AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಂಪತಿಯಿಂದಲೇ ಇಲ್ಲಿಯವರೆಗೆ ಬಂದಿದ್ದಾನೆ’; ಡ್ರೋನ್ ಪ್ರತಾಪ್ ಬಗ್ಗೆ ಮೈಕಲ್ ಆರೋಪ

ಬಿಗ್ ಬಾಸ್ ಮನೆಯಲ್ಲಿ ಮೈಕಲ್ ಅಜಯ್ ಅವರಿಗೆ ದುರಹಂಕಾರ ನೆತ್ತಿಗೇರಿದೆ ಎಂದು ಕೆಲವರು ಹೇಳಿದ್ದಿದೆ. ಇದನ್ನು ಮೈಕಲ್ ಪದೇ ಪದೇ ಸಾಬೀತು ಮಾಡಿಕೊಳ್ಳುತ್ತಿದ್ದಾರೆ. ಈಗ ಪ್ರತಾಪ್ ಅಭಿಮಾನಿಗಳ ದ್ವೇಷ ಕಟ್ಟಿಕೊಂಡಿದ್ದಾರೆ.

‘ಸಿಂಪತಿಯಿಂದಲೇ ಇಲ್ಲಿಯವರೆಗೆ ಬಂದಿದ್ದಾನೆ’; ಡ್ರೋನ್ ಪ್ರತಾಪ್ ಬಗ್ಗೆ ಮೈಕಲ್ ಆರೋಪ
ಮೈಕಲ್-ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Dec 20, 2023 | 8:04 AM

Share

ಬಿಗ್ ಬಾಸ್ ಮನೆಯಲ್ಲಿರುವ ಡ್ರೋನ್ ಪ್ರತಾಪ್ (Prathap) ಅವರು ಉತ್ತಮವಾಗಿ ಆಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಹಲವು ಟಾಸ್ಕ್​ಗಳನ್ನು ಅವರು ಒಳ್ಳೆಯ ರೀತಿಯಲ್ಲಿ ಆಡಿದ್ದಾರೆ. ಡ್ರೋನ್ ಪ್ರತಾಪ್ ಅವರು ಸಂತ್ರಸ್ತನಂತೆ ವರ್ತಿಸಿ ಸಿಂಪತಿ ಗಿಟ್ಟಿಸಿಕೊಳ್ಳುತ್ತಾರೆ ಅನ್ನೋದು ದೊಡ್ಮನೆಯಲ್ಲಿರುವ ಅನೇಕರ ಆರೋಪ. ಮೈಕಲ್ ಅಜಯ್ ಅವರು ಈಗ ಇದೇ ರೀತಿಯ ಆರೋಪ ಮಾಡಿದ್ದಾರೆ. ನಾಮಿನೇಷನ್ ವೇಳೆ ಅವರು ಪ್ರತಾಪ್ ವಿರುದ್ಧ ಕೆಲವು ಗಂಭೀರ ಆರೋಪ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಮೈಕಲ್ ಅಜಯ್ ಅವರು ಉತ್ತಮ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರು. ಅವರು ಲಾಯಲ್ ಆಗಿರುತ್ತಿದ್ದರು. ಆದರೆ, ಇತ್ತೀಚೆಗೆ ಅವರ ಆಟದ ವೈಖರಿ ಬದಲಾದಂತೆ ಇದೆ. ಅವರು ಆಟವನ್ನು ಬೇರೆಯದೇ ರೀತಿಯಲ್ಲಿ ಆಡುತ್ತಿದ್ದಾರೆ. ಅವರಿಗೆ ದುರಹಂಕಾರ ನೆತ್ತಿಗೇರಿದೆ ಎಂದು ಕೆಲವರು ಹೇಳಿದ್ದಿದೆ. ಇದನ್ನು ಮೈಕಲ್ ಪದೇ ಪದೇ ಸಾಬೀತು ಮಾಡಿಕೊಳ್ಳುತ್ತಿದ್ದಾರೆ. ಈಗ ಪ್ರತಾಪ್ ಅಭಿಮಾನಿಗಳ ದ್ವೇಷ ಕಟ್ಟಿಕೊಂಡಿದ್ದಾರೆ.

ಈ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಪ್ರತಾಪ್ ಹೆಸರನ್ನು ವಿನಯ್, ಮೈಕಲ್ ಮೊದಲಾದವರು ತೆಗೆದುಕೊಂಡರು. ‘ಪ್ರತಾಪ್ ಹಳ್ಳಿ ಕಾರ್ಡ್​ ಪ್ಲೇ ಮಾಡುತ್ತಾರೆ’ ಎಂದು ವಿನಯ್ ಹೇಳಿದರು. ಆ ಬಳಿಕ ಬಂದ ಮೈಕಲ್ ಅವರು ಸಿಂಪತಿ ವಿಚಾರ ತೆಗೆದರು. ‘ಪ್ರತಾಪ್​ಗೆ ಇಲ್ಲಿ ಗೊತ್ತಿರೋದು ಒಂದೇ. ಸಿಂಪತಿ ಕ್ರಿಯೇಟ್ ಮಾಡಿಕೊಳ್ಳೋದು. ಅದರಿಂದಲೇ ಅವನು ಇಲ್ಲಿಯವರೆಗೆ ಬಂದಿದ್ದಾನೆ. ಇದು ಆಡಿಯನ್ಸ್​ಗೆ ಗೊತ್ತಾಗಬೇಕು. ಅವನು ನಾಮಿನೇಟ್ ಆಗಿ ಹೊರಹೋಗಬೇಕು’ ಎಂದು ಮೈಕಲ್ ಹೇಳಿದರು.

ಇದನ್ನೂ ಓದಿ: ‘ಉಳಿದವರೆಲ್ಲ ಒಂದು, ನಾವಿಬ್ಬರು ಒಂದು’; ಪ್ರತಾಪ್ ಎದುರು ಸಂಗೀತಾ ಬೇಸರ

ಇತ್ತೀಚೆಗೆ ಹೊರ ಹೋಗಿರುವ ಸ್ನೇಹಿತ್ ಅವರು ಪ್ರತಾಪ್ ಆಟದ ಬಗ್ಗೆ ಮೆಚ್ಚುಗೆ ಸೂಚಿಸಿದ್ದರು. ‘ನಾವು ರೋಡಿಸ್ ಆಡಿದ್ವಿ. ಪ್ರತಾಪ್ ನಿಜವಾದ ಬಿಗ್ ಬಾಸ್ ಆಡುತ್ತಿದ್ದಾನೆ. ಫಿನಾಲೆಯಲ್ಲಿ ಅವನೂ ಇರುತ್ತಾನೆ’ ಎಂದಿದ್ದರು. ಅವರು ದೊಡ್ಮನೆ ಒಳಗೆ ಇರುವಾಗ ಪ್ರತಾಪ್​ನ ವಿರೋಧಿಸುತ್ತಿದ್ದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಅವರು ಪ್ರತಾಪ್​ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್