಾಸ್ ಮನೆಗೆ ಬಂದ ಮೊದಲ ವಾರದಲ್ಲಿ ಮನೆಯ ಸದಸ್ಯರಿಂದ ತೀವ್ರ ವ್ಯಂಗ್ಯಕ್ಕೆ, ಅಪಹಾಸ್ಯಕ್ಕೆ ಒಳಗಾಗಿದ್ದರು. ಅದಾದ ಬಳಿಕ ಸುದೀಪ್​ರ ಸ್ಪೂರ್ತಿಯ ಮಾತುಗಳಿಂದ ಉತ್ಸಾಹಭರಿತರಾಗಿದ್ದರು. ಕೆಲವು ವಾರಗಳ ಕಾಲ ಮನೆಯ ಪ್ರಮುಖ ಸ್ಪರ್ಧಿ ಗೆಲ್ಲುವ ಅಭ್ಯರ್ಥಿ ಎಂಬಂತೆ ಬಿಂಬಿತವಾಗಿದ್ದರು. ಆದರೆ ಕಳೆದ ಕೆಲವು ವಾರಗಳಲ್ಲಿ ಮತ್ತೆ ಉತ್ಸಾಹ ಕಳೆದುಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Thu, 4 January 24

ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ
ಮಳೆ ಅಬ್ಬರಕ್ಕೆ ಶಾಂತಿನಗರದಲ್ಲಿ ಭಾಗಶಃ ಮುಳುಗಿದ ಬಸ್​ಗಳು
ಮಳೆ ಅಬ್ಬರಕ್ಕೆ ಶಾಂತಿನಗರದಲ್ಲಿ ಭಾಗಶಃ ಮುಳುಗಿದ ಬಸ್​ಗಳು