AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೋನ್​ ಪ್ರತಾಪ್​ಗೆ ಡೋಂಗಿ ಎಂದು ಕರೆದ ಸ್ಪರ್ಧಿಗಳು; ಬಿಗ್ ಬಾಸ್ ಮನೆಯಲ್ಲಿ ಕಾವೇರಿತು ಚರ್ಚೆ

ಡ್ರೋನ್ ಪ್ರತಾಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪದೇ ಪದೇ ಟ್ರೋಲ್​ಗೆ ಒಳಗಾಗುತ್ತಾರೆ. ಈಗ ಅವರು ತಮ್ಮದೇ ಆಫೀಸ್​ ಆರಂಭಿಸಿದ್ದಾರೆ. ಔಷಧ ಸಿಂಪಡನೆಗೆ ಡ್ರೋನ್​ನ ಅವರು ಬಾಡಿಗೆ ನೀಡುತ್ತಾರೆ. ಈ ವಿಚಾರ ಬಿಗ್ ಬಾಸ್ ಮನೆಯಲ್ಲಿ ಚರ್ಚೆಗೆ ಬಂದಿದೆ.

ಡ್ರೋನ್​ ಪ್ರತಾಪ್​ಗೆ ಡೋಂಗಿ ಎಂದು ಕರೆದ ಸ್ಪರ್ಧಿಗಳು; ಬಿಗ್ ಬಾಸ್ ಮನೆಯಲ್ಲಿ ಕಾವೇರಿತು ಚರ್ಚೆ
ಡ್ರೋನ್ ಪ್ರತಾಪ್
ರಾಜೇಶ್ ದುಗ್ಗುಮನೆ
| Edited By: |

Updated on:Oct 11, 2023 | 4:23 PM

Share

ಡ್ರೋನ್ ಪ್ರತಾಪ್ (Drone Pratap) ಅವರು ಸಾಕಷ್ಟು ಚರ್ಚೆಗೆ ಒಳಗಾದವರು. ತಾವೇ ಡ್ರೋನ್ ತಯಾರಿಸಿದ್ದಾಗಿ ಅವರು ಹೇಳಿದ್ದರು. ಇದನ್ನು ಅನೇಕರು ನಂಬಿದ್ದರು. ಅವರಿಗೆ ಸಾಕಷ್ಟು ಪ್ರಚಾರ ನೀಡಲಾಯಿತು. ಜಗ್ಗೇಶ್ ಸೇರಿ ಅನೇಕರು ಡ್ರೋನ್ ಪ್ರತಾಪ್ ಅವರನ್ನು ಹೊಗಳಿದರು. ಯುವ ವಿಜ್ಞಾನಿ ಎಂದೆಲ್ಲ ಅವರನ್ನು ಕರೆಯಲಾಯಿತು. ಆದರೆ, ಅವರು ಹೇಳಿದ್ದು ಸುಳ್ಳು ಎಂಬುದು ಆ ಬಳಿಕ ಗೊತ್ತಾಯಿತು. ಈಗ ಡ್ರೋನ್ ಪ್ರತಾಪ್ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅಲ್ಲಿಯೂ ಅವರನ್ನು ಡೋಂಗಿ ಎಂದು ಕರೆಯಲಾಗಿದೆ.

ಡ್ರೋನ್ ಪ್ರತಾಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪದೇ ಪದೇ ಟ್ರೋಲ್​ಗೆ ಒಳಗಾಗುತ್ತಾರೆ. ಈಗ ಅವರು ತಮ್ಮದೇ ಆಫೀಸ್​ ಆರಂಭಿಸಿದ್ದಾರೆ. ಔಷಧ ಸಿಂಪಡನೆಗೆ ಡ್ರೋನ್​ನ ಅವರು ಬಾಡಿಗೆ ನೀಡುತ್ತಾರೆ. ಈ ವಿಚಾರ ಬಿಗ್ ಬಾಸ್ ಮನೆಯಲ್ಲಿ ಚರ್ಚೆಗೆ ಬಂದಿದೆ. ತುಕಾಲಿ ಸಂತೋಷ್ ಅವರು ಪ್ರತಾಪ್​ನ ಕೆಣಕಿದ್ದಾರೆ.

ಪ್ರತಾಪ್ ಅವರ ಡ್ರೋನ್ ವಿಚಾರ ಇಟ್ಟುಕೊಂಡು ಮನೆಯವರೆಲ್ಲ ಆಡಿಕೊಂಡಿದ್ದಾರೆ. ‘ಡ್ರೋನ್​ನ ಇವರೇ ತಯಾರಿಸುವುದಲ್ಲ. ಬೇರೆ ಕಡೆಯಿಂದ ತಂದು ಇವರು ಬಾಡಿಗೆ ಕೊಡೋದು ಅಷ್ಟೇ’ ಎಂದು ಹೇಳಿಕೊಂಡು ನಕ್ಕರು ತುಕಾಲಿ ಸಂತೋಷ್. ಇದನ್ನು ಕೇಳಿ ಪ್ರತಾಪ್​ಗೆ ಸಿಟ್ಟೇ ಬಂತು. ‘ಬಿಸ್ನೆಸ್ ಬಗ್ಗೆ ಮಾತನಾಡೋದಾದರೆ ಕಚೇರಿಗೆ ಬನ್ನಿ, ಇಲ್ಲಿ ಆ ಬಗ್ಗೆ ಮಾತನಾಡಬೇಡಿ’ ಎಂದು ಸಿಟ್ಟಲ್ಲೇ ಹೇಳಿದರು.

ಇದನ್ನೂ ಓದಿ: ‘ನಮ್ಮ ಹೊಲಕ್ಕೂ ಡ್ರೋನ್ ತಗೊಂಡು ಬರ್ತೀರಾ?’ ಪ್ರತಾಪ್​ನ ಕಾಲೆಳೆದ ತುಕಾಲಿ ಸಂತೋಷ್

‘ಇದು ಜೆನ್ಯೂನ್ ಕ್ವಶ್ಚನ್ ಆಗಿತ್ತು’ ಎಂದು ಸ್ಪಷ್ಟನೆ ನೀಡುವ ಕೆಲಸ ಮಾಡಿದರು ಸ್ನೇಹಿತ್. ಆಗ ಪ್ರತಾಪ್ ಅವರು ಸಿಟ್ಟಿನಿಂದಲೇ ಉತ್ತರಿಸಿದರು. ಈ ವೇಳೆ ‘ನೀನು ಡೋಂಗಿ’ ಎಂದು ಹೇಳಿದರು ಸ್ನೇಹಿತ್. ಇದರಿಂದ ಬಿಗ್ ಬಾಸ್ ಮನೆಯಲ್ಲಿ ಚರ್ಚೆ ಜೋರಾಗಿದೆ. ಸದ್ಯ ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಇಂದು (ಅಕ್ಟೋಬರ್ 11) ಸಂಪೂರ್ಣ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಈ ರಿಯಾಲಿಟಿ ಶೋನ ನೋಡೋಕೆ ಅವಕಾಶ ಮಾಡಿಕೊಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:02 pm, Wed, 11 October 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ