AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿಕೊಟ್ಟಂಗಾಯ್ತು ಎಂದ ಡ್ರೋನ್ ಪ್ರತಾಪ್

ಡ್ರೋನ್ ಪ್ರತಾಪ್ ಅವರು ಆಗಾಗ ನಗೆಚಟಾಕಿ ಹಾರಿಸುತ್ತಿದ್ದಾರೆ. ಈಗ ದೊಡ್ಮನೆಯಲ್ಲಿ ಅವರು ಹೇಳಿರುವ ಗಾದೆ ಗಮನ ಸೆಳೆಯುತ್ತಿದೆ. ಈ ಗಾದೆ ಬಗ್ಗೆ ಡ್ರೋನ್ ಪ್ರತಾಪ್ ವಿವರಿಸಿದ್ದನ್ನು ಕೇಳಿ ನಮ್ರತಾ ಅವರು ಮನಪೂರ್ತಿಯಾಗಿ ನಕ್ಕಿದ್ದಾರೆ.

ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿಕೊಟ್ಟಂಗಾಯ್ತು ಎಂದ ಡ್ರೋನ್ ಪ್ರತಾಪ್
ಡ್ರೋನ್ ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on:Oct 18, 2023 | 8:13 AM

Share

ಡ್ರೋನ್ ಪ್ರತಾಪ್ (Drone Prathap) ಅವರು ಮೊದಲ ವಾರ ಸಖತ್ ಡಲ್ ಆಗಿದ್ದರು. ಎರಡನೇ ವಾರದಲ್ಲಿ ಅವರು ಮೈಲೇಜ್ ಪಡೆದುಕೊಂಡಿದ್ದಾರೆ. ಮನೆಯ ಸದಸ್ಯರ ಜೊತೆ ಅವರು ಬೆರೆಯುವ ಪ್ರಯತ್ನ ಮಾಡುತ್ತಿದ್ದಾರೆ. ಡ್ರೋನ್ ಪ್ರತಾಪ್ ಅವರು ಆಗಾಗ ನಗೆಚಟಾಕಿ ಹಾರಿಸುತ್ತಿದ್ದಾರೆ. ಈಗ ದೊಡ್ಮನೆಯಲ್ಲಿ ಅವರು ಹೇಳಿರುವ ಗಾದೆ ಗಮನ ಸೆಳೆಯುತ್ತಿದೆ. ಈ ಗಾದೆ ಬಗ್ಗೆ ಡ್ರೋನ್ ಪ್ರತಾಪ್ ವಿವರಿಸಿದ್ದನ್ನು ಕೇಳಿ ನಮ್ರತಾ ಅವರು ಮನಪೂರ್ತಿಯಾಗಿ ನಕ್ಕಿದ್ದಾರೆ.

ಡ್ರೋನ್ ಪ್ರತಾಪ್ ಅವರನ್ನು ವರ್ತೂರ್ ಸಂತೋಷ್ ಹಾಗೂ ತುಕಾಲಿ ಸಂತೋಷ್ ಅವರು ಟೀಕೆ ಮಾಡಿದ್ದರು. ಟೀಕೆಯ ಸುರಿಮಳೆ ತಡೆಯಲು ಅವರು ಬಳಿ ಸಾಧ್ಯವಾಗಲೇ ಇಲ್ಲ. ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆಗೆ ಬಂತು. ಸುದೀಪ್ ಅವರು ತುಕಾಲಿ ಸಂತೋಷ್​ಗೆ ಕ್ಲಾಸ್ ತೆಗೆದುಕೊಂಡರು. ಸುದೀಪ್ ಅವರು ತಮ್ಮ ಪರವಾಗಿ ನಿಂತಿದ್ದನ್ನು ಕೇಳಿ ಡ್ರೋನ್ ಪ್ರತಾಪ್ ಅವರು ಟ್ರ್ಯಾಕ್​ಗೆ ಮರಳಿದ್ದಾರೆ.

ಡ್ರೋನ್ ಪ್ರತಾಪ್, ನಮ್ರತಾ ಗೌಡ ಹಾಗೂ ಕಾರ್ತಿಕ್ ವಾಶ್​ರೂಂ ಬಳಿ ಇದ್ದರು. ನಮ್ರತಾ ಅವರು ವಾಶ್​ರೂಂನ ಕ್ಲೀನ್ ಮಾಡುತ್ತಿದ್ದರು. ಈ ವೇಳೆ ಕಾರ್ತಿಕ್ ಅವರು ‘ಏನಾದರೂ ಸಹಾಯ ಮಾಡಬೇಕೆ’ ಎಂದು ಕೇಳಿದರು. ಇದಕ್ಕೆ ‘ನೋ’ ಎನ್ನುವ ಉತ್ತರ ನಮ್ರತಾ ಕಡೆಯಿಂದ ಬಂತು. ಹೇಗೆ ಕ್ಲೀನ್ ಮಾಡಬೇಕು ಎನ್ನುವ ಬಗ್ಗೆ ನಮ್ರತಾಗೆ ಪಾಠ ಹೇಳಿಕೊಡಲು ಹೊರಟರು ಕಾರ್ತಿಕ್. ಆಗ ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿಕೊಟ್ಟಂಗಾಯ್ತು’ ಎಂದರು ಪ್ರತಾಪ್. ಇದನ್ನು ಕೇಳಿ ಅಲ್ಲಿದ್ದವರು ನಕ್ಕರೂ.

ಇದನ್ನೂ ಓದಿ: ಹರಕೆ ಕುರಿಯಂತಾಗಿದ್ದ ಡ್ರೋನ್ ಪ್ರತಾಪ್ ಬೆಂಬಲಕ್ಕೆ ನಿಂತ ಸುದೀಪ್, ಕ್ಷಮೆ ಕೇಳಿದ ಸಂತೋಶ್

ಕಾರ್ತಿಕ್ ಅವರು ಈ ಗಾದೆಯ ವಿವರಣೆ ಕೇಳಿದರು. ಇದಕ್ಕೆ ಪ್ರತಾಪ್ ಉತ್ತರಿಸಿದ್ದಾರೆ. ‘ಒಬ್ಬಳು ಆರು ಮಗುವನ್ನು ಹೆತ್ತಿದ್ದಳಂತೆ. ಏಳನೇ ಮಗು ಡೆಲಿವರಿ ಆಗುವುದಿತ್ತಂತೆ. ಆಗ ಮೂರು ಹೆತ್ತವಳು ಮಗುವನ್ನು ಹಾಗೆ ಹೆರಬೇಕು, ಹೀಗೆ ಹೆರಬೇಕು ಎಂದೆಲ್ಲ ಹೇಳುತ್ತಿದ್ದಳಂತೆ. ನಿಮ್ಮ ಕಥೆಯೂ ಹಾಗೆಯೇ ಆಯ್ತು’ ಎಂದು ಪ್ರತಾಪ್ ವಿವರಣೆ ನೀಡಿದ್ದಾರೆ. ನಮ್ರತಾಗೆ ಕ್ಲೀನಿಂಗ್ ವಿಚಾರದಲ್ಲಿ ಸಾಕಷ್ಟು ಅನುಭವ ಇದೆ. ನಮ್ರತಾಗೆ ಗೊತ್ತಿದ್ದಷ್ಟು ಕಾರ್ತಿಕ್​ಗೆ ಗೊತ್ತಿಲ್ಲ ಎಂಬುದನ್ನು ವಿವರಿಸಲು ಈ ಗಾದೆ ಬಳಸಿದ್ದರು ಡ್ರೋನ್ ಪ್ರತಾಪ್. ದಿನದ 24 ಗಂಟೆಯೂ ‘ಜಿಯೋ ಸಿನಿಮಾ’ದಲ್ಲಿ ಈ ಕಾರ್ಯಕ್ರಮವನ್ನು ಉಚಿತವಾಗಿ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:34 am, Wed, 18 October 23

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!