AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ನಲ್ಲಿ ಡ್ರೋನ್ ಪ್ರತಾಪ್ ಮದುವೆ ಮಾತು, ಜವಾಬ್ದಾರಿ ಹೊತ್ತ ಸಂತು-ಪಂತು

Drone Prathap Marriage: ಡ್ರೋನ್ ಪ್ರತಾಪ್ ಮೂರು ವರ್ಷಗಳ ಬಳಿಕ ತಮ್ಮ ಪೋಷಕರನ್ನು ಭೇಟಿ ಆದರು. ಈ ವೇಳೆ ಮನೆಯಲ್ಲಿ ಪ್ರತಾಪ್​ರ ಮದುವೆ ವಿಷಯ ಪ್ರಸ್ತಾಪವಾಯ್ತು.

ಬಿಗ್​ಬಾಸ್ ನಲ್ಲಿ ಡ್ರೋನ್ ಪ್ರತಾಪ್ ಮದುವೆ ಮಾತು, ಜವಾಬ್ದಾರಿ ಹೊತ್ತ ಸಂತು-ಪಂತು
ಡ್ರೋನ್ ಪ್ರತಾಪ್
Follow us
ಮಂಜುನಾಥ ಸಿ.
|

Updated on:Dec 28, 2023 | 11:44 PM

ಗುರುವಾರದ ಬಿಗ್​ಬಾಸ್ (BiggBoss) ಎಪಿಸೋಡ್ ಪ್ರೇಕ್ಷಕರನ್ನು ಭಾವುಕಗೊಳಿಸಿತು. ಡ್ರೋನ್ ಪ್ರತಾಪ್ ಮೂರು ವರ್ಷಗಳ ಬಳಿಕ ತಮ್ಮ ಪೋಷಕರನ್ನು ಭೇಟಿಯಾದರು. ತಾನು ಮಾಡಿದ ತಪ್ಪಿನಿಂದ ಅವಮಾನ ಅನುಭವಿಸಿದ ಅವರು ನನ್ನನ್ನು ನೋಡಲು ಮನೆಗೆ ಬರುವುದಿಲ್ಲವೇನೋ ಎಂಬ ಆತಂಕದಲ್ಲಿದ್ದರು. ಆದರೆ ಡ್ರೋನ್​ ಪ್ರತಾಪ್​ರಷ್ಟೆ ಕಾತರತೆಯಿಂದ ಅಪ್ಪನೂ ಮಗನನ್ನು ನೋಡಲು ಕಾಯುತ್ತಿದ್ದರೆಂಬುದು ಅವರ ಆಗಮನದಿಂದ, ಅವರು ನೀಡಿದ ಬಿಗಿಯಾದ ಅಪ್ಪುಗೆಯಿಂದ ತಿಳಿದು ಬಂತು.

ಡ್ರೋನ್ ಪ್ರತಾಪ್​, ತಮ್ಮ ಪೋಷಕರನ್ನು ಮತ್ತೆ ಸೇರಿದ್ದು ಮನೆಯ ಸದಸ್ಯರನ್ನು ಭಾವುಕಗೊಳಿಸಿತು. ಹಲವು ಭಾವುಕ ಸನ್ನಿವೇಶಗಳು, ಮಾತುಕತೆಗಳು ಡ್ರೋನ್ ಪ್ರತಾಪ್ ಹಾಗೂ ಅವರ ಪೋಷಕರ ನಡುವೆ ಸೃಷ್ಟಿಯಾದವು. ಇದೆಲ್ಲದರ ನಡುವೆ ಪ್ರತಾಪ್​ರ ಮದುವೆ ವಿಷಯವೂ ಸಹ ಮನೆಯಲ್ಲಿ ಚರ್ಚೆಯಾಯ್ತು.

ವರ್ತೂರು ಸಂತೋಷ್ ಮೊದಲಿಗೆ ಡ್ರೋನ್ ಪ್ರತಾಪ್​ರ ಮದುವೆ ಚರ್ಚೆ ಎತ್ತಿದರು. ‘‘ಯಜಮಾನ್ರೆ ನೀವು ಹೇಳಿದರೆ ನಿಮ್ಮ ಮಗ ಮದುವೆ ಆಗ್ತಾನಂತೆ, ನೀವು ಹೂ ಅನ್ನಿ ಎಂದರು. ಅದಕ್ಕೆ ಪ್ರತಾಪ್​ರ ತಂದೆ ನನ್ನ ಅಭ್ಯಂತರವೇನೂ ಇಲ್ಲ ಎಂದರು. ಬಳಿಕ ಹಾಗಿದ್ದರೆ ಆ ಜವಾಬ್ದಾರಿ ನನಗೆ ಬಿಡಿ ನಾನು ನೋಡುತ್ತೇನೆ ಎಂದರು. ಹೌದು, ನಿಮ್ಮ ಊರಲ್ಲೇ ಒಂದು ಒಳ್ಳೆ ಹೆಣ್ಣು ನೋಡಪ್ಪ ಎಂದರು ಪ್ರತಾಪ್​ರ ತಂದೆ.

ಇದನ್ನೂ ಓದಿ:ಬಿಗ್​ಬಾಸ್ ಮನೆಯಲ್ಲಿ ಕರಗಿತು ಮುನಿಸು, ಅಪ್ಪ-ಮಗನ ಭಾವುಕ ಸಮ್ಮಿಲನ

ಬಳಿಕ ತುಕಾಲಿ ಸಂತು, ನಮ್ಮ ಊರಲ್ಲಿ ಒಂದು ಒಳ್ಳೆಯ ಹೆಣ್ಣು ಇದೆ ನೀವು ಹೂ ಅನ್ನಿ ನಾನು ಮಾತಾಡ್ತೀನಿ ಎಂದರು. ಅಯ್ಯೋ ನಾವು ಹೂ ಅಂದರೆ ಹುಡುಗಿಯೂ ಒಪ್ಪಿಕೊಳ್ಳಬೇಕಲ್ಲ ಅಂದರು. ಅವರಿಗೆ ನನ್ನ ಮಾತೇ ಅಂತಿಮ, ನಾನು ಮಾತನಾಡಿದರೆ ಮುಗಿದಂತೆ ಎಂದರು. ಆ ಮಾತಿಗೆ ಎಲ್ಲರೂ ಸೇರಿ ತುಕಾಲಿಯ ಕಾಲೆಳೆದರು.

ಪ್ರತಾಪ್, ಪ್ರತ್ಯೇಕವಾಗಿ ಅಪ್ಪ-ಅಮ್ಮನೊಟ್ಟಿಗೆ ಮಾತನಾಡುವಾಗ ತಂಗಿಯ ಬಗ್ಗೆ ವಿಚಾರಿಸಿದರು. ಆಕೆಗೆ ಕೆಲಸವಿತ್ತು ಅದಕ್ಕೆ ಬರುವುದಕ್ಕೆ ಸಾಧ್ಯವಾಗಲಿಲ್ಲ. ಆಕೆ ಚೆನ್ನಾಗಿ ದುಡಿಯುತ್ತಿದ್ದಾಳೆ, ನನ್ನನ್ನು-ಅಮ್ಮನನ್ನು ನೋಡಿಕೊಳ್ಳುತ್ತಿದ್ದಾಳೆ ಎಂದರು. ಆಗ ಮತ್ತೆ ಭಾವುಕರಾದ ಪ್ರತಾಪ್, ನಾನು ಮನೆಗೆ ಬರ್ತೀನಿ, ತಂಗಿಯ ಮದುವೆ ಮಾಡ್ತೀನಿ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:44 pm, Thu, 28 December 23

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ