AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಕೃತಾಗಾಗಿ ವಿಶೇಷ ಹಾಡನ್ನು ಡೆಡಿಕೇಟ್ ಮಾಡಿದ ದ್ಯಾಮೇಶ್; ನಟಿಗೆ ಖುಷಿಯೋ ಖುಷಿ

bharjari bachelors 2: ಸರಿಗಮಪ ಮಾಜಿ ಸ್ಪರ್ಧಿ ದ್ಯಾಮಣ್ಣ ಈಗ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ವೇದಿಕೆ ಮೇಲೆ ಅವರು ಹಾಡನ್ನು ಸುಕೃತಾಗೆ ಡೆಡಿಕೇಟ್ ಮಾಡಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿಯು ಹಂಚಿಕೊಂಡಿದೆ. ಶನಿವಾರ (ಜೂನ್ 14) ಹಾಗೂ ಭಾನುವಾರ (ಜೂನ್ 15) ಈ ಸಂಚಿಕೆ ಪ್ರಸಾರ ಕಂಡಿದೆ.

ಸುಕೃತಾಗಾಗಿ ವಿಶೇಷ ಹಾಡನ್ನು ಡೆಡಿಕೇಟ್ ಮಾಡಿದ ದ್ಯಾಮೇಶ್; ನಟಿಗೆ ಖುಷಿಯೋ ಖುಷಿ
Sukratha
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 15, 2025 | 11:15 PM

Share

ದ್ಯಾಮೇಶ್ (Dyamesh) ಅವರು ‘ಸರಿಗಮಪ ಸೀಸನ್ 21’ನಲ್ಲಿ ಪಾಲ್ಗೊಂಡಿದ್ದರು. ಅವರು ಫಿನಾಲೆವರೆಗೆ ಹೋದರು. ಈ ವೇಳೆ ಅವರು ಉತ್ತಮ ಪರ್ಫಾರ್ಮೆನ್ಸ್ ನೀಡಿದರು. ಆದರೆ, ಗೆಲ್ಲೋಕೆ ಅವರಿಗೆ ಸಾಧ್ಯವಾಗಲೇ ಇಲ್ಲ. ಈಗ ಅವರು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ವೇದಿಕೆ ಮೇಲೆ ಅವರು ಹಾಡನ್ನು ಸುಕೃತಾಗೆ ಡೆಡಿಕೇಟ್ ಮಾಡಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿಯು ಹಂಚಿಕೊಂಡಿದೆ. ಶನಿವಾರ (ಜೂನ್ 14) ಹಾಗೂ ಭಾನುವಾರ (ಜೂನ್ 15) ಈ ಸಂಚಿಕೆ ಪ್ರಸಾರ ಕಂಡಿದೆ.

‘ಸರಿಗಮಪ’ ಶೋ ವಿವಿಧ ಹಂತಗಳಲ್ಲಿ ನಡೆದವು. ಹಲವು ತಿಂಗಳ ಕಾಲ ಈ ಶೋ ಇತ್ತು. ಇತ್ತೀಚೆಗೆ ಶೋನ ಫಿನಾಲೆಯು ನಡೆಯಿತು ಮತ್ತು ಶಿವಾನಿ ಸ್ವಾಮಿ ವಿನ್ನರ್ ಆದರು. ಟಾಪ್ 3ರಲ್ಲಿ ಇದ್ದ ಮೂವರು ಹೆಣ್ಣು ಮಕ್ಕಳೇ ಆಗಿದ್ದರು ಅನ್ನೋದು ವಿಶೇಷ. ದ್ಯಾಮೇಶ್ ಅವರಿಗೆ ಟಾಪ್ 3ನಲ್ಲಿ ಬರೋಕೆ ಆಗಲೇ ಇಲ್ಲ. ಈ ವಿಚಾರ ಅವರಿಗೇನು ಬೇಸರ ನೀಡಿಲ್ಲ. ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಈಗ ‘ಸರಿಗಮಪ’ ವಿನ್ನರ್​ಗಳು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆಗೆ ಅತಿಥಿಯಾಗಿ ಆಗಮಿಸಿದ್ದರು.

View this post on Instagram

A post shared by Zee Kannada (@zeekannada)

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಸ್ಪರ್ಧಿಗಳು ಹಾಡನ್ನು ಹಾಡಿ ಎಲ್ಲರೂ ರಂಜಿಸಿದರು. ‘ಇಲ್ಲಿ 10 ಜನರ ಏಂಜಲ್ಸ್ ಇದ್ದಾರೆ. ಇವರಲ್ಲಿ ಯಾರನ್ನು ನೋಡಿದರೆ ಯಾವ ಸಾಂಗ್ ನೆನಪಾಗುತ್ತದೆ. ಬೇಗ ಬೇಗ ಹೇಳಿ’ ಎಂದು ನಿರಂಜನ್ ಅವರು ದ್ಯಾಮೇಶ್​ಗೆ ಕೇಳಿದರು. ಇದಕ್ಕೆ ದ್ಯಾಮೇಶ್ ಅವರು ನಾನು ಮೊದಲ ಹಾಡನ್ನು ಸುಕೃತಾಗೆ ಹೇಳುತ್ತೇನೆ ಎಂದರು.

ದ್ಯಾಮೇಶ್ ಅವರು ಮೊದಲು ಹಾಡನ್ನು ತಮಗಾಗಿ ಹೇಳುತ್ತಿದ್ದಾರೆ ಎಂದಾಗ ಸುಕೃತಾ ಅವರಿಗೆ ತುಂಬಾನೇ ಖುಷಿ ಆಯಿಯಿತು ಮತ್ತು ಖುಷಿಯಿಂದ ಅವರು ನಕ್ಕರು. ಈ ವೇಳೆ ಅವರಿಗಾಗಿ ಜಾಜಿ ಮಲ್ಲಿಗೆ ಹೂವೇ ಹಾಡನ್ನು ದ್ಯಾಮೇಶ್ ಹಾಡಿದರು. ಆ ಬಳಿಕ ರಚಿತಾ ರಾಮ್​ಗೋಸ್ಕರವೂ ಹಾಡನ್ನು ಹಾಡಿದರು ದ್ಯಾಮೇಶ್. ಸುಕೃತಾ ಅವರು ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಗಮನ ಸೆಳೆಯುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ