AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಕೃತಾಗಾಗಿ ವಿಶೇಷ ಹಾಡನ್ನು ಡೆಡಿಕೇಟ್ ಮಾಡಿದ ದ್ಯಾಮೇಶ್; ನಟಿಗೆ ಖುಷಿಯೋ ಖುಷಿ

bharjari bachelors 2: ಸರಿಗಮಪ ಮಾಜಿ ಸ್ಪರ್ಧಿ ದ್ಯಾಮಣ್ಣ ಈಗ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ವೇದಿಕೆ ಮೇಲೆ ಅವರು ಹಾಡನ್ನು ಸುಕೃತಾಗೆ ಡೆಡಿಕೇಟ್ ಮಾಡಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿಯು ಹಂಚಿಕೊಂಡಿದೆ. ಶನಿವಾರ (ಜೂನ್ 14) ಹಾಗೂ ಭಾನುವಾರ (ಜೂನ್ 15) ಈ ಸಂಚಿಕೆ ಪ್ರಸಾರ ಕಂಡಿದೆ.

ಸುಕೃತಾಗಾಗಿ ವಿಶೇಷ ಹಾಡನ್ನು ಡೆಡಿಕೇಟ್ ಮಾಡಿದ ದ್ಯಾಮೇಶ್; ನಟಿಗೆ ಖುಷಿಯೋ ಖುಷಿ
Sukratha
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Jun 15, 2025 | 11:15 PM

Share

ದ್ಯಾಮೇಶ್ (Dyamesh) ಅವರು ‘ಸರಿಗಮಪ ಸೀಸನ್ 21’ನಲ್ಲಿ ಪಾಲ್ಗೊಂಡಿದ್ದರು. ಅವರು ಫಿನಾಲೆವರೆಗೆ ಹೋದರು. ಈ ವೇಳೆ ಅವರು ಉತ್ತಮ ಪರ್ಫಾರ್ಮೆನ್ಸ್ ನೀಡಿದರು. ಆದರೆ, ಗೆಲ್ಲೋಕೆ ಅವರಿಗೆ ಸಾಧ್ಯವಾಗಲೇ ಇಲ್ಲ. ಈಗ ಅವರು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ವೇದಿಕೆ ಮೇಲೆ ಅವರು ಹಾಡನ್ನು ಸುಕೃತಾಗೆ ಡೆಡಿಕೇಟ್ ಮಾಡಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿಯು ಹಂಚಿಕೊಂಡಿದೆ. ಶನಿವಾರ (ಜೂನ್ 14) ಹಾಗೂ ಭಾನುವಾರ (ಜೂನ್ 15) ಈ ಸಂಚಿಕೆ ಪ್ರಸಾರ ಕಂಡಿದೆ.

‘ಸರಿಗಮಪ’ ಶೋ ವಿವಿಧ ಹಂತಗಳಲ್ಲಿ ನಡೆದವು. ಹಲವು ತಿಂಗಳ ಕಾಲ ಈ ಶೋ ಇತ್ತು. ಇತ್ತೀಚೆಗೆ ಶೋನ ಫಿನಾಲೆಯು ನಡೆಯಿತು ಮತ್ತು ಶಿವಾನಿ ಸ್ವಾಮಿ ವಿನ್ನರ್ ಆದರು. ಟಾಪ್ 3ರಲ್ಲಿ ಇದ್ದ ಮೂವರು ಹೆಣ್ಣು ಮಕ್ಕಳೇ ಆಗಿದ್ದರು ಅನ್ನೋದು ವಿಶೇಷ. ದ್ಯಾಮೇಶ್ ಅವರಿಗೆ ಟಾಪ್ 3ನಲ್ಲಿ ಬರೋಕೆ ಆಗಲೇ ಇಲ್ಲ. ಈ ವಿಚಾರ ಅವರಿಗೇನು ಬೇಸರ ನೀಡಿಲ್ಲ. ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಈಗ ‘ಸರಿಗಮಪ’ ವಿನ್ನರ್​ಗಳು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆಗೆ ಅತಿಥಿಯಾಗಿ ಆಗಮಿಸಿದ್ದರು.

View this post on Instagram

A post shared by Zee Kannada (@zeekannada)

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಸ್ಪರ್ಧಿಗಳು ಹಾಡನ್ನು ಹಾಡಿ ಎಲ್ಲರೂ ರಂಜಿಸಿದರು. ‘ಇಲ್ಲಿ 10 ಜನರ ಏಂಜಲ್ಸ್ ಇದ್ದಾರೆ. ಇವರಲ್ಲಿ ಯಾರನ್ನು ನೋಡಿದರೆ ಯಾವ ಸಾಂಗ್ ನೆನಪಾಗುತ್ತದೆ. ಬೇಗ ಬೇಗ ಹೇಳಿ’ ಎಂದು ನಿರಂಜನ್ ಅವರು ದ್ಯಾಮೇಶ್​ಗೆ ಕೇಳಿದರು. ಇದಕ್ಕೆ ದ್ಯಾಮೇಶ್ ಅವರು ನಾನು ಮೊದಲ ಹಾಡನ್ನು ಸುಕೃತಾಗೆ ಹೇಳುತ್ತೇನೆ ಎಂದರು.

ದ್ಯಾಮೇಶ್ ಅವರು ಮೊದಲು ಹಾಡನ್ನು ತಮಗಾಗಿ ಹೇಳುತ್ತಿದ್ದಾರೆ ಎಂದಾಗ ಸುಕೃತಾ ಅವರಿಗೆ ತುಂಬಾನೇ ಖುಷಿ ಆಯಿಯಿತು ಮತ್ತು ಖುಷಿಯಿಂದ ಅವರು ನಕ್ಕರು. ಈ ವೇಳೆ ಅವರಿಗಾಗಿ ಜಾಜಿ ಮಲ್ಲಿಗೆ ಹೂವೇ ಹಾಡನ್ನು ದ್ಯಾಮೇಶ್ ಹಾಡಿದರು. ಆ ಬಳಿಕ ರಚಿತಾ ರಾಮ್​ಗೋಸ್ಕರವೂ ಹಾಡನ್ನು ಹಾಡಿದರು ದ್ಯಾಮೇಶ್. ಸುಕೃತಾ ಅವರು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಗಮನ ಸೆಳೆಯುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ