AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನನ್ನು ಪ್ರತಾಪ್ ತಂದೆ ಎಂದು ಗುರುತಿಸುತ್ತಾರೆ, ಸೆಲ್ಫಿ ಕೇಳ್ತಾರೆ’; ಹೆಮ್ಮೆಯಿಂದ ಹೇಳಿಕೊಂಡ ಪ್ರತಾಪ್ ತಂದೆ

‘ಬಿಗ್ ಬಾಸ್’ಗೆ ಬರುವುದಕ್ಕೂ ಮೊದಲು ಪ್ರತಾಪ್ ಎಂದರೆ ಸುಳ್ಳು ಹೇಳುವ ವ್ಯಕ್ತಿ ಎಂದೇ ಎಲ್ಲರೂ ಗುರುತಿಸುತ್ತಿದ್ದರು. ಆದರೆ, ಈಗ ಅವರ ಮೇಲೆ ಇದ್ದ ಅಭಿಪ್ರಾಯ ಅನೇಕರಿಗೆ ಬದಲಾಗಿದೆ. ಹೊರ ಜಗತ್ತಿನಲ್ಲಿ ಪ್ರತಾಪ್ ತಂದೆ ತಾಯಿಯನ್ನು ನೋಡುವ ರೀತಿ ಕೂಡ ಬದಲಾಗಿದೆ.

‘ನನ್ನನ್ನು ಪ್ರತಾಪ್ ತಂದೆ ಎಂದು ಗುರುತಿಸುತ್ತಾರೆ, ಸೆಲ್ಫಿ ಕೇಳ್ತಾರೆ’; ಹೆಮ್ಮೆಯಿಂದ ಹೇಳಿಕೊಂಡ ಪ್ರತಾಪ್ ತಂದೆ
ಪ್ರತಪಾ್-ಮರಿ ಮಾದಯ್ಯ
ರಾಜೇಶ್ ದುಗ್ಗುಮನೆ
|

Updated on: Dec 30, 2023 | 7:07 AM

Share

ಬಿಗ್ ಬಾಸ್ ಮನೆಗೆ ಡ್ರೋನ್ ಪ್ರತಾಪ್ (Drone Prathap) ಅವರ ತಂದೆ ತಾಯಿಯ ಆಗಮನ ಆಗಿತ್ತು. ಅವರು ಬಂದು ಪ್ರತಾಪ್​ಗೆ ಧೈರ್ಯ ತುಂಬಿದ್ದಾರೆ. ಈ ಕ್ಷಣವನ್ನು ಕಣ್ತುಂಬಿಕೊಂಡು ವೀಕ್ಷಕರು ಖುಷಿಪಟ್ಟಿದ್ದಾರೆ. ಬಿಗ್ ಬಾಸ್​ ನಮ್ಮನ್ನು ಒಂದು ಮಾಡಿದೆ ಎಂದು ಪ್ರತಾಪ್ ಅವರ ತಂದೆ ಮರಿ ಮಾದಯ್ಯ ಹೇಳಿಕೊಂಡಿದ್ದಾರೆ. ಅವರು ಬಿಗ್ ಬಾಸ್ ಹಾಗೂ ಸುದೀಪ್ ಅವರಿಗೆ ಧನ್ಯವಾದ ಹೇಳಿದ್ದಾರೆ. ಈ ಮಧ್ಯೆ ಹೊರ ಜಗತ್ತಿನಲ್ಲಿ ತಮ್ಮನ್ನು ಜನರು ಯಾವ ರೀತಿಯಲ್ಲಿ ಗುರುತಿಸುತ್ತಿದ್ದಾರೆ ಎಂಬುದನ್ನು ಮರಿ ಮಾದಯ್ಯ ವಿವರಿಸಿದ್ದಾರೆ.

‘ಬಿಗ್ ಬಾಸ್’ಗೆ ಬರುವುದಕ್ಕೂ ಮೊದಲು ಪ್ರತಾಪ್ ಎಂದರೆ ಸುಳ್ಳು ಹೇಳುವ ವ್ಯಕ್ತಿ ಎಂದೇ ಎಲ್ಲರೂ ಗುರುತಿಸುತ್ತಿದ್ದರು. ಆದರೆ, ಈಗ ಅವರ ಮೇಲೆ ಇದ್ದ ಅಭಿಪ್ರಾಯ ಅನೇಕರಿಗೆ ಬದಲಾಗಿದೆ. ಮುಗ್ಧ, ತಂತ್ರಗಾರಿಕೆ ಹೊಂದಿರುವ ವ್ಯಕ್ತಿ ಎಂದು ಎಲ್ಲರೂ ಕರೆಯುತ್ತಿದ್ದಾರೆ. ಹೊರ ಜಗತ್ತಿನಲ್ಲಿ ಪ್ರತಾಪ್ ತಂದೆ ತಾಯಿಯನ್ನು ನೋಡುವ ರೀತಿ ಕೂಡ ಬದಲಾಗಿದೆ. ಈ ಬಗ್ಗೆ ಅವರ ತಂದೆ ಮಾತನಾಡಿದ್ದಾರೆ.

ಈ ಮೊದಲು ಪ್ರತಾಪ್ ಅವರು ಬಿಗ್ ಬಾಸ್​ನಲ್ಲಿ ತಮ್ಮ ಕಷ್ಟದ ಬಗ್ಗೆ ಹೇಳಿಕೊಂಡಿದ್ದರು. ‘ನನಗೆ ವಿಷ ಹಾಕಿ ಸಾಯಿಸುವಂತೆ ಅಮ್ಮನಿಗೆ ನೆಂಟರೇ ಹೇಳಿದ್ದರು’ ಎಂದು ಕಣ್ಣೀರು ಹಾಕಿದ್ದರು ಪ್ರತಾಪ್. ಈ ರೀತಿ ಮಾತನಾಡಿದವರೇ ಬಂದು ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ‘ನಾನು ಕಾರ್ಯಕ್ರಮಕ್ಕೆ ಹೋಗಲಿ ಅಥವಾ ಬಸ್​ನಲ್ಲಿ ಹೋಗಲಿ ಎಲ್ಲರೂ ಬಂದು ನನ್ನ ಗುರುತಿಸುತ್ತಾರೆ. ನೀವು ಪ್ರತಾಪ್ ತಂದೆ ಅಲ್ಲವೇ ಎಂದು ಕೇಳುತ್ತಾರೆ. ಆಗ ಖುಷಿ ಹಾಗೂ ಹೆಮ್ಮೆ ಆಗುತ್ತದೆ. ನನ್ನ ಜೊತೆ ಫೋಟೋ ತೆಗೆದುಕೊಳ್ಳುತ್ತಾರೆ. ಪರಮೇಶ್ವರ ಧರೆಗೆ ಇಳಿದಂತೆ ಆಯ್ತು’ ಎಂದಿದ್ದಾರೆ ಮರಿ ಮಾದಯ್ಯ.

ಇದನ್ನೂ ಓದಿ: ಪ್ರತಾಪ್​ಗೆ ಬುದ್ಧಿ ಹೇಳುವ ಸಂಗೀತಾ ಪ್ರಯತ್ನ ವ್ಯರ್ಥ: ಮನೆಯಲ್ಲಿ ಏನಿದು ಹೊಸ ಚರ್ಚೆ?

ಪ್ರತಾಪ್ ಅವರ ಆಟದ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಈ ಕುಟುಂಬ ಒಂದಾಗಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಆಗಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಉಚಿತವಾಗಿ ಎಪಿಸೋಡ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ