AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಕಿಚ್ಚನ ಬೆಂಬಲ ಸಿಕ್ಕ ಬಳಿಕ ಬದಲಾಯ್ತು ಡ್ರೋನ್​ ಪ್ರತಾಪ್​ ವರಸೆ; ಎಲ್ಲರಿಗೂ ಶಾಕ್​

Drone Prathap: ಪ್ರತಾಪ್​ ಅವರು ಎಲ್ಲರೊಂದಿಗೆ ಬೆರೆಯಬೇಕು ಎಂಬುದು ಬಹುತೇಕರ ಅಭಿಪ್ರಾಯ ಆಗಿತ್ತು. ಅವರು ಯಾವಾಗಲೂ ಚಿಂತೆಯಲ್ಲಿ ಮುಳುಗಿರುತ್ತಾರೆ ಎಂದು ಆರೋಪಿಸಲಾಗಿತ್ತು. ಆದರೆ ಈಗ ಎಲ್ಲವೂ ಬದಲಾಗಿದೆ. ಪ್ರತಾಪ್​ ಅವರಲ್ಲಿ ಆಗಿರುವ ಬದಲಾವಣೆ ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ಅದರ ಝಲಕ್​ ಇಲ್ಲಿದೆ..

Bigg Boss Kannada: ಕಿಚ್ಚನ ಬೆಂಬಲ ಸಿಕ್ಕ ಬಳಿಕ ಬದಲಾಯ್ತು ಡ್ರೋನ್​ ಪ್ರತಾಪ್​ ವರಸೆ; ಎಲ್ಲರಿಗೂ ಶಾಕ್​
ಬಿಗ್​ ಬಾಸ್​ ಕನ್ನಡ ಸೀಸನ್​ 10
ಮದನ್​ ಕುಮಾರ್​
|

Updated on: Oct 15, 2023 | 2:34 PM

Share

ಈ ಬಾರಿ ಬಿಗ್ ಬಾಸ್​ (Bigg Boss Kannada) ಮನೆಯಲ್ಲಿ ಸ್ಪರ್ಧಿಸುತ್ತಿರುವ ಸದಸ್ಯರ ಪೈಕಿ ಮೊದಲ ವಾರದಲ್ಲೇ ಅತಿ ಹೆಚ್ಚು ಚರ್ಚೆಗೆ ಒಳಗಾದ ವ್ಯಕ್ತಿ ಎಂದರೆ ಅದು ಡ್ರೋನ್​ ಪ್ರತಾಪ್​. ಹಲವು ಕಾರಣಗಳಿಂದಾಗಿ ಅವರನ್ನು ಟಾರ್ಗೆಟ್​ ಮಾಡಲಾಗಿತ್ತು. ಮೊದಲನೆಯದಾಗಿ ಅವರು ಅಸಮರ್ಥರ ಗುಂಪಿನಲ್ಲಿ ಇದ್ದರು. ಎರಡನೆಯದಾಗಿ ಅವರನ್ನು ಅನೇಕರು ಹೀಯಾಳಿಸಿದ್ದರು. ಆ ನೋವಿನಿಂದಾಗಿ ಪ್ರತಾಪ್​ (Drone Prathap) ಅವರು ಕಣ್ಣೀರು ಹಾಕಿದ್ದರು. ಆದರೆ ಶನಿವಾರದ (ಅಕ್ಟೋಬರ್​ 14) ಎಪಿಸೋಡ್​ನಲ್ಲಿ ಪ್ರತಾಪ್​ ಅವರಿಗೆ ಕಿಚ್ಚ ಸುದೀಪ್​ (Kichcha Sudeep) ಕಡೆಯಿಂದ ಬೆಂಬಲ ಸಿಕ್ಕಿತು. ಇನ್ನುಳಿದವರಿಗೆ ಕಿಚ್ಚ ಕ್ಲಾಸ್​ ತೆಗೆದುಕೊಂಡರು. ಸುದೀಪ್​ ತುಂಬಿದ ಧೈರ್ಯದಿಂದ ಪ್ರತಾಪ್​ ಸಂಪೂರ್ಣ ಬದಲಾಗಿದ್ದಾರೆ. ಅದರ ಝಲಕ್ ತೋರಿಸಲು ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ.

ಇಂದು (ಅಕ್ಟೋಬರ್ 15) ಮೊದಲ ವಾರದ ಎಲಿಮಿನೇಷನ್​ ನಡೆಯಲಿದೆ. ಅದಕ್ಕೂ ಮುನ್ನ ಸುದೀಪ್​ ಅವರು ಎಲ್ಲರನ್ನೂ ಮಾತನಾಡಿಸಲಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ನ್ಯಾಯದ ತಕ್ಕಡಿ ಏರುಪೇರಾದರೆ ಅದನ್ನು ಸುದೀಪ್​ ಅವರು ಸರಿಪಡಿಸುತ್ತಾರೆ. ಸ್ಪರ್ಧಿಗಳ ತಪ್ಪುಗಳನ್ನು ತಿದ್ದಿ ಹೇಳುತ್ತಾರೆ. ಪ್ರತಾಪ್​ರನ್ನು ನಿಂದಿಸಿದವರಿಗೆ ಕಿಚ್ಚ ಕಿವಿಮಾತು ಹೇಳಿದ್ದರಿಂದ ಪ್ರತಾಪ್​ ಅವರಿಗೆ ಏನೋ ಒಂದು ರೀತಿಯ ಸಮಾಧಾನ ಸಿಕ್ಕಂತೆ ಆಗಿದೆ. ಅಲ್ಲದೇ ಪ್ರತಾಪ್​ ಬಗ್ಗೆ ಇನ್ನುಳಿದವರಿಗೆ ಇದ್ದ ಭಾವನೆ ಕೂಡ ಬದಲಾಗಿದೆ.

ಪ್ರತಾಪ್​ ಅವರು ಎಲ್ಲರೊಂದಿಗೆ ಬೆರೆಯಬೇಕು ಎಂಬುದು ಬಹುತೇಕರ ಅಭಿಪ್ರಾಯ ಆಗಿತ್ತು. ಅವರು ಯಾವಾಗಲೂ ಚಿಂತೆಯಲ್ಲಿ ಮುಳುಗಿರುತ್ತಾರೆ ಎಂದು ಆರೋಪಿಸಲಾಗಿತ್ತು. ಆದರೆ ಈಗ ಎಲ್ಲವೂ ಬದಲಾಗಿದೆ. ಪ್ರತಾಪ್​ ಅವರು ತನಿಶಾ ಕುಪ್ಪಂಡ ಮತ್ತು ಸಂಗೀತಾ ಶೃಂಗೇರಿ ಜೊತೆ ಸೇರಿ ರ‍್ಯಾಂಪ್​ ವಾಕ್​ ಮಾಡಿದ್ದಾರೆ. ಅಷ್ಟೇ ಅಲ್ಲದೇ ಭರ್ಜರಿಯಾಗಿ ಡ್ಯಾನ್ಸ್​ ಕೂಡ ಮಾಡಿದ್ದಾರೆ. ಅವರಲ್ಲಿ ಆಗಿರುವ ಬದಲಾವನೆ ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ಮನೆಯಲ್ಲಿ ಈ ಮೊದಲು ಉಂಟಾಗಿದ್ದ ಬಿಗುವಿನ ವಾತಾವರಣವನ್ನು ತಿಳಿಗೊಳಿಸಿದ್ದಕ್ಕಾಗಿ ಕಿಚ್ಚ ಸುದೀಪ್​ ಅವರಿಗೆ ಪ್ರೇಕ್ಷಕರು ಭೇಷ್​ ಎನ್ನುತ್ತಿದ್ದಾರೆ.

ಇದನ್ನೂ ಓದಿ: ಹರಕೆ ಕುರಿಯಂತಾಗಿದ್ದ ಡ್ರೋನ್ ಪ್ರತಾಪ್ ಬೆಂಬಲಕ್ಕೆ ನಿಂತ ಸುದೀಪ್, ಕ್ಷಮೆ ಕೇಳಿದ ಸಂತೋಶ್

‘ಪ್ರತಾಪ್​ ಓಪನ್ಅಪ್​ ಆಗಬೇಕು ಎಂದು ತುಕಾಲಿ ಅವರೇ ನೀವು ಹೇಳ್ತಾಯಿದ್ರಿ. ಓಪನ್​ಅಪ್​ ಮಾಡಿಸುವುದು ಎಂದರೆ ಹೀಗೆ ಸರ್​.. ನಮ್ಮದು ವರ್ತೂರು ಟೊಮ್ಯಾಟೋ ಅಲ್ಲ. ನಾಟಿ ಟೊಮ್ಯಾಟೋ.. ವೆರಿ ನಾಟಿ’ ಎಂದು ಕಿಚ್ಚ ಸುದೀಪ್​ ಅವರು ಹೇಳಿದ ಡೈಲಾಗ್​ ಹೇಳಿ ಎಲ್ಲರೂ ನಕ್ಕಿದ್ದಾರೆ. ಒಟ್ಟಿನಲ್ಲಿ ‘ಸೂಪರ್​ ಸಂಡೇ ವಿತ್​ ಸುದೀಪ​’ ಸಂಚಿಕೆ ಸಖತ್​ ಫನ್​ ಆಗಿರಲಿದೆ ಎಂಬುದಕ್ಕೆ ಈ ಪ್ರೋಮೋ ಸಾಕ್ಷಿ ಒದಗುಸುತ್ತಿದೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರತಿ ದಿನ ರಾತ್ರಿ 9.30ಕ್ಕೆ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ‘ಜಿಯೋ ಸಿನಿಮಾ’ ಮೂಲಕ 24 ಗಂಟೆ ಉಚಿತವಾಗಿ ಈ ಶೋ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು