AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್​ ಎಲಿಮಿನೇಟ್​ ಆದ್ರೂ ಹೊರಗೆ ಹೋಗಲಿಲ್ಲ: ಸುದೀಪ್​ ಕಾರಣದಿಂದ ನಡೆಯಿತು ಅಚ್ಚರಿ

6 ಮತ​ಗಳಲ್ಲಿ 3 ಮತಗಳು ಡ್ರೋನ್​ ಪ್ರತಾಪ್​ಗೆ ಬಂದಿದ್ದರಿಂದ ಅವರು ಎಲಿಮಿನೇಟ್​ ಆಗಬೇಕಾಯಿತು. ‘ಬಹುಮತದ ಅನುಸಾರ ಪ್ರತಾಪ್​ ಅವರ ಪಯಣ ಈ ಮನೆಯಲ್ಲಿ ಇಲ್ಲಿಗೆ ಮುಕ್ತಾಯ ಆಗುತ್ತದೆ. ನೀವು ಮುಖ್ಯ ದ್ವಾರದಿಂದ ಹೊರಬರಲು 5 ನಿಮಿಷ ಅವಕಾಶ ಇದೆ’ ಎಂದು ಬಿಗ್​ ಬಾಸ್​ ಘೋಷಿಸಿದರು. ಆದರೆ ಪ್ರತಾಪ್​ಗೆ ಸುದೀಪ್​ ಕಡೆಯಿಂದ ದೊಡ್ಡ ಉಡುಗೊರೆ ಸಿಕ್ಕಿತು.

ಪ್ರತಾಪ್​ ಎಲಿಮಿನೇಟ್​ ಆದ್ರೂ ಹೊರಗೆ ಹೋಗಲಿಲ್ಲ: ಸುದೀಪ್​ ಕಾರಣದಿಂದ ನಡೆಯಿತು ಅಚ್ಚರಿ
ಡ್ರೋನ್​ ಪ್ರತಾಪ್​, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jan 25, 2024 | 10:16 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (BBK 10) ಶೋನಲ್ಲಿ ಹಲವು ಟ್ವಿಸ್ಟ್​ಗಳು ಎದುರಾಗಿವೆ. ಕೊನೇ ವಾರದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡ್ರೋನ್ ಪ್ರತಾಪ್​ ಅವರು ಎಲಿಮಿನೇಟ್​ ಆದರೂ ಕೂಡ ಬಿಗ್​ ಬಾಸ್​ ಮನೆಯಿಂದ ಹೊರಗೆ ಬರಲಿಲ್ಲ. ಈ ಅಚ್ಚರಿಗೆ ಕಿಚ್ಚ ಸುದೀಪ್​ (Kichcha Sudeep) ಅವರೇ ಕಾರಣ. ಫಿನಾಲೆ ವಾರದಲ್ಲಿ ವರ್ತೂರು ಸಂತೋಷ್​, ತುಕಾಲಿ ಸಂತೋಷ್​, ಕಾರ್ತಿಕ್​ ಮಹೇಶ್​, ಸಂಗೀತಾ ಶೃಂಗೇರಿ, ವಿನಯ್​ ಗೌಡ ಹಾಗೂ ಡ್ರೋನ್​ ಪ್ರತಾಪ್​ (Drone Prathap) ಇದ್ದಾರೆ. ಮಿಡ್​ ವೀಕ್ ಎಲಿಮಿನೇಷನ್​ನಲ್ಲಿ ಡ್ರೋನ್​ ಪ್ರತಾಪ್​ ಆಟ ಅಂತ್ಯವಾಗಬೇಕಿತ್ತು. ಆದರೆ ಬಿಗ್​ ಬಾಸ್​ ಒಂದು ಟ್ವಿಸ್ಟ್​ ನೀಡಿದರು.

ಎಲಿಮಿನೇಷನ್​ ನಡೆದಿದ್ದು ಹೇಗೆ?

‘ಮೊದಲ ಬಾರಿಗೆ ಮನೆಯ ಸದಸ್ಯರ ವೋಟ್​ನ ಆಧಾರದಲ್ಲಿ ನಿಮ್ಮ ಪೈಕಿ ಒಬ್ಬರು ಹೊರಗೆ ಹೋಗಲಿದ್ದಾರೆ. ಫಿನಾಲೆಗೆ ಕಾಲಿಡಲು ಅರ್ಹತೆ ಇಲ್ಲದ ಒಬ್ಬ ಸದಸ್ಯನ ಹೆಸರನ್ನು ಸೂಕ್ತ ಕಾರಣ ನೀಡಿ ಸೂಚಿಸಿ’ ಎಂದು ಬಿಗ್​ ಬಾಸ್​ ಕಡೆಯಿಂದ ಆದೇಶ ಬಂತು. ತುಕಾಲಿ ಸಂತೋಷ್​, ಕಾರ್ತಿಕ್​ ಮಹೇಶ್​, ವಿನಯ್​ ಗೌಡ ಅವರು ಡ್ರೋನ್​ ಪ್ರತಾಪ್​ ಹೆಸರನ್ನು ಸೂಚಿಸಿದರು.

ಇದನ್ನೂ ಓದಿ: ಡ್ರೋನ್​ ಪ್ರತಾಪ್​ಗೆ ಮನೆಮಂದಿ ಚುಚ್ಚುಮಾತು; ಎಲ್ಲವನ್ನೂ ಕೇಳಿಸಿಕೊಂಡು ಕಣ್ಣೀರು ಹಾಕಿದ ಸಂಗೀತಾ

6 ವೋಟ್​ಗಳಲ್ಲಿ 3 ವೋಟ್​ ಡ್ರೋನ್​ ಪ್ರತಾಪ್​ಗೆ ಬಂದಿದ್ದರಿಂದ ಅವರು ಎಲಿಮಿನೇಟ್​ ಆಗಬೇಕಾಯಿತು. ‘ಬಹುಮತದ ಅನುಸಾರ ಪ್ರತಾಪ್​ ಅವರ ಪಯಣ ಈ ಮನೆಯಲ್ಲಿ ಇಲ್ಲಿಗೆ ಮುಕ್ತಾಯ ಆಗುತ್ತದೆ. ನೀವು ಮುಖ್ಯ ದ್ವಾರದಿಂದ ಹೊರಬರಲು 5 ನಿಮಿಷ ಅವಕಾಶ ಇದೆ’ ಎಂದು ಬಿಗ್​ ಬಾಸ್​ ಘೋಷಿಸಿದರು. ಇದನ್ನು ಕೇಳಿ ಡ್ರೋನ್​ ಪ್ರತಾಪ್​ ಗಳಗಳನೆ ಅತ್ತರು. ‘ಇದು ನ್ಯಾಯವಲ್ಲ’ ಎಂದು ಸಂಗೀತಾ ಶೃಂಗೇರಿ ಕೂಡ ಕಣ್ಣೀರು ಹಾಕಿದರು.

ಡ್ರೋನ್​ ಪ್ರತಾಪ್​ ಮಾತು:

‘ಜನರ ಪ್ರೀತಿ ಸಿಕ್ಕಿದೆ ಎಂದು ಭಾವಿಸಿದ್ದೇನೆ. ನನ್ನ ವರ್ತನೆಗಳನ್ನು ಬಿಗ್​ ಬಾಸ್​ ತಂಡ ಸಹಿಸಿಕೊಂಡಿದೆ. ಅದಕ್ಕೆ ನಾನು ಋಣಿ. ಅಪ್ಪ-ಅವ್ವ, ಪುಟ್ಟಿಗೆ ನನ್ನ ಆಟ ಖುಷಿ ನೀಡಿದೆ ಎಂದುಕೊಳ್ಳುತ್ತೇನೆ. ಸುದೀಪ್​ ಸರ್​ಗೆ ಧನ್ಯವಾದ. ಅಭಿಮಾನ ತೋರಿಸಿದ ಜನತೆಗೆ ಧನ್ಯವಾದ’ ಎಂದು ಹೇಳುವ ಮೂಲಕ ಡ್ರೋನ್​ ಪ್ರತಾಪ್​ ಎಮೋಷನಲ್​ ಆದರು. ಇನ್ನುಳಿದ ಸದಸ್ಯರಿಗೆ ಅವರು ‘ಆಲ್​ ದಿ ಬೆಸ್ಟ್​’ ತಿಳಿಸಿದರು. ಬಳಿಕ ಅವರು ಮುಖ್ಯದ್ವಾರಕ್ಕೆ ಬಂದರು. ಅಲ್ಲಿ ಅವರಿಗೆ ಸರ್ಪ್ರೈಸ್​ ಕಾದಿತ್ತು.

ಇದನ್ನೂ ಓದಿ: ‘ಡ್ರೋನ್​ ಪ್ರತಾಪ್​ ಗೆದ್ದರೂ ಗೆಲ್ಲಬಹುದು’ ಎಂದ ವಿನಯ್​ ಗೌಡ; ಈ ಮಾತಿಗೆ ಕಾರಣ ಏನು?

ಕಾದಿತ್ತು ಟ್ವಿಸ್ಟ್​:

ಡ್ರೋನ್​ ಪ್ರತಾಪ್​ ಅವರು ಮುಖ್ಯದ್ವಾರದ ಬಳಿ ಬಂದರೂ ಕೂಡ ಬಾಗಿಲು ತೆರೆಯಲಿಲ್ಲ. ಅಲ್ಲಿ ಪ್ರತಾಪ್​ಗಾಗಿ ಒಂದು ಲಕೋಟೆ ಇಡಲಾಗಿತ್ತು. ಅದನ್ನು ತೆರೆದು ಓದುವಂತೆ ಸೂಚಿಸಲಾಯಿತು. ‘ಈ ವಾರ ಮಿಡ್​ ವೀಕ್​ ಎಲಿಮಿನೇಷನ್​ ಇರುವುದಿಲ್ಲ’ ಎಂದು ಅದರಲ್ಲಿ ಬರೆದಿತ್ತು. ಆ ಸಂದೇಶ ಓದಿ ಡ್ರೋನ್​ ಪ್ರತಾಪ್​ ಸಖತ್​ ಖುಷಿಪಟ್ಟರು. ಮಿಡ್​ ವೀಕ್​ ಎಲಿಮಿನೇಷನ್​ ಇರುವುದಿಲ್ಲ ಎಂಬುದು ಸುದೀಪ್​ ಅವರ ನಿರ್ಧಾರ. ‘ಈ ಸೀಸನ್​ನಲ್ಲಿ ಟಾಪ್​ 5 ಬದಲಿಗೆ, ಟಾಪ್​ 6 ಸದಸ್ಯರು ಫಿನಾಲೆಗೆ ತಲುಪುತ್ತಾರೆ. ಇದು ಸುದೀಪ್​ ಅವರ ಉಡುಗೊರೆ’ ಎಂದು ಬಿಗ್​ ಬಾಸ್​ ಘೋಷಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್