AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೋನ್​ ಪ್ರತಾಪ್​ಗೆ ಡೋಂಗಿ ಎಂದು ಕರೆದ ಸ್ಪರ್ಧಿಗಳು; ಬಿಗ್ ಬಾಸ್ ಮನೆಯಲ್ಲಿ ಕಾವೇರಿತು ಚರ್ಚೆ

ಡ್ರೋನ್ ಪ್ರತಾಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪದೇ ಪದೇ ಟ್ರೋಲ್​ಗೆ ಒಳಗಾಗುತ್ತಾರೆ. ಈಗ ಅವರು ತಮ್ಮದೇ ಆಫೀಸ್​ ಆರಂಭಿಸಿದ್ದಾರೆ. ಔಷಧ ಸಿಂಪಡನೆಗೆ ಡ್ರೋನ್​ನ ಅವರು ಬಾಡಿಗೆ ನೀಡುತ್ತಾರೆ. ಈ ವಿಚಾರ ಬಿಗ್ ಬಾಸ್ ಮನೆಯಲ್ಲಿ ಚರ್ಚೆಗೆ ಬಂದಿದೆ.

ಡ್ರೋನ್​ ಪ್ರತಾಪ್​ಗೆ ಡೋಂಗಿ ಎಂದು ಕರೆದ ಸ್ಪರ್ಧಿಗಳು; ಬಿಗ್ ಬಾಸ್ ಮನೆಯಲ್ಲಿ ಕಾವೇರಿತು ಚರ್ಚೆ
ಡ್ರೋನ್ ಪ್ರತಾಪ್
ರಾಜೇಶ್ ದುಗ್ಗುಮನೆ
| Edited By: |

Updated on:Oct 11, 2023 | 4:23 PM

Share

ಡ್ರೋನ್ ಪ್ರತಾಪ್ (Drone Pratap) ಅವರು ಸಾಕಷ್ಟು ಚರ್ಚೆಗೆ ಒಳಗಾದವರು. ತಾವೇ ಡ್ರೋನ್ ತಯಾರಿಸಿದ್ದಾಗಿ ಅವರು ಹೇಳಿದ್ದರು. ಇದನ್ನು ಅನೇಕರು ನಂಬಿದ್ದರು. ಅವರಿಗೆ ಸಾಕಷ್ಟು ಪ್ರಚಾರ ನೀಡಲಾಯಿತು. ಜಗ್ಗೇಶ್ ಸೇರಿ ಅನೇಕರು ಡ್ರೋನ್ ಪ್ರತಾಪ್ ಅವರನ್ನು ಹೊಗಳಿದರು. ಯುವ ವಿಜ್ಞಾನಿ ಎಂದೆಲ್ಲ ಅವರನ್ನು ಕರೆಯಲಾಯಿತು. ಆದರೆ, ಅವರು ಹೇಳಿದ್ದು ಸುಳ್ಳು ಎಂಬುದು ಆ ಬಳಿಕ ಗೊತ್ತಾಯಿತು. ಈಗ ಡ್ರೋನ್ ಪ್ರತಾಪ್ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅಲ್ಲಿಯೂ ಅವರನ್ನು ಡೋಂಗಿ ಎಂದು ಕರೆಯಲಾಗಿದೆ.

ಡ್ರೋನ್ ಪ್ರತಾಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪದೇ ಪದೇ ಟ್ರೋಲ್​ಗೆ ಒಳಗಾಗುತ್ತಾರೆ. ಈಗ ಅವರು ತಮ್ಮದೇ ಆಫೀಸ್​ ಆರಂಭಿಸಿದ್ದಾರೆ. ಔಷಧ ಸಿಂಪಡನೆಗೆ ಡ್ರೋನ್​ನ ಅವರು ಬಾಡಿಗೆ ನೀಡುತ್ತಾರೆ. ಈ ವಿಚಾರ ಬಿಗ್ ಬಾಸ್ ಮನೆಯಲ್ಲಿ ಚರ್ಚೆಗೆ ಬಂದಿದೆ. ತುಕಾಲಿ ಸಂತೋಷ್ ಅವರು ಪ್ರತಾಪ್​ನ ಕೆಣಕಿದ್ದಾರೆ.

ಪ್ರತಾಪ್ ಅವರ ಡ್ರೋನ್ ವಿಚಾರ ಇಟ್ಟುಕೊಂಡು ಮನೆಯವರೆಲ್ಲ ಆಡಿಕೊಂಡಿದ್ದಾರೆ. ‘ಡ್ರೋನ್​ನ ಇವರೇ ತಯಾರಿಸುವುದಲ್ಲ. ಬೇರೆ ಕಡೆಯಿಂದ ತಂದು ಇವರು ಬಾಡಿಗೆ ಕೊಡೋದು ಅಷ್ಟೇ’ ಎಂದು ಹೇಳಿಕೊಂಡು ನಕ್ಕರು ತುಕಾಲಿ ಸಂತೋಷ್. ಇದನ್ನು ಕೇಳಿ ಪ್ರತಾಪ್​ಗೆ ಸಿಟ್ಟೇ ಬಂತು. ‘ಬಿಸ್ನೆಸ್ ಬಗ್ಗೆ ಮಾತನಾಡೋದಾದರೆ ಕಚೇರಿಗೆ ಬನ್ನಿ, ಇಲ್ಲಿ ಆ ಬಗ್ಗೆ ಮಾತನಾಡಬೇಡಿ’ ಎಂದು ಸಿಟ್ಟಲ್ಲೇ ಹೇಳಿದರು.

ಇದನ್ನೂ ಓದಿ: ‘ನಮ್ಮ ಹೊಲಕ್ಕೂ ಡ್ರೋನ್ ತಗೊಂಡು ಬರ್ತೀರಾ?’ ಪ್ರತಾಪ್​ನ ಕಾಲೆಳೆದ ತುಕಾಲಿ ಸಂತೋಷ್

‘ಇದು ಜೆನ್ಯೂನ್ ಕ್ವಶ್ಚನ್ ಆಗಿತ್ತು’ ಎಂದು ಸ್ಪಷ್ಟನೆ ನೀಡುವ ಕೆಲಸ ಮಾಡಿದರು ಸ್ನೇಹಿತ್. ಆಗ ಪ್ರತಾಪ್ ಅವರು ಸಿಟ್ಟಿನಿಂದಲೇ ಉತ್ತರಿಸಿದರು. ಈ ವೇಳೆ ‘ನೀನು ಡೋಂಗಿ’ ಎಂದು ಹೇಳಿದರು ಸ್ನೇಹಿತ್. ಇದರಿಂದ ಬಿಗ್ ಬಾಸ್ ಮನೆಯಲ್ಲಿ ಚರ್ಚೆ ಜೋರಾಗಿದೆ. ಸದ್ಯ ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಇಂದು (ಅಕ್ಟೋಬರ್ 11) ಸಂಪೂರ್ಣ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಈ ರಿಯಾಲಿಟಿ ಶೋನ ನೋಡೋಕೆ ಅವಕಾಶ ಮಾಡಿಕೊಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:02 pm, Wed, 11 October 23

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ