ನಂಬಿಸಿ ಮೋಸ ಮಾಡಿದ್ರಾ ಡ್ರೋನ್ ಪ್ರತಾಪ್? ಕ್ಯಾಪ್ಟನ್ಸಿ ಓಟದಿಂದ ನಮ್ರತಾ ಔಟ್

ಡ್ರೋನ್ ಪ್ರತಾಪ್ ಅವರು ವಿನಯ್ ವಿರುದ್ಧ ತೊಡೆ ತಟ್ಟಿದ್ದಾರೆ. ಅವರ ಗ್ಯಾಂಗ್​ನಿಂದ ಒಬ್ಬೊಬ್ಬರಾಗಿ ಔಟ್ ಮಾಡುವುದಾಗಿ ಪಣ ತೊಟ್ಟಿದ್ದಾರೆ. ಈ ವಾರ ಸ್ನೇಹಿತ್ ಹೊರಹೋಗಬಹುದು ಎಂದು ಹೇಳಲಾಗುತ್ತಿದೆ.

ನಂಬಿಸಿ ಮೋಸ ಮಾಡಿದ್ರಾ ಡ್ರೋನ್ ಪ್ರತಾಪ್? ಕ್ಯಾಪ್ಟನ್ಸಿ ಓಟದಿಂದ ನಮ್ರತಾ ಔಟ್
ಪ್ರತಾಪ್-ನಮ್ರತಾ
Follow us
|

Updated on:Nov 28, 2023 | 3:26 PM

ನಮ್ರತಾ ಗೌಡ (Namratha Gowda) ಅವರು ಬಿಗ್ ಬಾಸ್ ಮನೆಯಲ್ಲಿ ಏಳು ವಾರ ಪೂರ್ಣಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಆಟ ಮತ್ತಷ್ಟು ಟಫ್ ಆಗಲಿದೆ ಎಂಬ ಸೂಚನೆ ಸಿಕ್ಕಿದೆ. ಹೀಗಾಗಿ, ಎಂಟನೇ ವಾರದಲ್ಲಿ ಅವರು ಒಂದು ಶಪಥ ಮಾಡಿದ್ದಾರೆ. ಎಲ್ಲರ ಜೊತೆಯೂ ಬೆರೆತು ತಮ್ಮನ್ನು ತಾವು ಪ್ರೂವ್ ಮಾಡಿಕೊಳ್ಳುವುದಾಗಿ ಹೇಳಿದ್ದರು. ಆದರೆ, ಅವರಿಗೆ ಈಗ ಮೊಸ ಆಗಿದೆ. ಅದೂ ಪ್ರತಾಪ್ ಕಡೆಯಿಂದಲೇ ಎನ್ನುತ್ತಿದೆ ಕಲರ್ಸ್ ಕನ್ನಡ ರಿಲೀಸ್ ಮಾಡಿರುವ ಪ್ರೋಮೋ. ಸದ್ಯ ಈ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ.

‘ನಮ್ರತಾ ಅವರು ಸರಿಯಾಗಿ ಗೇಮ್ ಆಡುತ್ತಿಲ್ಲ, ಮತ್ತಷ್ಟು ಓಪನ್​ಅಪ್ ಆಗಬೇಕಿದೆ’ ಎಂದು ಡ್ರೋನ್ ಪ್ರತಾಪ್ ಹೇಳಿದ್ದರು. ಇದೇ ಕಾರಣಕ್ಕೆ ನಮ್ರತಾ ಅವರು ಪ್ರತಾಪ್ ಅವರ ಟೀಂ ಸೇರಿದ್ದಾರೆ. ‘ಬೇರೆ ನಮ್ರತಾ ಇದಾರೆ, ಅದನ್ನು ಹೊರ ತರುತ್ತೇನೆ ಎಂದು ಪ್ರಾಮಿಸ್ ಮಾಡಿದ್ದಾನೆ’ ಎಂದು ಕಾರಣ ನೀಡಿ ನಮ್ರತಾ ಡ್ರೋನ್ ಪ್ರತಾಪ್ ಟೀಂ ಸೇರಿದ್ದರು! ಆದರೆ, ಅಲ್ಲಾಗಿದ್ದೇ ಬೇರೆ.

‘ನೀವು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಯಾರನ್ನು ಹೊರಗೆ ಇಡಲು ಬಯಸುತ್ತೀರಿ’ ಎಂದು ಡ್ರೋನ್ ಪ್ರತಾಪ್​ಗೆ ಬಿಗ್ ಬಾಸ್ ಕೇಳಿದರು. ಇದಕ್ಕೆ ಅವರು ನಮ್ರತಾ ಹೆಸರನ್ನು ತೆಗೆದುಕೊಂಡಿದ್ದಾರೆ. ತಮ್ಮನ್ನು ನಂಬಿ ಬಂದ ನಮ್ರತಾರನ್ನೇ ಅವರಿಗೆ ಹಿನ್ನಡೆ ಮಾಡಿದ್ದಾರೆ. ಇದು ನಮ್ರತಾ ಬೇಸರಕ್ಕೆ ಕಾರಣ ಆಗಿದೆ. ‘ನನಗೆ ಆಡಬೇಕು. ಇಷ್ಟ ಇಲ್ಲ ಅದಕ್ಕೆ ಅವರನ್ನು ತಂಡಕ್ಕೆ ಸೇರಿಸಿಕೊಂಡು ಹೊಡೆದು ಹಾಕಿದೆ ಅಂತ ಅವನು ಹೇಳಬಹುದಿತ್ತು’ ಎಂದು ಕಣ್ಣೀರು ಹಾಕಿದ್ದಾರೆ ನಮ್ರತಾ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ತುಕಾಲಿ ಸಂತೋಷ್​ಗೆ ವಾರದ ಆರಂಭದಲ್ಲೇ ಜೈಲು ಶಿಕ್ಷೆ; ಯಾಕೀ ನಿರ್ಧಾರ?

ಕೆಲವರು ಪ್ರತಾಪ್ ಅವರನ್ನು ದೂಷಿಸಿದ್ದಾರೆ. ಅವರು ಈ ರೀತಿ ಮಾಡಬಾರದಿತ್ತು ಎಂದಿದ್ದಾರೆ. ಇನ್ನೂ ಕೆಲವರು ಪ್ರತಾಪ್ ನಿರ್ಧಾರವನ್ನು ಬೆಂಬಲಿಸಿದ್ದಾರೆ. ‘ಇಷ್ಟು ವಾರ ಅವರು ಆಡಲಿಲ್ಲ. ಈಗ ಅವರಿಗೆ ಎಚ್ಚರ ಆಗಿದೆ. ಅವರು ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹರಲ್ಲ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ನಿಜಕ್ಕೂ ಆಗಿದ್ದೇನು? ಡ್ರೋನ್ ಪ್ರತಾಪ್ ಈ ರೀತಿ ಹೆಸರನ್ನು ತೆಗೆದುಕೊಳ್ಳೋಕೆ ಬೇರೆ ಏನಾದರೂ ಕಾರಣ ಇದೆಯೇ ಎಂಬುದಕ್ಕೆ ಜಿಯೋ ಸಿನಿಮಾ ಹಾಗೂ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುವ ಎಪಿಸೋಡ್ ನೋಡಬೇಕು. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಬಹುದಾಗಿದೆ.

Published On - 3:04 pm, Tue, 28 November 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ