AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ರವೀಂದ್ರ ಹಂದಿಗನೂರು ಅವರು ಸಂಗೀತ ಸಂಯೋಜನೆ ಮಾಡಿದ ‘ಮೂಕನಾಗಬೇಕು ಜಗದೊಳು..’ ತತ್ವಪದವನ್ನು ಸೂರ್ಯಕಾಂತ್​ ಹಾಡಿದ್ದಾರೆ.

ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್
ಸೂರ್ಯಕಾಂತ್, ರಾಜೇಶ್ ಕೃಷ್ಣನ್
TV9 Web
| Edited By: |

Updated on:Aug 23, 2021 | 9:43 AM

Share

ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೇತೃತ್ವದಲ್ಲಿ ಈ ಮೊದಲು ಪ್ರಸಾರವಾಗಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಅನೇಕ ಕಲಾವಿದರಿಗೆ ವೇದಿಕೆ ಆಗಿತ್ತು. ಈಗ ಈ ಕಾರ್ಯಕ್ರಮ ಮತ್ತೆ ಆರಂಭಗೊಂಡಿದೆ. ಕಲರ್ಸ್​ ಕನ್ನಡ ವಾಹಿನಿ ಹೊಸ ರೀತಿಯಲ್ಲಿ ಈ ಶೋ ಆರಂಭಿಸಿದ್ದು, ಸಾಕಷ್ಟು ಪ್ರತಿಭೆಗಳಿಗೆ ವೇದಿಕೆ ಆಗಿದೆ. ಇದರಲ್ಲಿ ಎಲ್ಲರ ಗಮನ ಸೆಳೆದಿದ್ದು  ಸೂರ್ಯಕಾಂತ್​ ಹೆಸರಿನ ಸ್ಪರ್ಧಿ. ಭಾನುವಾರದ (ಆಗಸ್ಟ್​ 22) ಎಪಿಸೋಡ್​ನಲ್ಲಿ ವೇದಿಕೆ ಏರಿದ ಅವರು, ಎಲ್ಲರ ಹೃದಯ ಗೆದ್ದರು.

ಸೂರ್ಯಕಾಂತ್​ ಅವರು ಕಲಬುರಗಿ ಜಿಲ್ಲೆಯ ಗಡಿಲಿಂಗದಹಳ್ಳಿಯವರು. ವೃತ್ತಿಯಲ್ಲಿ ಗಾಯಕ.  ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ರವೀಂದ್ರ ಹಂದಿಗನೂರು ಅವರು ಸಂಗೀತ ಸಂಯೋಜನೆ ಮಾಡಿದ ‘ಮೂಕನಾಗಬೇಕು ಜಗದೊಳು..’ ತತ್ವಪದವನ್ನು ಸೂರ್ಯಕಾಂತ್​ ಹಾಡಿದ್ದಾರೆ. ಸೂರ್ಯಕಾಂತ್​ ಸಾಮಾನ್ಯರಂತೆ ಇದ್ದಿದ್ದರೆ ಬಹುಶಃ ವೀಕ್ಷಕರಿಗೆ ಇಷ್ಟರ ಮಟ್ಟಿಗೆ ಹತ್ತಿರವಾಗುತ್ತಿರಲಿಲ್ಲವೇನೋ. ಆದರೆ, ಅವರು ಮಾತನಾಡುವಾಗ ತೊದಲುತ್ತಾರೆ. ಈ ಸಮಸ್ಯೆ ಮಧ್ಯೆಯೂ ಅವರಲ್ಲಿ ಹಾಡಬೇಕು ಎನ್ನುವ ಛಲ ಅದಮ್ಯವಾಗಿದೆ. ಹೀಗಾಗಿ, ಅದು ಸಮಸ್ಯೆ ಎಂದೇ ಅವರಿಗೆ ಅನಿಸಿಲ್ಲ. ಈ ಉಗ್ಗು ಸಮಸ್ಯೆಯನ್ನು ಅದಮಿಟ್ಟು ಸೂರ್ಯಕಾಂತ್​ ಅದ್ಭುತವಾಗಿ ಹಾಡಿದ್ದಾರೆ.

‘ರವೀಂದ್ರ ಹಂದಿಗನೂರು ಅವರು ಅದ್ಭುತ ಗಾಯಕರು, ಸಂಗೀತ ಸಂಯೋಜಕರು. ಅವರ ಹಾಡನ್ನು ಹಾಡಬೇಕು ಎಂದರೆ ಒಂದು ವಾರ ವಾರ್ಮ್​​ಅಪ್​ ಬೇಕು. ನೀವು ಹಾಡಿ ಕೇಳೋಣ’ ಎಂದರು ರಾಜೇಶ್​ ಕೃಷ್ಣನ್​.  ‘ಮೂಕನಾಗಬೇಕು ಜಗದೊಳು..’ ಎಂದು ಅದ್ಭುತವಾಗಿ ಹಾಡುವ ಮೂಲಕ ಸೂರ್ಯಕಾಂತ್​ ಎಲ್ಲರ ಗಮನಸೆಳೆದರು.

ಸೂರ್ಯಕಾಂತ್​ ಹಾಡಿದ ಹಾಡು ಕೇಳಿ ರಾಜೇಶ್​ ಕೃಷ್ಣನ್​ ಭಾವುಕರಾದರು. ‘ಸೂರ್ಯಕಾಂತ್ ಗೆಲ್ಲೋಕೂ ಮುಂಚೆನೇ ಗೆದ್ದಾಯ್ತು. ಸೂರ್ಯಕಾಂತ್ ಪ್ರತಿಭೆ ಎದೆ ತುಂಬಿ ಹಾಡುವೆನು ಅಷ್ಟೇ ಅಲ್ಲಾ ಇಡೀ ಕರ್ನಾಟಕಕ್ಕೇ ಹೆಮ್ಮೆ’ ಎನ್ನುವ ಕ್ಯಾಪ್ಶನ್​ ಅಡಿಯಲ್ಲಿ ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಎಸ್​.ಪಿ ಬಾಲಸುಬ್ರಹ್ಮಣ್ಯಂ​ ಅವರು ಅಭಿಮಾನಿ ಬಳಗದ ಜತೆಗೆ ದೊಡ್ಡ ಶಿಷ್ಯವರ್ಗವನ್ನೂ ಹೊಂದಿದ್ದಾರೆ. ನೇರವಾಗಿ ಹಾಗೂ ಪರೋಕ್ಷವಾಗಿ ಸಾಕಷ್ಟು ಮಂದಿ ಅವರಿಂದ ಹಲವು ವಿಚಾರಗಳನ್ನು ಕಲಿತಿದ್ದಾರೆ. ಈ ಕಾರಣಕ್ಕೆ ಎಸ್​ಪಿಬಿ ಎಂದರೆ ಎಲ್ಲರಿಗೂ ಅಪಾರ ಗೌರವ. ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಎರಡನೇ ಇನ್ನಿಂಗ್ಸ್​ ಮತ್ತೆ ಆರಂಭಿಸಲಾಗಿದೆ. ಈ ವೇದಿಕೆ ಸಾಕಷ್ಟು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ. ಜಡ್ಜ್​ಗಳು ಎಸ್​ಪಿಬಿ ಅವರನ್ನು ನೆನೆನೆನೆದು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

Published On - 8:13 am, Mon, 23 August 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?