AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಮರಳಿದ ಬಳಿಕ ಮೌನಕ್ಕೆ ಶರಣಾದ ಪ್ರತಾಪ್; ಮೊದಲು ಮಾಡಿದ್ದೇನು?

ಎರಡು ದಿನ ಊಟ ಮಾಡದ ಕಾರಣ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರು ಬಿಗ್ ಬಾಸ್ ಮನೆಗೆ ಮರಳಿದ್ದಾರೆ.

ಬಿಗ್ ಬಾಸ್ ಮನೆಗೆ ಮರಳಿದ ಬಳಿಕ ಮೌನಕ್ಕೆ ಶರಣಾದ ಪ್ರತಾಪ್; ಮೊದಲು ಮಾಡಿದ್ದೇನು?
ಡ್ರೋನ್ ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Jan 06, 2024 | 10:56 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಸಾಕಷ್ಟು ಚರ್ಚೆ ಆಗುತ್ತಿದೆ. ಇತ್ತೀಚೆಗೆ ಬಿಗ್ ಬಾಸ್​ ಮನೆಯಿಂದ ಪ್ರತಾಪ್ ಅವರು ಹೊರ ಹೋಗಿದ್ದರು. ಅವರಿಗೆ ಅನಾರೋಗ್ಯ ಉಂಟಾಗಿತ್ತು. ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಈಗ ಅವರು ಬಿಗ್ ಬಾಸ್​ಗೆ ಮರಳಿದ್ದಾರೆ. ಈ ವೇಳೆ ಅವರು ಮೌನಕ್ಕೆ ಶರಣಾಗಿದ್ದಾರೆ. ಎಲ್ಲರ ಜೊತೆ ಹೆಚ್ಚು ಮಾತನಾಡಲು ಅವರು ಬಯಸಿಲ್ಲ. ಪ್ರತಾಪ್ ಈ ವಾರ ನಾಮಿನೇಟ್ ಆಗಿದ್ದು, ಸೇವ್ ಆಗುತ್ತಾರಾ ಅಥವಾ ಎಲಿಮಿನೇಟ್ ಆಗುತ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.

‘ಬಿಗ್ ಬಾಸ್’ ಮನೆಯಲ್ಲಿ ಪ್ರತಾಪ್ ಅವರು ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ. ಆರಂಭದಲ್ಲಿ ಡಲ್ ಆಗಿದ್ದ ಅವರು ನಂತರ ವೇಗ ಪಡೆದುಕೊಂಡರು. ಆದರೆ, ಇತ್ತೀಚೆಗೆ ಪ್ರತಾಪ್ ಮತ್ತೆ ಡಲ್ ಆಗಿದ್ದರು. ಅವರು ಎರಡು ದಿನ ಊಟ ಮಾಡದ ಕಾರಣ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರತಾಪ್ ಆತ್ಮಹತ್ಯೆಗೆ ಪ್ರಯತ್ನಿಸಿದರು ಎನ್ನುವ ಸುದ್ದಿಯೂ ಹರಿದಾಡಿತ್ತು. ಆದರೆ, ಇದರಲ್ಲಿ ನಿಜವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದರು.

ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಪ್ರತಾಪ್ ಅವರು ಮನೆಗೆ ಮರಳಿರುವುದನ್ನು ತೋರಿಸಲಾಗಿದೆ. ಅವರು ಬರುತ್ತಿದ್ದಂತೆ ದೇವರಿಗೆ ಊದಿನ ಕಡ್ಡಿ ಹಚ್ಚಿ ಪೂಜೆ ಮಾಡಿದ್ದಾರೆ. ಮನೆಯವರು ಮಾತನಾಡಿಸಲು ಪ್ರಯತ್ನಿಸಿದರೂ ಪ್ರತಾಪ್ ಮಾತನಾಡಿಲ್ಲ. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಸುಳಿವಿಲ್ಲ, ಸ್ಪರ್ಧಿಗಳಿಗೆ ಬಿಗ್​ಬಾಸ್ ಕೊಟ್ಟ ಮಾಹಿತಿ ಏನು?

ಪ್ರತಾಪ್ ಆಸ್ಪತ್ರೆ ಸೇರುತ್ತಿರುವುದು ಇದು ಎರಡನೇ ಬಾರಿ. ಈ ಮೊದಲು ಟಾಸ್ಕ್ ಆಡುವಾಗ ಅವರ ಕಣ್ಣಿಗೆ ಹಾನಿ ಆಗಿತ್ತು. ಈ ಕಾರಣಕ್ಕೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈಗ ಅವರು ಮತ್ತೊಮ್ಮೆ ಚಿಕಿತ್ಸೆ ಪಡೆದು ಬಂದಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು