AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಶ್​ರೂಂನಲ್ಲಿ ಕುಳಿತು ಅತ್ತ ಪ್ರತಾಪ್; ಇದನ್ನು ನೋಡಿ ಕಣ್ಣೀರು ಹಾಕಿದ ಸಂಗೀತಾ, ನಮ್ರತಾ

ವಿನಯ್ ಹಾಗೂ ಪ್ರತಾಪ್ ಮಧ್ಯೆ ಕಿತ್ತಾಟ ನಡೆಯಿತು. ಈ ವಿಚಾರ ಹಲವು ಬಾರಿ ಚರ್ಚೆಗೆ ಬಂತು. ಇದರಿಂದ ಪ್ರತಾಪ್ ಬೇಸರಗೊಂಡರು. ವರ್ತೂರ್ ಸಂತೋಷ್ ಹಾಗೂ ತುಕಾಲಿ ಸಂತೋಷ್ ಪದೇ ಪದೇ ಪ್ರತಾಪ್ ಅವರನ್ನು ಟಾರ್ಗೆಟ್ ಮಾಡಿದರು. ಇದರಿಂದ ಅವರಿಗೆ ಬೇಸರ ಆಯಿತು.

ವಾಶ್​ರೂಂನಲ್ಲಿ ಕುಳಿತು ಅತ್ತ ಪ್ರತಾಪ್; ಇದನ್ನು ನೋಡಿ ಕಣ್ಣೀರು ಹಾಕಿದ ಸಂಗೀತಾ, ನಮ್ರತಾ
ಡ್ರೋನ್ ಪ್ರತಾಪ್-ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Oct 14, 2023 | 8:52 AM

Share

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ (Drone Prathap) ಟಾರ್ಗೆಟ್ ಆಗುತ್ತಿದ್ದಾರೆ. ಡ್ರೋನ್ ವಿಚಾರ ಇಟ್ಟುಕೊಂಡು ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ‘ಹೊರಗಿನ ವಿಷಯವನ್ನು ದೊಡ್ಮನೆ ಒಳಗೆ ತರಬೇಡಿ’ ಎಂದು ಪ್ರತಾಪ್ ಅವರು ಅನೇಕ ಬಾರಿ ಹೇಳಿಕೊಂಡರು. ಆದರೆ, ಯಾರೂ ಇದನ್ನು ಕೇಳಿಲ್ಲ. ಅವರನ್ನು ಪದೇ ಪದೇ ಟಾರ್ಗೆಟ್ ಮಾಡಲಾಗುತ್ತಿದೆ. ಇದು ಅವರಿಗೆ ಬೇಸರ ತಂದಿದೆ. ವಾಶ್​ರೂಂ ಒಳಗೆ ಕುಳಿತು ಕಣ್ಣೀರು ಹಾಕಿದ್ದಾರೆ ಪ್ರತಾಪ್. ತುಕಾಲಿ ಸಂತೋಷ್ ಅವರು ಈ ವಿಚಾರವನ್ನು ಇಟ್ಟುಕೊಂಡು ಪದೇ ಪದೇ ಅಣಕಿಸುತ್ತಿದ್ದಾರೆ. ಇದು ಪ್ರತಾಪ್ ನೋವು ಹೆಚ್ಚಲು ಕಾರಣ.

ವಿನಯ್ ಹಾಗೂ ಪ್ರತಾಪ್ ಮಧ್ಯೆ ಕಿತ್ತಾಟ ನಡೆಯಿತು. ಈ ವಿಚಾರ ಹಲವು ಬಾರಿ ಚರ್ಚೆಗೆ ಬಂತು. ಇದರಿಂದ ಪ್ರತಾಪ್ ಬೇಸರಗೊಂಡರು. ವರ್ತೂರ್ ಸಂತೋಷ್ ಹಾಗೂ ತುಕಾಲಿ ಸಂತೋಷ್ ಪದೇ ಪದೇ ಪ್ರತಾಪ್ ಅವರನ್ನು ಟಾರ್ಗೆಟ್ ಮಾಡಿದರು. ಇದರಿಂದ ಅವರಿಗೆ ಬೇಸರ ಆಯಿತು. ಈ ವಿಚಾರವನ್ನು ಯಾರ ಜೊತೆಯೂ ಹೇಳದೇ ವಾಶ್​ರೂಂ ಏರಿಯಾದಲ್ಲಿ ಒಬ್ಬನೇ ಕುಳಿತಿದ್ದರು.

ಸ್ನೇಹಿತ್, ಪ್ರತಾಪ್ ಮೊದಲಾದವರು ಅವರ ಬಳಿ ಹೋಗಿ ಏನಾಯಿತು ಎಂದು ಕೇಳಿದರು. ದುಃಖ ತಡೆಯಲಾರದೆ ವಾಶ್​ರೂಂ ಒಳಗೆ ತೆರಳಿ ಕಣ್ಣೀರು ಹಾಕಿದರು ಪ್ರತಾಪ್. ಅಲ್ಲಿಗೆ ಬಂದ ಸಂಗೀತಾ ಶೃಂಗೇರಿ ಹಾಗೂ ನಮ್ರತಾ ಗೌಡ ಅವರು ಪ್ರತಾಪ್ ಅವರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರು. ಅವರು ಅಳುವುದನ್ನು ನೋಡಿ ಸಂಗೀತಾ ಕಣ್ಣಲ್ಲಿ, ನಮ್ರತಾ ಕಣ್ಣಲ್ಲಿ ನೀರು ಬಂತು.

ನಮ್ರತಾ ಅವರು ಕೂಡ ಈ ಮೊದಲು ಕುಟುಂಬದವರಿಂದಲೇ ಟಾರ್ಗೆಟ್ ಆಗಿದ್ದರು. ಈ ರೀತಿಯ ಘಟನೆ ಆದಾಗ ಅವರಿಗೆ ಸಾಕಷ್ಟು ನೋವಾಗುತ್ತದೆಯಂತೆ. ಹೀಗಾಗಿ, ಪ್ರತಾಪ್​ಗೆ ಆದ ನೋವಲ್ಲಿ ಅವರು ಕೂಡ ಭಾಗಿ ಆಗಿದ್ದಾರೆ.

ಇದನ್ನೂ ಓದಿ: ಒಂದರ ಹಿಂದೊಂದು ಸಮಸ್ಯೆಗೆ ಸಿಲುಕಿದ ಪ್ರತಾಪ್: ರೆಕ್ಕೆ ಕತ್ತರಿಸುವ ಬೆದರಿಕೆ ಹಾಕಿದ ವಿನಯ್

ಡ್ರೋನ್ ಪ್ರತಾಪ್​ ಅವರನ್ನು ಟಾರ್ಗೆಟ್ ಮಾಡಿದ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಈ ಘಟನೆಯ ಬಗ್ಗೆ ಸುದೀಪ್ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಬಿಗ್ ಬಾಸ್ ನೋಡಲು ಅವಕಾಶ ಇದೆ. ಕಲರ್ಸ ಕನ್ನಡದಲ್ಲಿ ಬಿಗ್ ಬಾಸ್ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:40 am, Sat, 14 October 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ