AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಶ್​ರೂಂನಲ್ಲಿ ಕುಳಿತು ಅತ್ತ ಪ್ರತಾಪ್; ಇದನ್ನು ನೋಡಿ ಕಣ್ಣೀರು ಹಾಕಿದ ಸಂಗೀತಾ, ನಮ್ರತಾ

ವಿನಯ್ ಹಾಗೂ ಪ್ರತಾಪ್ ಮಧ್ಯೆ ಕಿತ್ತಾಟ ನಡೆಯಿತು. ಈ ವಿಚಾರ ಹಲವು ಬಾರಿ ಚರ್ಚೆಗೆ ಬಂತು. ಇದರಿಂದ ಪ್ರತಾಪ್ ಬೇಸರಗೊಂಡರು. ವರ್ತೂರ್ ಸಂತೋಷ್ ಹಾಗೂ ತುಕಾಲಿ ಸಂತೋಷ್ ಪದೇ ಪದೇ ಪ್ರತಾಪ್ ಅವರನ್ನು ಟಾರ್ಗೆಟ್ ಮಾಡಿದರು. ಇದರಿಂದ ಅವರಿಗೆ ಬೇಸರ ಆಯಿತು.

ವಾಶ್​ರೂಂನಲ್ಲಿ ಕುಳಿತು ಅತ್ತ ಪ್ರತಾಪ್; ಇದನ್ನು ನೋಡಿ ಕಣ್ಣೀರು ಹಾಕಿದ ಸಂಗೀತಾ, ನಮ್ರತಾ
ಡ್ರೋನ್ ಪ್ರತಾಪ್-ಸಂಗೀತಾ
Follow us
ರಾಜೇಶ್ ದುಗ್ಗುಮನೆ
|

Updated on:Oct 14, 2023 | 8:52 AM

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ (Drone Prathap) ಟಾರ್ಗೆಟ್ ಆಗುತ್ತಿದ್ದಾರೆ. ಡ್ರೋನ್ ವಿಚಾರ ಇಟ್ಟುಕೊಂಡು ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ‘ಹೊರಗಿನ ವಿಷಯವನ್ನು ದೊಡ್ಮನೆ ಒಳಗೆ ತರಬೇಡಿ’ ಎಂದು ಪ್ರತಾಪ್ ಅವರು ಅನೇಕ ಬಾರಿ ಹೇಳಿಕೊಂಡರು. ಆದರೆ, ಯಾರೂ ಇದನ್ನು ಕೇಳಿಲ್ಲ. ಅವರನ್ನು ಪದೇ ಪದೇ ಟಾರ್ಗೆಟ್ ಮಾಡಲಾಗುತ್ತಿದೆ. ಇದು ಅವರಿಗೆ ಬೇಸರ ತಂದಿದೆ. ವಾಶ್​ರೂಂ ಒಳಗೆ ಕುಳಿತು ಕಣ್ಣೀರು ಹಾಕಿದ್ದಾರೆ ಪ್ರತಾಪ್. ತುಕಾಲಿ ಸಂತೋಷ್ ಅವರು ಈ ವಿಚಾರವನ್ನು ಇಟ್ಟುಕೊಂಡು ಪದೇ ಪದೇ ಅಣಕಿಸುತ್ತಿದ್ದಾರೆ. ಇದು ಪ್ರತಾಪ್ ನೋವು ಹೆಚ್ಚಲು ಕಾರಣ.

ವಿನಯ್ ಹಾಗೂ ಪ್ರತಾಪ್ ಮಧ್ಯೆ ಕಿತ್ತಾಟ ನಡೆಯಿತು. ಈ ವಿಚಾರ ಹಲವು ಬಾರಿ ಚರ್ಚೆಗೆ ಬಂತು. ಇದರಿಂದ ಪ್ರತಾಪ್ ಬೇಸರಗೊಂಡರು. ವರ್ತೂರ್ ಸಂತೋಷ್ ಹಾಗೂ ತುಕಾಲಿ ಸಂತೋಷ್ ಪದೇ ಪದೇ ಪ್ರತಾಪ್ ಅವರನ್ನು ಟಾರ್ಗೆಟ್ ಮಾಡಿದರು. ಇದರಿಂದ ಅವರಿಗೆ ಬೇಸರ ಆಯಿತು. ಈ ವಿಚಾರವನ್ನು ಯಾರ ಜೊತೆಯೂ ಹೇಳದೇ ವಾಶ್​ರೂಂ ಏರಿಯಾದಲ್ಲಿ ಒಬ್ಬನೇ ಕುಳಿತಿದ್ದರು.

ಸ್ನೇಹಿತ್, ಪ್ರತಾಪ್ ಮೊದಲಾದವರು ಅವರ ಬಳಿ ಹೋಗಿ ಏನಾಯಿತು ಎಂದು ಕೇಳಿದರು. ದುಃಖ ತಡೆಯಲಾರದೆ ವಾಶ್​ರೂಂ ಒಳಗೆ ತೆರಳಿ ಕಣ್ಣೀರು ಹಾಕಿದರು ಪ್ರತಾಪ್. ಅಲ್ಲಿಗೆ ಬಂದ ಸಂಗೀತಾ ಶೃಂಗೇರಿ ಹಾಗೂ ನಮ್ರತಾ ಗೌಡ ಅವರು ಪ್ರತಾಪ್ ಅವರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರು. ಅವರು ಅಳುವುದನ್ನು ನೋಡಿ ಸಂಗೀತಾ ಕಣ್ಣಲ್ಲಿ, ನಮ್ರತಾ ಕಣ್ಣಲ್ಲಿ ನೀರು ಬಂತು.

ನಮ್ರತಾ ಅವರು ಕೂಡ ಈ ಮೊದಲು ಕುಟುಂಬದವರಿಂದಲೇ ಟಾರ್ಗೆಟ್ ಆಗಿದ್ದರು. ಈ ರೀತಿಯ ಘಟನೆ ಆದಾಗ ಅವರಿಗೆ ಸಾಕಷ್ಟು ನೋವಾಗುತ್ತದೆಯಂತೆ. ಹೀಗಾಗಿ, ಪ್ರತಾಪ್​ಗೆ ಆದ ನೋವಲ್ಲಿ ಅವರು ಕೂಡ ಭಾಗಿ ಆಗಿದ್ದಾರೆ.

ಇದನ್ನೂ ಓದಿ: ಒಂದರ ಹಿಂದೊಂದು ಸಮಸ್ಯೆಗೆ ಸಿಲುಕಿದ ಪ್ರತಾಪ್: ರೆಕ್ಕೆ ಕತ್ತರಿಸುವ ಬೆದರಿಕೆ ಹಾಕಿದ ವಿನಯ್

ಡ್ರೋನ್ ಪ್ರತಾಪ್​ ಅವರನ್ನು ಟಾರ್ಗೆಟ್ ಮಾಡಿದ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಈ ಘಟನೆಯ ಬಗ್ಗೆ ಸುದೀಪ್ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಬಿಗ್ ಬಾಸ್ ನೋಡಲು ಅವಕಾಶ ಇದೆ. ಕಲರ್ಸ ಕನ್ನಡದಲ್ಲಿ ಬಿಗ್ ಬಾಸ್ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:40 am, Sat, 14 October 23

Daily horoscope: ಇಂದು ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲ
Daily horoscope: ಇಂದು ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್