AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಡ್ರೋನ್ ರೆಕ್ಕೆ-ಪುಕ್ಕ ಕಿತ್ತು ಹಾಕ್ತೀನಿ’; ಪ್ರತಾಪ್​ಗೆ ಎಚ್ಚರಿಕೆ ಕೊಟ್ಟ ವಿನಯ್

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ತುಕಾಲಿ ಸಂತೋಷ್ ಹಾಗೂ ವರ್ತೂರ್ ಸಂತೋಷ್ ಕೂಡ ಡ್ರೋನ್ ವಿಚಾರ ಇಟ್ಟುಕೊಂಡು ಟೀಕೆ ಮಾಡಿದ್ದಾರೆ. ಇನ್ನು, ಸ್ನೇಹಿತ್ ಅವರು ಪ್ರತಾಪ್ ಅವರನ್ನು ಡೋಂಗಿ ಎಂದು ಕರೆದಿದ್ದಾರೆ.

‘ನಿನ್ನ ಡ್ರೋನ್ ರೆಕ್ಕೆ-ಪುಕ್ಕ ಕಿತ್ತು ಹಾಕ್ತೀನಿ’; ಪ್ರತಾಪ್​ಗೆ ಎಚ್ಚರಿಕೆ ಕೊಟ್ಟ ವಿನಯ್
ಪ್ರತಾಪ್-ವಿನಯ್
ರಾಜೇಶ್ ದುಗ್ಗುಮನೆ
|

Updated on: Oct 13, 2023 | 12:53 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಮನೆಗೆ 17 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಪ್ರತಿ ಸ್ಪರ್ಧಿಗಳ ಮನಸ್ಥಿತಿ ಬೇರೆ ಬೇರೆ ರೀತಿಯಲ್ಲಿದೆ. ಈ ಕಾರಣದಿಂದಲೇ ಮನೆಯಲ್ಲಿ ಜಗಳಗಳು ಆಗುತ್ತಿವೆ. ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುತ್ತಿಲ್ಲ. ಅನೇಕರು ಡ್ರೋನ್ ಪ್ರತಾಪ್ (Drone Prathap) ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಈಗ ವಿನಯ್ ಗೌಡ ಅವರು ಡ್ರೋನ್ ಪ್ರತಾಪ್​ಗೆ ಎಚ್ಚರಿಕೆ ಕೊಟ್ಟಿದ್ದಾರೆ. ‘ನಿನ್ನ ಡ್ರೋನ್ ರೆಕ್ಕೆ-ಪುಕ್ಕ ಕಿತ್ತು ಹಾಕ್ತೀನಿ’ ಎಂದು ಹೇಳಿದ್ದಾರೆ. ಸದ್ಯ ಕಲರ್ಸ್ ಕನ್ನಡ ಹಂಚಿಕೊಂಡಿರುವ ಪ್ರೋಮೋ ಗಮನ ಸೆಳೆಯುತ್ತಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಅರ್ಹರು ಹಾಗೂ ಅನರ್ಹರು ಎಂದು ಎರಡು ವಿಧ ಮಾಡಲಾಗಿದೆ. ಅನರ್ಹರು ಮನೆಯನ್ನು ಕ್ಲೀನ್ ಮಾಡಬೇಕು. ಅಡುಗೆಯನ್ನೂ ಅವರೇ ಮಾಡಬೇಕು. ಅಡುಗೆ ಚೆನ್ನಾಗಿ ಮಾಡಿಲ್ಲ ಎಂದು ವಿನಯ್ ಗೌಡ ದೂರು ನೀಡಿದ್ದಾರೆ ಎಂಬುದಾಗಿ ಡ್ರೋನ್ ಪ್ರತಾಪ್ ಹೇಳಿದರು. ಆದರೆ, ವಿನಯ್ ತಾವು ಆ ರೀತಿ ಹೇಳಿಯೇ ಇಲ್ಲ ಎಂದರು. ಇಬ್ಬರ ಮಧ್ಯೆ ಕಿತ್ತಾಟ ನಡೆಯಿತು. ಈ ವೇಳೆ ‘ನಿನ್ನ ಡ್ರೋನ್ ರೆಕ್ಕೆ-ಪುಕ್ಕ ಕಿತ್ತು ಹಾಕ್ತೀನಿ’ ಎಂದು ಪ್ರತಾಪ್​ಗೆ ವಿನಯ್ ಎಚ್ಚರಿಕೆ ಕೊಟ್ಟರು.

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ತುಕಾಲಿ ಸಂತೋಷ್ ಹಾಗೂ ವರ್ತೂರ್ ಸಂತೋಷ್ ಕೂಡ ಡ್ರೋನ್ ವಿಚಾರ ಇಟ್ಟುಕೊಂಡು ಟೀಕೆ ಮಾಡಿದ್ದಾರೆ. ಇನ್ನು, ಸ್ನೇಹಿತ್ ಅವರು ಪ್ರತಾಪ್ ಅವರನ್ನು ಡೋಂಗಿ ಎಂದು ಕರೆದಿದ್ದಾರೆ. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬರೋ ಸಾಧ್ಯತೆ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆ ಸೇರಿರೋ ಸಂಗೀತಾ ಮತ್ತು ಕಾರ್ತಿಕ್ ಮಧ್ಯೆ ಸಮ್​ಥಿಂಗ್ ಸ್ಪೆಷಲ್?

ಇಂದು (ಅಕ್ಟೋಬರ್ 13) ರಾತ್ರಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ