AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಮರಳಿದ ಬಳಿಕ ಮೌನಕ್ಕೆ ಶರಣಾದ ಪ್ರತಾಪ್; ಮೊದಲು ಮಾಡಿದ್ದೇನು?

ಎರಡು ದಿನ ಊಟ ಮಾಡದ ಕಾರಣ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರು ಬಿಗ್ ಬಾಸ್ ಮನೆಗೆ ಮರಳಿದ್ದಾರೆ.

ಬಿಗ್ ಬಾಸ್ ಮನೆಗೆ ಮರಳಿದ ಬಳಿಕ ಮೌನಕ್ಕೆ ಶರಣಾದ ಪ್ರತಾಪ್; ಮೊದಲು ಮಾಡಿದ್ದೇನು?
ಡ್ರೋನ್ ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Jan 06, 2024 | 10:56 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಸಾಕಷ್ಟು ಚರ್ಚೆ ಆಗುತ್ತಿದೆ. ಇತ್ತೀಚೆಗೆ ಬಿಗ್ ಬಾಸ್​ ಮನೆಯಿಂದ ಪ್ರತಾಪ್ ಅವರು ಹೊರ ಹೋಗಿದ್ದರು. ಅವರಿಗೆ ಅನಾರೋಗ್ಯ ಉಂಟಾಗಿತ್ತು. ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಈಗ ಅವರು ಬಿಗ್ ಬಾಸ್​ಗೆ ಮರಳಿದ್ದಾರೆ. ಈ ವೇಳೆ ಅವರು ಮೌನಕ್ಕೆ ಶರಣಾಗಿದ್ದಾರೆ. ಎಲ್ಲರ ಜೊತೆ ಹೆಚ್ಚು ಮಾತನಾಡಲು ಅವರು ಬಯಸಿಲ್ಲ. ಪ್ರತಾಪ್ ಈ ವಾರ ನಾಮಿನೇಟ್ ಆಗಿದ್ದು, ಸೇವ್ ಆಗುತ್ತಾರಾ ಅಥವಾ ಎಲಿಮಿನೇಟ್ ಆಗುತ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.

‘ಬಿಗ್ ಬಾಸ್’ ಮನೆಯಲ್ಲಿ ಪ್ರತಾಪ್ ಅವರು ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ. ಆರಂಭದಲ್ಲಿ ಡಲ್ ಆಗಿದ್ದ ಅವರು ನಂತರ ವೇಗ ಪಡೆದುಕೊಂಡರು. ಆದರೆ, ಇತ್ತೀಚೆಗೆ ಪ್ರತಾಪ್ ಮತ್ತೆ ಡಲ್ ಆಗಿದ್ದರು. ಅವರು ಎರಡು ದಿನ ಊಟ ಮಾಡದ ಕಾರಣ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರತಾಪ್ ಆತ್ಮಹತ್ಯೆಗೆ ಪ್ರಯತ್ನಿಸಿದರು ಎನ್ನುವ ಸುದ್ದಿಯೂ ಹರಿದಾಡಿತ್ತು. ಆದರೆ, ಇದರಲ್ಲಿ ನಿಜವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದರು.

ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಪ್ರತಾಪ್ ಅವರು ಮನೆಗೆ ಮರಳಿರುವುದನ್ನು ತೋರಿಸಲಾಗಿದೆ. ಅವರು ಬರುತ್ತಿದ್ದಂತೆ ದೇವರಿಗೆ ಊದಿನ ಕಡ್ಡಿ ಹಚ್ಚಿ ಪೂಜೆ ಮಾಡಿದ್ದಾರೆ. ಮನೆಯವರು ಮಾತನಾಡಿಸಲು ಪ್ರಯತ್ನಿಸಿದರೂ ಪ್ರತಾಪ್ ಮಾತನಾಡಿಲ್ಲ. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಸುಳಿವಿಲ್ಲ, ಸ್ಪರ್ಧಿಗಳಿಗೆ ಬಿಗ್​ಬಾಸ್ ಕೊಟ್ಟ ಮಾಹಿತಿ ಏನು?

ಪ್ರತಾಪ್ ಆಸ್ಪತ್ರೆ ಸೇರುತ್ತಿರುವುದು ಇದು ಎರಡನೇ ಬಾರಿ. ಈ ಮೊದಲು ಟಾಸ್ಕ್ ಆಡುವಾಗ ಅವರ ಕಣ್ಣಿಗೆ ಹಾನಿ ಆಗಿತ್ತು. ಈ ಕಾರಣಕ್ಕೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈಗ ಅವರು ಮತ್ತೊಮ್ಮೆ ಚಿಕಿತ್ಸೆ ಪಡೆದು ಬಂದಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ