AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬರ್ತಿದೆ ‘ಭೀಮ’ ಸಿನಿಮಾ

Duniya Vijay: ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ಕೆಲ ತಿಂಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಒಟಿಟಿಯಲ್ಲಿಯೂ ಉತ್ತಮ ವೀಕ್ಷಣೆ ಕಂಡಿತ್ತು. ಇದೀಗ ಈ ಸಿನಿಮಾ ಟಿವಿಯಲ್ಲಿ ಪ್ರಸಾರ ಆಗಲಿದೆ. ‘ಭೀಮ’ ಸಿನಿಮಾ ಟಿವಿಯಲ್ಲಿ ಪ್ರಸಾರವಾಗುವ ದಿನಾಂಕ ಘೋಷಣೆ ಆಗಿದೆ.

ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬರ್ತಿದೆ ‘ಭೀಮ’ ಸಿನಿಮಾ
Bheema Movie
 ಶ್ರೀಲಕ್ಷ್ಮೀ ಎಚ್
| Edited By: |

Updated on:Mar 25, 2025 | 6:16 PM

Share

ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆದ ಚಿತ್ರ ‘ಭೀಮ’. ದುನಿಯಾ ವಿಜಯ್ ನಿರ್ದೇಶಿಸಿ, ನಟಿಸಿರುವ ಈ ಸಿನಿಮಾ, ಸಮಾಜದಲ್ಲಿ ಯುವ ಜನತೆಗೆ ಸಿಗುತ್ತಿರುವ ಡ್ರಗ್ಸ್ ಬಗ್ಗೆ ಹಾಗೂ ಅದರ ಪರಿಣಾಮದ ಬಗ್ಗೆ ವಿವರ ಇತ್ತು. ಈಗ ಈ ಚಿತ್ರವು ಟಿವಿಯಲ್ಲಿ ಬರಲು ರೆಡಿ ಆಗಿದೆ. ಹೌದು, ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ಭೀಮ’ ಸಿನಿಮಾ ಪ್ರಸಾರ ಕಾಣಲಿದೆ. ಈ ಬಗ್ಗೆ ಪ್ರೋಮೋ ಮೂಲಕ ಮಾಹಿತಿ ನೀಡಲಾಗಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಸಾಮಾನ್ಯವಾಗಿ ಹಬ್ಬ-ಹರಿದಿನಗಳಲ್ಲಿ ಹೊಸ ಸಿನಿಮಾಗಳು ಟಿವಿಯಲ್ಲಿ ಪ್ರಸಾರ ಕಾಣೋದು ವಾಡಿಕೆ. ಅದೇ ರೀತಿ ಈಗ ಯುಗಾದಿ ಹಬ್ಬ ಸಮೀಪಿಸಿದೆ. ಯುಗಾದಿ ಪ್ರಯುಕ್ತ ಮಾರ್ಚ್ 30ರ ರಾತ್ರಿ 7.30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ಭೀಮ’ ಚಿತ್ರ ಪ್ರಸಾರ ಕಾಣಲಿದೆ. ದುನಿಯಾ ವಿಜಯ್ ನಟನೆಯ ಈ ಚಿತ್ರವನ್ನು ಥಿಯೇಟರ್​ನಲ್ಲಿ ಮಿಸ್ ಮಾಡಿಕೊಂಡವರು ಕಿರುತೆರೆಯಲ್ಲಿ ವೀಕ್ಷಿಸಬಹುದಾಗಿದೆ.

ದುನಿಯಾ ವಿಜಯ್ ಸಿನಿಮಾಗಳು ಸದಾ ರಾ ಆಗಿರುತ್ತವೆ. ಅವರ ನಿರ್ದೇಶನದ ‘ಸಲಗ’ ಸಿನಿಮಾ ಸಖತ್ ರಗಡ್ ಆಗಿ ಮೂಡಿ ಬಂದಿತ್ತು. ಅದೇ ರೀತಿ ‘ಭೀಮ’ ಚಿತ್ರವು ರಾ ಶೈಲಿಯಲ್ಲಿ ಪ್ರೇಕ್ಷಕರ ಎದುರು ತಂದಿದ್ದರು ವಿಜಯ್. ಇದು ಅವರದ್ದೇ ನಿರ್ದೇಶನದ ಸಿನಿಮಾ. ಈಗ ಚಿತ್ರವು ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರ ಕಾಣುತ್ತಿದೆ. ಇದನ್ನು ಕಿರುತೆರೆ ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:ತಮಿಳು ಸಿನಿಮಾದಲ್ಲಿ ದುನಿಯಾ ವಿಜಯ್, ಮುಹೂರ್ತದ ವಿಡಿಯೋ ಇಲ್ಲಿದೆ

ದುನಿಯಾ ವಿಜಯ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. 2007ರಲ್ಲಿ ರಿಲೀಸ್ ಆದ ‘ದುನಿಯಾ’ ಸಿನಿಮಾ ಅವರ ಬದುಕು ಬದಲಿಸಿತು. ಅವರು ತೆಲುಗು ಸಿನಿಮಾಗಳಲ್ಲೂ ನಟಿಸುತ್ತಾ ಇದ್ದಾರೆ. ‘ಮೂಗುತ್ತಿ ಅಮ್ಮನ್ 2’ ಹೆಸರಿನ ತಮಿಳು ಸಿನಿಮಾದಲ್ಲಿ ನಟಿಸುತ್ತಾ ಇದ್ದಾರೆ. ಇದರ ಜೊತೆಗೆ ಕನ್ನಡದಲ್ಲೂ ಅವರು ಸಿನಿಮಾ ಮಾಡುತ್ತಿದ್ದಾರೆ. ಅವರ ಮಗಳ ಚಿತ್ರಕ್ಕೆ ವಿಜಯ್ ಅವರದ್ದೇ ನಿರ್ದೇಶನ ಇದೆ.

ದುನಿಯಾ ವಿಜಯ್ ಅವರಿಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ಪರಭಾಷೆಗಳಲ್ಲಿ ವಿಜಯ್ ಅವರು ಸಿನಿಮಾ ಮಾಡುತ್ತಿದ್ದಾರೆ. ಅಲ್ಲಿ ವಿಲನ್ ಪಾತ್ರಗಳನ್ನು ಮಾಡಿ ಗಮನ ಸೆಳೆಯುತ್ತಾ ಇದ್ದಾರೆ. ಈ ಮೂಲಕ ಅವರು ಅಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Tue, 25 March 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು