AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕಪ್​ ಮಾಡಿಕೊಂಡು ಹೊಸ ಅವತಾರದಲ್ಲಿ ಪ್ರತಾಪ್​ ಎಂಟ್ರಿ; ತುಕಾಲಿ ಸಂತೋಷ್​ ಕಂಗಾಲು

ಬಿಗ್ ಬಾಸ್​ ಫಿನಾಲೆಯಲ್ಲಿ ರನ್ನರ್​ಅಪ್​ ಆದ ಡ್ರೋನ್​ ಪ್ರತಾಪ್​ ಅವರು ಕರ್ನಾಟಕದಲ್ಲಿ ಫುಲ್ ಫೇಮಸ್​ ಆಗಿದ್ದಾರೆ. ಆ ಶೋ ಮುಗಿದ ಕೂಡಲೇ ‘ಗಿಚ್ಚಿ ಗಿಲಿಗಿಲಿ’ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಅವಕಾಶ ಅವರಿಗೆ ಸಿಕ್ಕಿದೆ. ಬಿಗ್​ ಬಾಸ್​ ಮನೆಯೊಳಗೆ ಇದ್ದಾಗ ಸಿಂಪಲ್​ ಆಗಿ ಕಾಣಿಸಿಕೊಳ್ಳುತ್ತಿದ್ದ ಪ್ರತಾಪ್​ ಅವರು ಈಗ ಬದಲಾಗಿದ್ದಾರೆ. ಮೇಕಪ್​ ಹಚ್ಚಿಕೊಂಡು ಮಿಂಚುತ್ತಿದ್ದಾರೆ. ಅವರ ಬದಲಾದ ಗೆಟಪ್​ ನೋಡಿ ತುಕಾಲಿ ಸಂತೋಷ್​ ಅವರಿಗೆ ಅಚ್ಚರಿ ಆಗಿದೆ.

ಮೇಕಪ್​ ಮಾಡಿಕೊಂಡು ಹೊಸ ಅವತಾರದಲ್ಲಿ ಪ್ರತಾಪ್​ ಎಂಟ್ರಿ; ತುಕಾಲಿ ಸಂತೋಷ್​ ಕಂಗಾಲು
ಡ್ರೋನ್​ ಪ್ರತಾಪ್​, ತುಕಾಲಿ ಸಂತೋಷ್
ಮದನ್​ ಕುಮಾರ್​
|

Updated on: Feb 02, 2024 | 2:53 PM

Share

ಇತ್ತೀಚೆಗೆ ಮುಕ್ತಾಯವಾದ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ಶೋ ಮೂಲಕ ಡ್ರೋನ್​ ಪ್ರತಾಪ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಮೊದಲೆಲ್ಲ ಡ್ರೋನ್​ ಕುರಿತಾದ ವಿವಾದದಿಂದ ಸುದ್ದಿ ಆಗುತ್ತಿದ್ದ ಅವರು ಬಿಗ್​ ಬಾಸ್​ ಶೋಗೆ ಬಂದ ಬಳಿಕ ಬೇರೆಯದೇ ಇಮೇಜ್​ ಪಡೆದುಕೊಂಡರು. ಅವರೊಳಗೆ ಓರ್ವ ಕಲಾವಿದ ಇದ್ದಾನೆ ಎಂದು ಅನೇಕರು ಹೇಳಿದ್ದುಂಟು. ಈಗ ಡ್ರೋನ್​ ಪ್ರತಾಪ್​ (Drone Prathap) ನಿಜಕ್ಕೂ ಕಲಾವಿದ ಆಗಿದ್ದಾರೆ! ಝಗಮಗಿಸುವ ವೇದಿಕೆಯ ಮೇಲೆ ಅವರು ಹೆಜ್ಜೆ ಹಾಕಿದ್ದಾರೆ. ‘ಗಿಚ್ಚಿ ಗಿಲಿಗಿಲಿ ಸೀಸನ್​ 3’ ಕಾರ್ಯಕ್ರಮದಲ್ಲಿ ಅವರು ಡ್ಯಾನ್ಸ್​ ಮಾಡಿದ್ದಾರೆ. ಅವರ ಹೊಸ ಅವತಾರ ನೋಡಿ ತುಕಾಲಿ ಸಂತೋಷ್​ (Tukali Santhosh) ಕಂಗಾಲಾಗಿದ್ದಾರೆ.

ಡ್ರೋನ್​ ಪ್ರತಾಪ್​ ಅವರು ಬಿಗ್ ಬಾಸ್​ ಫಿನಾಲೆಯಲ್ಲಿ ರನ್ನರ್​ಅಪ್​ ಆಗಿ ಹೊರಹೊಮ್ಮಿದರು. ಕೂಡಲೇ ಅವರಿಗೆ ‘ಗಿಚ್ಚಿ ಗಿಲಿ ಗಿಲಿ’ ಶೋನಲ್ಲಿ ಕಾಣಿಸಿಕೊಳ್ಳುವ ಅವಕಾಶ ಸಿಕ್ಕಿದೆ. ದೊಡ್ಮನೆಯಲ್ಲಿ ಸಿಂಪಲ್​ ಆಗಿ ಇರುತ್ತಿದ್ದ ಪ್ರತಾಪ್​ ಅವರು ಈಗ ಮೇಕಪ್​ ಹಚ್ಚಿಕೊಂಡು ಮಿಂಚಲು ಶುರು ಮಾಡಿದ್ದಾರೆ. ಅವರ ಗೆಟಪ್​ ಬದಲಾಗಿದ್ದು ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ. ತುಕಾಲಿ ಸಂತೋಷ್​ ಅವರು ಅಚ್ಚರಿಯಿಂದ ನೋಡಿದ್ದಾರೆ.

ಇದನ್ನೂ ಓದಿ: ಡ್ರೋನ್ ಪ್ರತಾಪ್​ಗೆ ಸಿನಿಮಾ-ಧಾರಾವಾಹಿ ಆಫರ್​ಗಳು ಬಂದಿವೆಯೇ? ಒಪ್ಪಿಕೊಂಡಿದ್ದಾರಾ?

ಒಂದು ಕಾಲದಲ್ಲಿ ಡ್ರೋನ್​ ಪ್ರತಾಪ್​ ಅವರನ್ನು ಎಲ್ಲರೂ ಟ್ರೋಲ್​ ಮಾಡುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಅವರಿಗೂ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರನ್ನು ಬೆಂಬಲಿಸುವವರ ಸಂಖ್ಯೆ ಹೆಚ್ಚಾಗಿದೆ. ಬಿಗ್ ಬಾಸ್​ ಫಿನಾಲೆಯಲ್ಲಿ ಅವರಿಗೆ 2 ಕೋಟಿಗೂ ಅಧಿಕ ವೋಟ್ಸ್​ ಬಂದಿದ್ದವು. ಪ್ರತಾಪ್​ ಅವರಿಗೆ ಎಷ್ಟು ಜನ ಬೆಂಬಲ ಇದೆ ಎಂಬುದಕ್ಕೆ ಈ ಸಂಖ್ಯೆಯೇ ಸಾಕ್ಷಿ. ಈಗ ‘ಗಿಚ್ಚಿ ಗಿಲಿಗಿಲಿ ಸೀಸನ್​ 3’ ಕಾರ್ಯಕ್ರಮದಿಂದ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಲಿದೆ.

‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡ ‘ಗಿಚ್ಚಿ ಗಿಲಿಗಿಲಿ 3’ ಕಾರ್ಯಕ್ರಮದ ಪ್ರೋಮೋ:

‘ಗಿಚ್ಚಿ ಗಿಲಿಗಿಲಿ 3’ ಕಾರ್ಯಕ್ರಮದ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಇದನ್ನು ನೋಡಿ ನೆಟ್ಟಿಗರು ಪ್ರತಾಪ್​ ಅವರ ಡ್ಯಾನ್ಸ್​ಗೆ ಮೆಚ್ಚುಗೆ ಸೂಚಿಸಿದ್ದಾರೆ. ಈ ಶೋನ ನಿರ್ಣಾಯಕರಾಗಿ ಶ್ರುತಿ, ಸಾಧು ಕೋಕಿಲ, ಕೋಮಲ್​ ಇರಲಿದ್ದಾರೆ. ನಿರಂಜನ್​ ಅವರಿಗೆ ನಿರೂಪಣೆಯ ಜವಾಬ್ದಾರಿ ನೀಡಲಾಗಿದೆ. ಶನಿವಾರ (ಫೆಬ್ರವರಿ 3) ಅದ್ದೂರಿಯಾಗಿ ಈ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಮಾಜಿ ಬಿಗ್​ ಬಾಸ್​ ಸ್ಪರ್ಧಿ ಮಂಜು ಪಾವಗಡ ಕೂಡ ಈ ಕಾರ್ಯಕ್ರದಲ್ಲಿ ಮನರಂಜನೆ ನೀಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​