AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

80 ಸಾವಿರ ರೂಪಾಯಿ ಎಂದು ಹೇಳಿಕೊಳ್ಳೋ ಸತೀಶ್ ಶರ್ಟ್​ನ ನಿಜವಾದ ಬೆಲೆ ಇಷ್ಟೇನಾ?

ಸತೀಶ್ ಅವರು ಡಾಗ್ ಬ್ರೀಡರ್. ಅವರಿಗೆ ಡಾಗ್ ಸತೀಶ್ ಎಂದರೆ ಕೋಪ ಬರುತ್ತದೆ. ಡಾಗ್ ಬ್ರೀಡರ್ ಸತೀಶ್ ಎಂಬುದು ಸೂಕ್ತ ಪದ ಎಂಬುದು ಅವರ ಅಭಿಪ್ರಾಯ. ಅವರು ಸಂದರ್ಶನ ಕೊಡದೆ ಇರುವ ಮಾಧ್ಯಮಗಳಿಲ್ಲ. ಅವರು ಟ್ರೋಲ್ ಆಗುತ್ತೇನೆ ಎಂಬ ವಿಷಯ ಗೊತ್ತಿದ್ದೂ ಸಂದರ್ಶನ ನೀಡುತ್ತಾರೆ. ಅವರು ತಮ್ಮ ಶರ್ಟ್ ಬಗ್ಗೆ ಹೇಳಿಕೊಂಡಿದ್ದಾರೆ.

80 ಸಾವಿರ ರೂಪಾಯಿ ಎಂದು ಹೇಳಿಕೊಳ್ಳೋ ಸತೀಶ್ ಶರ್ಟ್​ನ ನಿಜವಾದ ಬೆಲೆ ಇಷ್ಟೇನಾ?
ಸತೀಶ್
ರಾಜೇಶ್ ದುಗ್ಗುಮನೆ
|

Updated on: Nov 24, 2025 | 8:50 AM

Share

ಸತೀಶ್ ಅವರು ಬಿಗ್ ಬಾಸ್ (Bigg Boss) ಮನೆಗೆ ತೆರಳಿ ಜನಪ್ರಿಯತೆ ಪಡೆಯಲು ನೋಡಿದರು. ಆದರೆ, ಅವರು ಹೆಚ್ಚು ದಿನ ಇರೋಕೆ ಆಗಿಲ್ಲ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಅವರಿಗೆ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ಅವರು ಸಾಕಷ್ಟು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಹೋದಲ್ಲಿ ಬಂದಲ್ಲಿ ತಮ್ಮ ಶರ್ಟ್​ನ ಬೆಲೆ ಬಗ್ಗೆ, ಐಷಾರಾಮಿ ಜೀವನದ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಅವರು ಸಂದರ್ಶನ ಒಂದರಲ್ಲಿ ಇದು 80 ಸಾವಿರ ರೂಪಾಯಿ ಶರ್ಟ್ ಎಂದು ಹೇಳಿಕೊಂಡಿದ್ದರು. ಇದರ ಅಸಲಿ ಬೆಲೆಯನ್ನು ನೆಟ್ಟಿಗರು ಹುಡುಕಿ ತೆಗೆದಿದ್ದಾರೆ.

ಸತೀಶ್ ಅವರು ಡಾಗ್ ಬ್ರೀಡರ್. ಅವರಿಗೆ ಡಾಗ್ ಸತೀಶ್ ಎಂದರೆ ಕೋಪ ಬರುತ್ತದೆ. ಡಾಗ್ ಬ್ರೀಡರ್ ಸತೀಶ್ ಎಂಬುದು ಸೂಕ್ತ ಪದ ಎಂಬುದು ಅವರ ಅಭಿಪ್ರಾಯ. ಅವರು ಸಂದರ್ಶನ ಕೊಡದೆ ಇರುವ ಮಾಧ್ಯಮಗಳಿಲ್ಲ. ಅವರು ಟ್ರೋಲ್ ಆಗುತ್ತೇನೆ ಎಂಬ ವಿಷಯ ಗೊತ್ತಿದ್ದೂ ಸಂದರ್ಶನ ನೀಡುತ್ತಾರೆ. ಅವರು ತಮ್ಮ ಶರ್ಟ್ ಬಗ್ಗೆ ಹೇಳಿಕೊಂಡಿದ್ದರು. ಇದರ ಅಸಲಿ ಬೆಲೆ ಈಗ ಗೊತ್ತಾಗಿದೆ.

‘ಇದು 80 ಸಾವಿರ ರೂಪಾಯಿ ಶರ್ಟ್’ ಎಂದು ಹೇಳಿಕೊಂಡಿದ್ದರು ಸತೀಶ್. ಅಲ್ಲದೆ, ಇದು ನನ್ನ ದುಬಾರಿ ಶರ್ಟ್ ಎಂಬುದನ್ನು ಅವರು ಒತ್ತಿ ಹೇಳಿದ್ದರು. ಆದರೆ, ಇದರ ಅಸಲಿ ಬೆಲೆ 3,400 ರೂಪಾಯಿ ಮಾತ್ರ. ನೆಟ್ಟಿಗರು ಇದನ್ನು ಎತ್ತಿ ತೋರಿಸಿದ್ದಾರೆ. ಸದ್ಯ ಈ ವಿಚಾರ ಚರ್ಚೆಗೆ ಕಾರಣ ಆಗಿದೆ.

ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯ ಡ್ರಾಮಾಗಳನ್ನು ಬಿಚ್ಚಿಟ್ಟ ಸತೀಶ್

ಸತೀಶ್ ಅವರು ಶ್ವಾನಗಳನ್ನು ಕೋಟಿ ಕೋಟಿ ಕೊಟ್ಟು ಖರೀದಿ ಮಾಡೋದಾಗಿ ಹೇಳಿಕೊಳ್ಳುತ್ತಾರೆ. ಅವರಿಗೆ ಬೇರೆ ರಾಜ್ಯಗಳಲ್ಲಿ ಸಾಕಷ್ಟು ಬೇಡಿಕೆ ಇದೆಯಂತೆ. ಇದೆಲ್ಲವೂ ಬಡಾಯಿ ಕೊಚ್ಚಿಕೊಳ್ಳೋ ಪರಿ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಇದನ್ನು ಅವರು ಒಪ್ಪುವವರಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ