AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ರೋನ್​ ಪ್ರತಾಪ್​ ಗೆದ್ದರೂ ಗೆಲ್ಲಬಹುದು’ ಎಂದ ವಿನಯ್​ ಗೌಡ; ಈ ಮಾತಿಗೆ ಕಾರಣ ಏನು?

ಬಿಗ್​ ಬಾಸ್​ ಜರ್ನಿಯ 109ನೇ ದಿನದಲ್ಲಿ ವಿನಯ್​ ಗೌಡ ಅವರಿಗೆ ಡ್ರೋನ್​ ಪ್ರತಾಪ್​ ಸಿಕ್ಕಾಪಟ್ಟೆ ತಿರುಗೇಟು ನೀಡಿದ್ದಾರೆ. ಪ್ರತಾಪ್​ ಅವರ ಖಡಕ್​ ಮಾತುಗಳನ್ನು ಕೇಳಿದ ಬಳಿಕ ವಿನಯ್​ ಅವರು ಕಾರ್ತಿಕ್​ ಎದುರು ತಮ್ಮ ಅನಿಸಿಕೆ ಹಂಚಿಕೊಂಡರು. ಆದರೆ, ‘ಪ್ರತಾಪ್​ ಗೆಲ್ಲುತ್ತಾನೆ ಅಂತ ತಮಾಷೆಗೂ ಹೇಳಬೇಡ’ ಎಂದಿದ್ದಾರೆ ಕಾರ್ತಿಕ್​ ಮಹೇಶ್​.

‘ಡ್ರೋನ್​ ಪ್ರತಾಪ್​ ಗೆದ್ದರೂ ಗೆಲ್ಲಬಹುದು’ ಎಂದ ವಿನಯ್​ ಗೌಡ; ಈ ಮಾತಿಗೆ ಕಾರಣ ಏನು?
ಡ್ರೋನ್​ ಪ್ರತಾಪ್​, ವಿನಯ್​ ಗೌಡ
ಮದನ್​ ಕುಮಾರ್​
|

Updated on: Jan 25, 2024 | 5:30 PM

Share

ಬಿಗ್​ ಬಾಸ್​ ಮನೆಯಲ್ಲಿ ವಿನಯ್​ ಗೌಡ ಮತ್ತು ಡ್ರೋನ್​ ಪ್ರತಾಪ್ (Drone Prathap)​ ನಡುವೆ ಮೊದಲಿನಿಂದಲೂ ಕಿರಿಕ್​ ಆಗುತ್ತಲೇ ಇದೆ. ಕೊನೇ ವಾರದ ತನಕವೂ ಅದು ಮುಂದುವರಿದಿದೆ. ಡ್ರೋನ್​ ಪ್ರತಾಪ್​ ಅವರಿಗೆ ಜನರಿಂದ ಬೆಂಬಲ ಸಿಕ್ಕಿದೆ. ಹಾಗಾಗಿ ಅವರು ಫಿನಾಲೆ ವಾರಕ್ಕೆ ಎಂಟ್ರಿ ಪಡೆದಿದ್ದಾರೆ. ಅಂತಿಮವಾಗಿ ಅವರೇ ಬಿಗ್​ ಬಾಸ್​ (Bigg Boss Kannada) ಟ್ರೋಫಿ ಗೆಲ್ಲಲಿ ಎಂದು ಅವರ ಬೆಂಬಲಿಗರು ಆಶಿಸುತ್ತಿದ್ದಾರೆ. ಆದರೆ ಡ್ರೋನ್​ ಪ್ರತಾಪ್​ ಬಗ್ಗೆ ವಿನಯ್​ ಗೌಡ (Vinay Gowda) ಅವರಿಗೆ ಸಾಕಷ್ಟು ಅಸಮಾಧಾನ ಇದೆ. ಹಾಗಿದ್ದರೂ ಕೂಡ ‘ಪ್ರತಾಪ್​ ಗೆದ್ದರೂ ಗೆಲ್ಲಬಹುದು’ ಎಂಬರ್ಥದಲ್ಲಿ ಅವರು ಮಾತನಾಡಿದ್ದಾರೆ. ಅದಕ್ಕೆ ಕಾರಣ ಏನು ಎಂಬ ಬಗ್ಗೆ ಇಲ್ಲಿದೆ ವಿವರಣೆ.

109ನೇ ದಿನದಲ್ಲಿ ವಿನಯ್​ ಗೌಡ ಅವರಿಗೆ ಡ್ರೋನ್​ ಪ್ರತಾಪ್​ ಸಿಕ್ಕಾಪಟ್ಟೆ ತಿರುಗೇಟು ನೀಡಿದ್ದಾರೆ. ‘ನೀವು ಬಾತ್​ರೂಮ್​ನಲ್ಲಿ ಅತ್ತರೆ ಅದು ಪ್ರೀತಿ. ನಾನು ಅತ್ತರೆ ಸಿಂಪತಿ ಎನ್ನುತ್ತೀರಿ. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಆದರೆ ಅದು ಸಹಜ. ಆದರೆ ನಾನು ಹಳ್ಳಿ ಭಾಷೆ ಮಾತನಾಡಿದರೆ ಲೈಮ್​ಲೈಟ್​ಗಾಗಿ ಮಾಡಿದ್ದು ಎನ್ನುತ್ತೀರಿ’ ಎಂದು ಡ್ರೋನ್​ ಪ್ರತಾಪ್​ ಅವರು ಖಡಕ್​ ಮಾತುಗಳ ಬಾಣವನ್ನು ವಿನಯ್​ ಕಡೆಗೆ ಎಸೆದಿದ್ದಾರೆ. ಈ ಮಾತುಗಳನ್ನು ಕೇಳಿದ ಬಳಿಕ ವಿನಯ್​ ಅವರು ಕಾರ್ತಿಕ್​ ಎದುರು ತಮ್ಮ ಅನಿಸಿಕೆ ಹಂಚಿಕೊಂಡರು.

ಇದನ್ನೂ ಓದಿ: ಡ್ರೋನ್​ ಪ್ರತಾಪ್​ ಮೇಲೆ ಇರುವ ಕೇಸ್​ ಒಂದಲ್ಲ, ಎರಡಲ್ಲ; ಎಲ್ಲವನ್ನೂ ವಿವರಿಸಿದ ಲಾಯರ್​

‘ಥರ್ಡ್​ ಕ್ಲಾಸ್​ ಥರ ಮಾತಾಡ್ತಾನೆ. ಬರೀ ನಾಟಕ ಆಡಿಕೊಂಡು ಇಲ್ಲಿಯ ತನಕ ಬಂದಿದ್ದಾನೆ. ಜನರು ಹಾಕಿರುವ ಭಿಕ್ಷೆ, ಅದನ್ನು ಒಪ್ಪಿಕೊಳ್ತೀನಿ ಅಂತ ಎಷ್ಟು ನಾಟಕ ಆಡ್ತಾನೋ. ಹೊರಗಡೆ ಜನರಿಗೆ ಈ ಥರ ನಾಟಕ ಕಾಣಿಸುತ್ತಿಲ್ಲ ಎಂದರೆ ನನಗೆ ತುಂಬ ನಿರಾಸೆ ಆಗತ್ತೆ. ನಾಟಕ ಆಡಿಕೊಂಡು ಗೆದ್ದರೂ ಗೆದ್ದು ಬಿಡುತ್ತಾನೆ’ ಎಂದು ವಿನಯ್​ ಗೌಡ ಅವರು ಹೇಳಿದರು. ‘ಏ.. ಹಾಗೆಲ್ಲ ಹೇಳಬೇಡ. ತಮಾಷೆಗೂ ಆ ಮಾತನ್ನು ಹೇಳಬೇಡ’ ಎಂದಿದ್ದಾರೆ ಕಾರ್ತಿಕ್​ ಮಹೇಶ್​.

ಇದನ್ನೂ ಓದಿ: ಡ್ರೋನ್​ ಪ್ರತಾಪ್​ಗೆ ಮನೆಮಂದಿ ಚುಚ್ಚುಮಾತು; ಎಲ್ಲವನ್ನೂ ಕೇಳಿಸಿಕೊಂಡು ಕಣ್ಣೀರು ಹಾಕಿದ ಸಂಗೀತಾ

‘ಜನರು ಎಲ್ಲವನ್ನೂ ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಾ ಇರುತ್ತಾರೆ. ಡ್ರೋನ್​ ಪ್ರತಾಪ್​ ಇಲ್ಲಿ ನಾಟಕ ಆಡಿದರೆ ಬಿಗ್​ ಬಾಸ್​ ಮುಗಿದ ಮೇಲೂ ನಾಟಕ ಮುಂದುವರಿಸಬೇಕು’ ಎಂದಿದ್ದಾರೆ ವಿನಯ್​. ಆರಂಭದಲ್ಲಿ ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​ ಅವರ ನಡುವೆ ಒಂದು ಅಂತರ ಇತ್ತು. ಆದರೆ ಇತ್ತೀಚಿನ ವಾರಗಳಲ್ಲಿ ಸಂಗೀತಾ ಮತ್ತು ಪ್ರತಾಪ್​ ಕ್ಲೋಸ್​ ಆಗಿದ್ದಾರೆ. ಇಬ್ಬರೂ ಸ್ಟ್ರಾಂಗ್​ ಸ್ಪರ್ಧಿಗಳಾಗಿದ್ದಾರೆ. ಬಿಗ್​ ಬಾಸ್​ ಶೋನಿಂದ ಪ್ರತಾಪ್​ ಅವರ ಜನಪ್ರಿಯತೆ ಹೆಚ್ಚಿದೆ. ಈ ಮೊದಲು ಇದ್ದ ಅವರ ಇಮೇಜ್​ ಬದಲಾವಣೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು