AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಮನೆಯಲ್ಲಿ ರಾತ್ರೋರಾತ್ರಿ ಬದಲಾದ ಡ್ರೋನ್ ಪ್ರತಾಪ್

ಡ್ರೋನ್ ಕಂಡು ಹಿಡಿದಿದ್ದೇನೆ ಎಂದು ಖ್ಯಾತಿ ಪಡೆದವರು ಪ್ರತಾಪ್. ಆ ಬಳಿಕ ಅವರು ಡ್ರೋನ್ ಕಂಡು ಹಿಡಿದೇ ಇರಲಿಲ್ಲ ಎನ್ನುವ ವಿಚಾರ ತಿಳಿಯಿತು. ಇದಾದ ಬಳಿಕ ಅವರನ್ನು ಜನರು ಟ್ರೋಲ್ ಮಾಡೋಕೆ ಆರಂಭಿಸಿದರು. ಅವರಿಗೆ ಬಿಗ್ ಬಾಸ್​ಗೆ ಹೋಗೋಕೆ ಈ ಟ್ರೋಲ್ ಕೂಡ ಕಾರಣ ಎಂದರೂ ತಪ್ಪಾಗಲಾರದು.

‘ಬಿಗ್ ಬಾಸ್’ ಮನೆಯಲ್ಲಿ ರಾತ್ರೋರಾತ್ರಿ ಬದಲಾದ ಡ್ರೋನ್ ಪ್ರತಾಪ್
ಡ್ರೋನ್ ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on:Oct 12, 2023 | 7:39 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೊದಲ ವಾರದಲ್ಲೇ ಜಗಳಗಳು ಆರಂಭ ಆಗಿವೆ. ಅನೇಕರು ಕಿತ್ತಾಡಿಕೊಂಡಿದ್ದಾರೆ. ಅಸಮರ್ಥರು ಹಾಗೂ ಸಮರ್ಥರ ನಡುವೆ ಮನಸ್ತಾಪ ಉಂಟಾಗುತ್ತಿದೆ. ನಿಯಮ ಪಾಲನೆ ವಿಚಾರದಲ್ಲಿ ಕಿರಿಕ್​ಗಳು ಆಗುತ್ತಿವೆ. ಈ ಎಲ್ಲಾ ವಿಚಾರಗಳು ವೀಕೆಂಡ್​ನಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಈ ಮಧ್ಯೆ ಡ್ರೋನ್ ಪ್ರತಾಪ್ (Drone Prathap) ಅವರು ಕೂಡ ಹೈಲೈಟ್ ಆಗುತ್ತಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಅವರು ರಾತ್ರೋರಾತ್ರಿ ಬದಲಾಗಿದ್ದಾರೆ.

ಡ್ರೋನ್ ಕಂಡು ಹಿಡಿದಿದ್ದೇನೆ ಎಂದು ಖ್ಯಾತಿ ಪಡೆದವರು ಪ್ರತಾಪ್. ಆ ಬಳಿಕ ಅವರು ಡ್ರೋನ್ ಕಂಡು ಹಿಡಿದೇ ಇರಲಿಲ್ಲ ಎನ್ನುವ ವಿಚಾರ ತಿಳಿಯಿತು. ಇದಾದ ಬಳಿಕ ಅವರನ್ನು ಜನರು ಟ್ರೋಲ್ ಮಾಡೋಕೆ ಆರಂಭಿಸಿದರು. ಅವರಿಗೆ ಬಿಗ್ ಬಾಸ್​ಗೆ ಹೋಗೋಕೆ ಈ ಟ್ರೋಲ್ ಕೂಡ ಕಾರಣ ಎಂದರೂ ತಪ್ಪಾಗಲಾರದು. ಈಗ ಅವರು ಬಿಗ್ ಬಾಸ್ ಮನೆಯಲ್ಲಿ ರಾತ್ರೋರಾತ್ರಿ ಬದಲಾಗಿದ್ದಾರೆ.

‘ನಾನು ಒಂದು ವಾರ ಇರಬಹುದು ಅಷ್ಟೇ, ಆ ಬಳಿಕ ಮನೆಯಿಂದ ಹೋಗ್ತೀನಿ’ ಎಂದು ಪ್ರತಾಪ್ ಹೇಳಿದ್ದರು. ನಾಮಿನೇಷನ್ ವೇಳೆ ಈ ವಿಚಾರ ಚರ್ಚೆಗೆ ಬಂತು. ಅನೇಕರು ಇದೇ ಕಾರಣ ನೀಡಿ ಪ್ರತಾಪ್ ಅವರನ್ನು ನಾಮಿನೇಟ್ ಮಾಡಿದರು. ನಾಮಿನೇಷನ್​ಗೆ ಈ ಕಾರಣ ನೀಡಿದ್ದನ್ನು ನೋಡಿ ಪ್ರತಾಪ್​ಗೆ ಸರಿ ಎನಿಸಲಿಲ್ಲ. ಹೀಗಾಗಿ ಅವರು ಬೇಸರ ಮಾಡಿಕೊಂಡರು. ಅಲ್ಲದೆ, ಬದಲಾಗಲು ನಿರ್ಧರಿಸಿದರು.

ಇದನ್ನೂ ಓದಿ: ಡ್ರೋನ್​ ಪ್ರತಾಪ್​ಗೆ ಡೋಂಗಿ ಎಂದು ಕರೆದ ಸ್ಪರ್ಧಿಗಳು; ಬಿಗ್ ಬಾಸ್ ಮನೆಯಲ್ಲಿ ಕಾವೇರಿತು ಚರ್ಚೆ

‘ನಾನು ಇದನ್ನು ಚಾಲೆಂಜ್ ಆಗಿ ಸ್ವೀಕರಿಸಿದ್ದೀನಿ. ಇಷ್ಟು ದಿನ ಒಂದು ವಾರ ಇದ್ರೆ ಸಾಕು ಎಂದುಕೊಂಡಿದ್ದೆ. ಆದರೆ, ಈಗ ಹಾಗಲ್ಲ. ಕೊನೆಯವರೆಗೂ ಇರ್ತೀನಿ. ಒಂದೊಮ್ಮೆ ಇರೋಕೆ ಆಗಿಲ್ಲ ಎಂದರೆ ಕೊನೆಯವರೆಗೂ ಫೈಟ್ ಮಾಡ್ತೀನಿ’ ಎಂದು ಎಲ್ಲರ ಎದುರು ಓಪನ್ ಆಗಿ ಹೇಳಿದರು ಪ್ರತಾಪ್. ‘ರಾತ್ರೋರಾತ್ರಿ ಬದಲಾಗಿಬಿಟ್ಟೆಯಲ್ಲ’ ಎಂದು ಪ್ರತಾಪ್ ಬಗ್ಗೆ ಕೆಲವರು ಮೆಚ್ಚುಗೆ ಸೂಚಿಸಿದರು.  ಡ್ರೋನ್ ವಿಚಾರ ಇಟ್ಟುಕೊಂಡು ಕೆಲವರು ಪ್ರತಾಪ್ ಅವರನ್ನು ಟೀಕಿಸಿದ್ದಾರೆ. ಈ ವಿಚಾರ ದೊಡ್ಮನೆಯಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಶೋ ರಾತ್ರಿ 9:30ಕ್ಕೆ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಶೋ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Thu, 12 October 23

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?