AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್​ ಜೊತೆ ವಾಗ್ವಾದ, ಪ್ರಶ್ನಿಸುವ ಧೈರ್ಯ ಪ್ರದರ್ಶಿಸಿದ ಡ್ರೋನ್ ಪ್ರತಾಪ್

Drone Prathap: ವಿನಯ್​ ಕಾರ್ಯಗಳನ್ನು ಸಂಗೀತಾ ಬಿಟ್ಟರೆ ಇನ್ಯಾರು ಪ್ರಶ್ನಿಸುವುದಿಲ್ಲ ಎಂದಾಗಿತ್ತು, ಈಗ ಡ್ರೋನ್ ಪ್ರತಾಪ್ ಪ್ರಶ್ನೆ ಮಾಡಿದ್ದಾರೆ.

ವಿನಯ್​ ಜೊತೆ ವಾಗ್ವಾದ, ಪ್ರಶ್ನಿಸುವ ಧೈರ್ಯ ಪ್ರದರ್ಶಿಸಿದ ಡ್ರೋನ್ ಪ್ರತಾಪ್
ಡ್ರೋನ್ ಪ್ರತಾಪ್
ಮಂಜುನಾಥ ಸಿ.
|

Updated on: Dec 24, 2023 | 3:50 PM

Share

ಬಿಗ್​ಬಾಸ್ (BiggBoss) ಮನೆಯಲ್ಲಿ ವಿನಯ್ ಒಂದು ರೀತಿ ಪ್ರಶ್ನಾತೀತರಾಗಿಬಿಟ್ಟಿದ್ದಾರೆ. ಅವರು ತಪ್ಪು ಮಾಡಿದಾಗ ಸಂಗೀತಾರನ್ನು ಹೊರತುಪಡಿಸಿ ಇನ್ಯಾರೂ ಪ್ರಶ್ನಿಸುವುದಿಲ್ಲ. ಎದುರಾಳಿ ತಂಡದಲ್ಲಿದ್ದಾಗ ಕಾರ್ತಿಕ್ ಆಗಾಗ್ಗೆ ವಿನಯ್​ ಹೇಳಿದ ಮಾತಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಆದರೆ ಈಗ ಇಬ್ಬರೂ ಒಂದೇ ತಂಡವಾದ ಬಳಿಕ ವಿನಯ್​ರ ಮಾತುಗಳನ್ನು, ವರ್ತನೆಯನ್ನು ಪ್ರಶ್ನಿಸುವವರೇ ಇಲ್ಲದಂತಾಗಿದೆ. ಆದರೆ ಇದೀಗ ಡ್ರೋನ್ ಪ್ರತಾಪ್ ಸಹ ವಿನಯ್​ರನ್ನು ಪ್ರಶ್ನಿಸಲು ತೊಡಗಿದ್ದಾರೆ.

ಆರಂಭದ ಕೆಲ ವಾರಗಳಲ್ಲಿ ವಿನಯ್, ಡ್ರೋನ್ ಪ್ರತಾಪ್​ ವಿರುದ್ಧ ಕೆಲವು ಬಾರಿ ವಾಗ್ದಾಳಿ ಮಾಡಿದ್ದರು. ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡಿದ್ದರು. ನನ್ನ ತಂಟೆಗೆ ಬರಬೇಡ ಎಂದು ಎಚ್ಚರಿಕೆ ಸಹ ನೀಡಿದ್ದರು. ಆಗೆಲ್ಲ ಭಯದಿಂದಾಗಿ ಸುಮ್ಮನಾಗಿದ್ದರು ಡ್ರೋನ್ ಪ್ರತಾಪ್, ಅದಾದ ಬಳಿಕ ವಿನಯ್​ರಿಂದ ಬಹುತೇಕ ದೂರವೇ ಉಳಿದಿದ್ದರು. ವಿನಯ್ ಸಹ ಡ್ರೋನ್ ಪ್ರತಾಪ್​ ತಂಟೆಗೆ ಹೆಚ್ಚಾಗಿ ಹೋಗಿರಲಿಲ್ಲ. ಆದರೆ ಇತ್ತೀಚೆಗೆ ಪ್ರತಾಪ್, ಮನೆಯ ಕೆಲವರ ಮಾತು ಕೇಳಿ ಮುದ್ದೆ ಮಾಡಿದ್ದರು. ಇದರಿಂದ ಇತರರಿಗೆ ಊಟ ಬರಲಿಲ್ಲ. ಆ ಸಮಯದಲ್ಲಿ ವಿನಯ್, ಪದೇ ಪದೆ ಪ್ರತಾಪ್ ವಿರುದ್ಧ ಬೆದರಿಕೆ ಹಾಕುವ ರೀತಿ ಮಾತನಾಡಿದ್ದರು. ಆಗ ಪ್ರತಾಪ್ ಕ್ಷಮೆ ಕೇಳಿದ್ದರು.

ಇದನ್ನೂ ಓದಿ:ಬಿಗ್​ಬಾಸ್ ಸ್ಪರ್ಧಿಗಳ ಹರಾಜು ಯಾರಿಗೆ ಎಷ್ಟು ಹಣ?

ಶನಿವಾರ ಪ್ರಸಾರವಾದ ಎಪಿಸೋಡ್​ನಲ್ಲಿ ವಿನಯ್​ ಮಾಡಿದ ತಪ್ಪಿನಿಂದಾಗಿ ಮನೆಯ ಸದಸ್ಯರು ಲಕ್ಷುರಿ ಬಜೆಟ್ ಕಳೆದುಕೊಂಡರು. ವಿನಯ್, ಬಜರ್ ಆಗುವ ಮುನ್ನವೇ ಟಿವಿ ಆನ್ ಮಾಡಿದ್ದರಿಂದ ಈ ವಾರವೂ ಲಕ್ಷುರಿ ಬಜೆಟ್ ಹೋಯ್ತು. ಇದರ ಬಗ್ಗೆ ಮನೆಯ ಯಾವ ಸದಸ್ಯರು ವಿನಯ್ ಎದುರು ಪ್ರಶ್ನೆ ಮಾಡಿರಲಿಲ್ಲ. ಆದರೆ ಡ್ರೋನ್ ಪ್ರತಾಪ್ ಮಾಡಿದರು. ನೀವು ಮಾಡಿದ ತಪ್ಪಿನಿಂದಲೇ ಮನೆಯ ಸದಸ್ಯರಿಗೆ ಲಕ್ಷುರಿ ಬಜೆಟ್ ಹೋಯ್ತು ಎಂದರು. ಅದಕ್ಕೆ ಏನೀಗ? ಎಂದು ಬೆದರಿಕೆ ದ್ವನಿಯಲ್ಲಿ ವಿನಯ್ ಪ್ರತಿಕ್ರಿಯೆ ನೀಡಿದರು. ವಿನಯ್ ಯಾವ ಟೋನ್​ನಲ್ಲಿ ಉತ್ತರ ನೀಡಿದರೋ ಅದೇ ಟೋನ್​ನಲ್ಲಿ ಪ್ರತ್ಯುತ್ತರಗಳನ್ನು ಡ್ರೋನ್ ನೀಡಿದರು.

ಇದರಿಂದ ಸಿಟ್ಟಾದ ವಿನಯ್, ಬಳಿಕ ಶ್ರುತಿ ನಡೆಸಿಕೊಟ್ಟ ನ್ಯಾಯಾಲಯದಲ್ಲಿ ಡ್ರೋನ್ ಪ್ರತಾಪ್ ಬಗ್ಗೆ ಹಲವು ದೂರುಗಳನ್ನು ಹೇಳಿದರು. ಆದರೆ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಡ್ರೋನ್ ಪ್ರತಾಪ್, ತಮ್ಮ ಮೇಲೆ ಬಂದ ಆರೋಪಗಳಿಗೆ ಸ್ಪಷ್ಟನೆಗಳನ್ನು ನೀಡಿದರು. ಡ್ರೋನ್ ಪ್ರತಾಪ್ ಬಿಗ್​ಬಾಸ್ ಮನೆಗೆ ಬಂದ ಆರಂಭದಲ್ಲಿ ನಾಚಿಕೆ ಸ್ವಭಾವದ, ಹೆದರಿಕೆ ಸ್ವಭಾವದ ವ್ಯಕ್ತಿಯಾಗಿದ್ದರು. ಆದರೆ ಈಗ ಹಾಗಿಲ್ಲ, ವಿನಯ್, ತುಕಾಲಿ ಸಂತೋಷ್ ಎಲ್ಲರಿಗೂ ಪ್ರತ್ಯುತ್ತರಗಳನ್ನು ಧೈರ್ಯದಿಂದ ನೀಡುತ್ತಿದ್ದಾರೆ. ಡ್ರೋನ್ ಪ್ರತಾಪ್ ಫಿನಾಲೆಗೆ ಬರುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ