AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಕೃತಾಗಾಗಿ ವಿಶೇಷ ಹಾಡನ್ನು ಡೆಡಿಕೇಟ್ ಮಾಡಿದ ದ್ಯಾಮೇಶ್; ನಟಿಗೆ ಖುಷಿಯೋ ಖುಷಿ

bharjari bachelors 2: ಸರಿಗಮಪ ಮಾಜಿ ಸ್ಪರ್ಧಿ ದ್ಯಾಮಣ್ಣ ಈಗ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ವೇದಿಕೆ ಮೇಲೆ ಅವರು ಹಾಡನ್ನು ಸುಕೃತಾಗೆ ಡೆಡಿಕೇಟ್ ಮಾಡಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿಯು ಹಂಚಿಕೊಂಡಿದೆ. ಶನಿವಾರ (ಜೂನ್ 14) ಹಾಗೂ ಭಾನುವಾರ (ಜೂನ್ 15) ಈ ಸಂಚಿಕೆ ಪ್ರಸಾರ ಕಂಡಿದೆ.

ಸುಕೃತಾಗಾಗಿ ವಿಶೇಷ ಹಾಡನ್ನು ಡೆಡಿಕೇಟ್ ಮಾಡಿದ ದ್ಯಾಮೇಶ್; ನಟಿಗೆ ಖುಷಿಯೋ ಖುಷಿ
Sukratha
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 15, 2025 | 11:15 PM

Share

ದ್ಯಾಮೇಶ್ (Dyamesh) ಅವರು ‘ಸರಿಗಮಪ ಸೀಸನ್ 21’ನಲ್ಲಿ ಪಾಲ್ಗೊಂಡಿದ್ದರು. ಅವರು ಫಿನಾಲೆವರೆಗೆ ಹೋದರು. ಈ ವೇಳೆ ಅವರು ಉತ್ತಮ ಪರ್ಫಾರ್ಮೆನ್ಸ್ ನೀಡಿದರು. ಆದರೆ, ಗೆಲ್ಲೋಕೆ ಅವರಿಗೆ ಸಾಧ್ಯವಾಗಲೇ ಇಲ್ಲ. ಈಗ ಅವರು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ವೇದಿಕೆ ಮೇಲೆ ಅವರು ಹಾಡನ್ನು ಸುಕೃತಾಗೆ ಡೆಡಿಕೇಟ್ ಮಾಡಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿಯು ಹಂಚಿಕೊಂಡಿದೆ. ಶನಿವಾರ (ಜೂನ್ 14) ಹಾಗೂ ಭಾನುವಾರ (ಜೂನ್ 15) ಈ ಸಂಚಿಕೆ ಪ್ರಸಾರ ಕಂಡಿದೆ.

‘ಸರಿಗಮಪ’ ಶೋ ವಿವಿಧ ಹಂತಗಳಲ್ಲಿ ನಡೆದವು. ಹಲವು ತಿಂಗಳ ಕಾಲ ಈ ಶೋ ಇತ್ತು. ಇತ್ತೀಚೆಗೆ ಶೋನ ಫಿನಾಲೆಯು ನಡೆಯಿತು ಮತ್ತು ಶಿವಾನಿ ಸ್ವಾಮಿ ವಿನ್ನರ್ ಆದರು. ಟಾಪ್ 3ರಲ್ಲಿ ಇದ್ದ ಮೂವರು ಹೆಣ್ಣು ಮಕ್ಕಳೇ ಆಗಿದ್ದರು ಅನ್ನೋದು ವಿಶೇಷ. ದ್ಯಾಮೇಶ್ ಅವರಿಗೆ ಟಾಪ್ 3ನಲ್ಲಿ ಬರೋಕೆ ಆಗಲೇ ಇಲ್ಲ. ಈ ವಿಚಾರ ಅವರಿಗೇನು ಬೇಸರ ನೀಡಿಲ್ಲ. ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಈಗ ‘ಸರಿಗಮಪ’ ವಿನ್ನರ್​ಗಳು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆಗೆ ಅತಿಥಿಯಾಗಿ ಆಗಮಿಸಿದ್ದರು.

View this post on Instagram

A post shared by Zee Kannada (@zeekannada)

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಸ್ಪರ್ಧಿಗಳು ಹಾಡನ್ನು ಹಾಡಿ ಎಲ್ಲರೂ ರಂಜಿಸಿದರು. ‘ಇಲ್ಲಿ 10 ಜನರ ಏಂಜಲ್ಸ್ ಇದ್ದಾರೆ. ಇವರಲ್ಲಿ ಯಾರನ್ನು ನೋಡಿದರೆ ಯಾವ ಸಾಂಗ್ ನೆನಪಾಗುತ್ತದೆ. ಬೇಗ ಬೇಗ ಹೇಳಿ’ ಎಂದು ನಿರಂಜನ್ ಅವರು ದ್ಯಾಮೇಶ್​ಗೆ ಕೇಳಿದರು. ಇದಕ್ಕೆ ದ್ಯಾಮೇಶ್ ಅವರು ನಾನು ಮೊದಲ ಹಾಡನ್ನು ಸುಕೃತಾಗೆ ಹೇಳುತ್ತೇನೆ ಎಂದರು.

ದ್ಯಾಮೇಶ್ ಅವರು ಮೊದಲು ಹಾಡನ್ನು ತಮಗಾಗಿ ಹೇಳುತ್ತಿದ್ದಾರೆ ಎಂದಾಗ ಸುಕೃತಾ ಅವರಿಗೆ ತುಂಬಾನೇ ಖುಷಿ ಆಯಿಯಿತು ಮತ್ತು ಖುಷಿಯಿಂದ ಅವರು ನಕ್ಕರು. ಈ ವೇಳೆ ಅವರಿಗಾಗಿ ಜಾಜಿ ಮಲ್ಲಿಗೆ ಹೂವೇ ಹಾಡನ್ನು ದ್ಯಾಮೇಶ್ ಹಾಡಿದರು. ಆ ಬಳಿಕ ರಚಿತಾ ರಾಮ್​ಗೋಸ್ಕರವೂ ಹಾಡನ್ನು ಹಾಡಿದರು ದ್ಯಾಮೇಶ್. ಸುಕೃತಾ ಅವರು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಗಮನ ಸೆಳೆಯುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು