AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drone Prathap: ಡ್ರೋನ್ ಪ್ರತಾಪ್ ಆತ್ಮಹತ್ಯೆ ಪ್ರಯತ್ನ ವದಂತಿ; ಹೇಗಿದೆ ಆರೋಗ್ಯ?

ಡ್ರೋನ್ ಪ್ರತಾಪ್ ಅವರಿಗೆ ಆರೋಗ್ಯ ಕೈ ಕೊಟ್ಟಿದೆ. ಅಲ್ಲದೆ, ಅವರು ಬಿಗ್ ಬಾಸ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಕೆಲವು ಕಡೆಗಳಲ್ಲಿ ವದಂತಿ ಹಬ್ಬಿತ್ತು. ಆ ಬಗ್ಗೆ ಈಗ ಸ್ಪಷ್ಟನೆ ಸಿಕ್ಕಿದೆ. 

Drone Prathap: ಡ್ರೋನ್ ಪ್ರತಾಪ್ ಆತ್ಮಹತ್ಯೆ ಪ್ರಯತ್ನ ವದಂತಿ; ಹೇಗಿದೆ ಆರೋಗ್ಯ?
ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on:Jan 04, 2024 | 2:30 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಕೊನೆಯ ಹಂತಕ್ಕೆ ಬಂದಿದೆ. ಇನ್ನು ಕೆಲವೇ ವಾರಗಳಲ್ಲಿ ಫಿನಾಲೆ ನಡೆಯಲಿದೆ. ಸದ್ಯ ಮನೆಯಲ್ಲಿ ಒಂಭತ್ತು ಮಂದಿ ಇದ್ದು ಸ್ಪರ್ಧೆ ಜೋರಾಗಿದೆ. ಈ ಸಂದರ್ಭದಲ್ಲಿ ಆರೋಗ್ಯ ಕಾಪಾಡಿಕೊಳ್ಳೋದು ತುಂಬಾನೇ ಮುಖ್ಯ ಆಗುತ್ತದೆ. ಇಂಥ ಸಂದರ್ಭದಲ್ಲಿ ಆಸ್ಪತ್ರೆ ಸೇರಿದರೆ ಅವರಿಗೆ ಬೀಳೋ ವೋಟ್ ಮೇಲೆ ಇದು ಪ್ರಭಾವ ಬೀರುತ್ತದೆ. ಈಗ ಡ್ರೋನ್ ಪ್ರತಾಪ್ ಅವರು ಇದೇ ರೀತಿಯ ತೊಂದರೆ ಅನುಭವಿಸಿದ್ದಾರೆ. ಅವರಿಗೆ ಆರೋಗ್ಯ ಕೈ ಕೊಟ್ಟಿದೆ. ಅಲ್ಲದೆ, ಅವರು ಬಿಗ್ ಬಾಸ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಕೆಲವು ಕಡೆಗಳಲ್ಲಿ ವದಂತಿ ಹಬ್ಬಿತ್ತು. ಆ ಬಗ್ಗೆ ಈಗ ಸ್ಪಷ್ಟನೆ ಸಿಕ್ಕಿದೆ.

ಆಗಿದ್ದೇನು?

ಡ್ರೋನ್ ಪ್ರತಾಪ್ ಅವರು ಲೈವ್​​ನಲ್ಲಿ ಕಾಣಿಸಿರಲಿಲ್ಲ. ಸಂಗೀತಾ ಅವರು ಕ್ಯಾಮೆರಾ ಎದುರು ಬಂದು ‘ಮಿಸ್ ಯೂ ಪ್ರತು’ ಎಂದು ಹೇಳಿದ್ದರು. ಪ್ರತಾಪ್ ಎಲ್ಲಿ ಹೋದರು ಎನ್ನುವ ಪ್ರಶ್ನೆ ಮೂಡಿತ್ತು. ಮೂಲಗಳ ಪ್ರಕಾರ ಬಿಗ್ ಬಾಸ್ ಮನೆಯಲ್ಲಿ ಅವರಿಗೆ ಫುಡ್ ಪಾಯ್ಸನ್ ಆಗಿದೆ. ಈ ಕಾರಣದಿಂದಲೇ ಅವರು ಆಸ್ಪತ್ರೆ ಸೇರಿದ್ದಾರೆ. ಅವರು ಈಗ ಚೇತರಿಕೆ ಕಂಡಿದ್ದಾರೆ.

ಮರಳೋದು ಯಾವಾಗ?

ಇಂದು (ಜನವರಿ 4) ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಮನೆ ಒಳಗೆ ತೆರಳಲಿದ್ದಾರೆ. ಈ ಬಗ್ಗೆ ಅವರ ಫ್ಯಾಮಿಲಿ ಕಡೆಯಿಂದ ಮಾಹಿತಿ ಸಿಕ್ಕಿದೆ. ಅಲ್ಲದೆ, ಅವರ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಅಪ್​​ಡೇಟ್ ನೀಡಲಾಗಿದೆ. ಈ ವಿಚಾರ  ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಅವರು ಶೀಘ್ರವೇ ಬಿಗ್ ಬಾಸ್​ಗೆ ಮರಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಇದನ್ನೂ ಓದಿ: ‘ನೀರಿನ ಶಬ್ದ ಇಲ್ಲ, ಬಟ್ಟೆ ಒಗೆದ ಶಬ್ದವೂ ಇಲ್ಲ’; ಬಾತ್​ ರೂಮ್​ಗೆ ಹೋದ ಪ್ರತಾಪ್​ ಮೇಲೆ ಸಂಗೀತಾ ಅನುಮಾನ

ಡೇಂಜರ್ ಜೋನ್

ಈ ವಾರ ಡ್ರೋನ್ ಪ್ರತಾಪ್ ಅವರು ಡೇಂಜರ್​ಜೋನ್​ನಲ್ಲಿ ಇದ್ದಾರೆ. ಮೈಕಲ್, ಕಾರ್ತಿಕ್, ತುಕಾಲಿ ಸಂತೋಷ್ ಹಾಗೂ ವರ್ತೂರು ಸಂತೋಷ್ ಜೊತೆ ಪ್ರತಾಪ್ ಕೂಡ ನಾಮಿನೇಟ್ ಆಗಿದ್ದಾರೆ. ಈ ವಾರ ಅವರು ಸೇವ್ ಆಗಲೇಬೇಕಾದ ಅನಿವಾರ್ಯತೆ ಇದೆ.

ಗುರೂಜಿ ಮಾತು

ಇತ್ತೀಚೆಗೆ ಬಿಗ್ ಬಾಸ್ ಮನೆಗೆ ವಿದ್ಯಾಶಂಕರ ಸರಸ್ವತಿ ಸಾಮೀಜಿ ಆಗಮಿಸಿದ್ದರು. ಈ ವೇಳೆ ಅವರು ‘ತಂದೆ ತಾಯಿಯಿಂದ ದೂರವೇ ಇದ್ದರೆ ನಿನನಗೆ ಒಳಿತಾಗುತ್ತದೆ’ ಎಂದು ಪ್ರತಾಪ್​ಗೆ ಹೇಳಿದ್ದರು. ಇದನ್ನು ಕೇಳಿ ಪ್ರತಾಪ್ ಅವರು ಬೇಸರಗೊಂಡಿದ್ದರು. ಈ ಬೆನ್ನಲ್ಲೇ ಅವರಿಗೆ ಅನಾರೋಗ್ಯ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:20 pm, Thu, 4 January 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?