AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉದಯ’ ಟಿವಿಯಲ್ಲಿ ‘ಸಲಗ’ ಸಿನಿಮಾ; ಜುಲೈ 24ಕ್ಕೆ ದುನಿಯಾ ವಿಜಯ್​ ಅಭಿಮಾನಿಗಳಿಗೆ ಹಬ್ಬ

Salaga | Udaya TV: ‘ಸಲಗ’ ಕೇವಲ ಹೊಡಿಬಡಿ ಕಥೆ ಇರುವ ಸಿನಿಮಾ ಅಲ್ಲ. ಇದರಲ್ಲಿ ಒಂದು ಉತ್ತಮವಾದ ಮೆಸೇಜ್​ ಇದೆ. ಫ್ಯಾಮಿಲಿ ಸೆಂಟಿಮೆಂಟ್​ ಸಹ ಇದೆ.

‘ಉದಯ’ ಟಿವಿಯಲ್ಲಿ ‘ಸಲಗ’ ಸಿನಿಮಾ; ಜುಲೈ 24ಕ್ಕೆ ದುನಿಯಾ ವಿಜಯ್​ ಅಭಿಮಾನಿಗಳಿಗೆ ಹಬ್ಬ
ದುನಿಯಾ ವಿಜಯ್
Follow us
TV9 Web
| Updated By: ಮದನ್​ ಕುಮಾರ್​

Updated on:Jul 19, 2022 | 2:47 PM

ನಟ ದುನಿಯಾ ವಿಜಯ್​ (Duniya Vijay) ಅವರು ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿರುವ ಅವರು ಈಗ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ನಟನಾಗಿ ಫೇಮಸ್​ ಆಗಿದ್ದ ಅವರು ‘ಸಲಗ’ ಸಿನಿಮಾ (Salaga) ಮೂಲಕ ನಿರ್ದೇಶಕನಾಗಿಯೂ ಯಶಸ್ಸು ಕಂಡರು. 2021ರ ಅಕ್ಟೋಬರ್​ನಲ್ಲಿ ತೆರೆಕಂಡ ಈ ಸಿನಿಮಾಗೆ ಸಖತ್​ ಜನಮಚ್ಚುಗೆ ವ್ಯಕ್ತವಾಗಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡುವ ಮೂಲಕ ನಿರ್ಮಾಪಕ ಕೆ.ಪಿ. ಶ್ರೀಕಾಂತ್​ ಅವರ ಮೊಗದಲ್ಲಿ ನಗು ಮೂಡಿಸಿತ್ತು. ಈಗ ‘ಸಲಗ’ ಸಿನಿಮಾ ಕಿರುತೆರೆಯಲ್ಲಿ ಮೊದಲ ಬಾರಿಗೆ ಪ್ರಸಾರ ಕಾಣಲು ಸಜ್ಜಾಗಿದೆ. ಉದಯ ವಾಹಿನಿಯಲ್ಲಿ (Udaya TV) ಜುಲೈ 24ರಂದು ಸಂಜೆ 6.30ಕ್ಕೆ ಈ ಚಿತ್ರ ಪ್ರಸಾರ ಆಗಲಿದೆ. ಆ ಮೂಲಕ ದುನಿಯಾ ವಿಜಯ್​ ಅಭಿಮಾನಿಗಳಿಗೆ ಮಸ್ತ್​ ಮನರಂಜನೆ ಸಿಗಲಿದೆ.

‘ಸಲಗ’ ಸಿನಿಮಾ ಪಕ್ಕಾ ಮಾಸ್​ ಶೈಲಿಯಲ್ಲಿ ಮೂಡಿಬಂದಿದೆ. ಭೂಗತಲೋಕದ ಕಥೆಯನ್ನು ಇಟ್ಟುಕೊಂಡು ಸಿದ್ಧವಾದ ಈ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರಿಗೆ ಜೋಡಿಯಾಗಿ ಸಂಜನಾ ಆನಂದ್​ ನಟಿಸಿದರು. ಕಾಕ್ರೋಜ್​ ಸುಧಿ, ಡಾಲಿ ಧನಂಜಯ್ ಮುಂತಾದ ಕಲಾವಿದರ ಸಂಗಮ ಈ ಚಿತ್ರದಲ್ಲಾಗಿದೆ. ಚಿತ್ರಮಂದಿರದಲ್ಲಿ ‘ಸಲಗ’ ಮಿಸ್​ ಮಾಡಿಕೊಂಡವರು ಈಗ ಟಿವಿಯಲ್ಲಿ ನೋಡಿ ಎಂಜಾಯ್​ ಮಾಡಬಹುದು.

ಇದನ್ನೂ ಓದಿ
Image
Vedha Title Launch: ಶಿವಣ್ಣನ ಸಿನಿಮಾದಲ್ಲಿ ಚಾನ್ಸ್ ಕೇಳಿದ ದುನಿಯಾ ವಿಜಯ್
Image
ದುನಿಯಾ ವಿಜಯ್​ ನಟನೆಯ ತೆಲುಗು ಚಿತ್ರದ ಶೂಟಿಂಗ್​ನಲ್ಲಿ ಪಾಲ್ಗೊಂಡ ‘ಸಲಾರ್’ ಬೆಡಗಿ ಶ್ರುತಿ ಹಾಸನ್​
Image
ದುನಿಯಾ ವಿಜಯ್​ ಎದುರು ಕಾದಾಡಲು ‘ಬೇಟೆ ಶುರು..’ ಎಂದು ಮಾಸ್​ ಅವತಾರ ತಾಳಿದ ನಂದಮೂರಿ ಬಾಲಕೃಷ್ಣ
Image
ದುನಿಯಾ ವಿಜಯ್​ ನಿರ್ದೇಶನದ ‘ಭೀಮ’ ಚಿತ್ರದ ಮೇಕಿಂಗ್ ವಿಡಿಯೋ ಕಂಡು ಕಣ್ಣರಳಿಸಿದ ಫ್ಯಾನ್ಸ್​

ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ ಗೆಲುವು ಪಡೆದಿದ್ದು ದುನಿಯಾ ವಿಜಯ್​ ಅವರ ಪಾಲಿನ ಹೆಮ್ಮೆಯ ವಿಷಯ. ಈ ಸಿನಿಮಾದ ಯಶಸ್ಸಿನಲ್ಲಿ ಸಂಗೀತ ನಿರ್ದೇಶಕ ಚರಣ್​ ರಾಜ್​ ಅವರ ಕೊಡುಗೆ ಕೂಡ ದೊಡ್ಡದು. ಅವರ ಬತ್ತಳಿಕೆಯಿಂದ ಬಂದ ಹಾಡುಗಳು ಸೂಪರ್​ ಹಿಟ್​ ಆದವು. ‘ಸೂರಿಯಣ್ಣ..’, ‘ಟಿಣಿಂಗ ಮಿಣಿಂಗ ಟಿಶ್ಯ..’ ಗೀತೆಗಳು ಸೃಷ್ಟಿಸಿದ ಕ್ರೇಜ್​ ಅಷ್ಟಿಷ್ಟಲ್ಲ. ಮಾಸ್ತಿ ಬರೆದ ಡೈಲಾಗ್​ಗಳು ಕೂಡ ಚಿತ್ರದ ತೂಕ ಹೆಚ್ಚಿಸಿದವು.

ಅಂದಹಾಗೆ, ‘ಸಲಗ’ ಕೇವಲ ಹೊಡಿಬಡಿ ಕಥೆ ಇರುವ ಸಿನಿಮಾ ಅಲ್ಲ. ಇದರಲ್ಲಿ ಒಂದು ಮೆಸೇಜ್​ ಕೂಡ ಇದೆ. ಫ್ಯಾಮಿಲಿ ಸೆಂಟಿಮೆಂಟ್​ ಸಹ ಇದೆ. ಆ ಕಾರಣಕ್ಕಾಗಿ ಕೌಟುಂಬಿಕ ಪ್ರೇಕ್ಷಕರನ್ನು ಈ ಚಿತ್ರ ಸೆಳೆದುಕೊಂಡಿತು. ‘ಸಲಗ’ ಸಿನಿಮಾದ ಯಶಸ್ಸಿನ ಬಳಿಕ ದುನಿಯಾ ವಿಜಯ್​ ಅವರ ಮೈಲೇಜ್​ ಹೆಚ್ಚಿದೆ. ಪರಭಾಷೆಯಿಂದಲೂ ಅವರಿಗೆ ಡಿಮ್ಯಾಂಡ್​ ಬಂದಿದೆ. ನಂದಮೂರಿ ಬಾಲಕೃಷ್ಣ ನಟನೆಯ ಹೊಸ ಚಿತ್ರದಲ್ಲಿ ಅವರು ವಿಲನ್​ ಆಗಿ ನಟಿಸುತ್ತಿರುವುದು ವಿಶೇಷ.

Published On - 2:46 pm, Tue, 19 July 22

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ