AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ರವೀಂದ್ರ ಹಂದಿಗನೂರು ಅವರು ಸಂಗೀತ ಸಂಯೋಜನೆ ಮಾಡಿದ ‘ಮೂಕನಾಗಬೇಕು ಜಗದೊಳು..’ ತತ್ವಪದವನ್ನು ಸೂರ್ಯಕಾಂತ್​ ಹಾಡಿದ್ದಾರೆ.

ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್
ಸೂರ್ಯಕಾಂತ್, ರಾಜೇಶ್ ಕೃಷ್ಣನ್
TV9 Web
| Edited By: |

Updated on:Aug 23, 2021 | 9:43 AM

Share

ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೇತೃತ್ವದಲ್ಲಿ ಈ ಮೊದಲು ಪ್ರಸಾರವಾಗಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಅನೇಕ ಕಲಾವಿದರಿಗೆ ವೇದಿಕೆ ಆಗಿತ್ತು. ಈಗ ಈ ಕಾರ್ಯಕ್ರಮ ಮತ್ತೆ ಆರಂಭಗೊಂಡಿದೆ. ಕಲರ್ಸ್​ ಕನ್ನಡ ವಾಹಿನಿ ಹೊಸ ರೀತಿಯಲ್ಲಿ ಈ ಶೋ ಆರಂಭಿಸಿದ್ದು, ಸಾಕಷ್ಟು ಪ್ರತಿಭೆಗಳಿಗೆ ವೇದಿಕೆ ಆಗಿದೆ. ಇದರಲ್ಲಿ ಎಲ್ಲರ ಗಮನ ಸೆಳೆದಿದ್ದು  ಸೂರ್ಯಕಾಂತ್​ ಹೆಸರಿನ ಸ್ಪರ್ಧಿ. ಭಾನುವಾರದ (ಆಗಸ್ಟ್​ 22) ಎಪಿಸೋಡ್​ನಲ್ಲಿ ವೇದಿಕೆ ಏರಿದ ಅವರು, ಎಲ್ಲರ ಹೃದಯ ಗೆದ್ದರು.

ಸೂರ್ಯಕಾಂತ್​ ಅವರು ಕಲಬುರಗಿ ಜಿಲ್ಲೆಯ ಗಡಿಲಿಂಗದಹಳ್ಳಿಯವರು. ವೃತ್ತಿಯಲ್ಲಿ ಗಾಯಕ.  ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ರವೀಂದ್ರ ಹಂದಿಗನೂರು ಅವರು ಸಂಗೀತ ಸಂಯೋಜನೆ ಮಾಡಿದ ‘ಮೂಕನಾಗಬೇಕು ಜಗದೊಳು..’ ತತ್ವಪದವನ್ನು ಸೂರ್ಯಕಾಂತ್​ ಹಾಡಿದ್ದಾರೆ. ಸೂರ್ಯಕಾಂತ್​ ಸಾಮಾನ್ಯರಂತೆ ಇದ್ದಿದ್ದರೆ ಬಹುಶಃ ವೀಕ್ಷಕರಿಗೆ ಇಷ್ಟರ ಮಟ್ಟಿಗೆ ಹತ್ತಿರವಾಗುತ್ತಿರಲಿಲ್ಲವೇನೋ. ಆದರೆ, ಅವರು ಮಾತನಾಡುವಾಗ ತೊದಲುತ್ತಾರೆ. ಈ ಸಮಸ್ಯೆ ಮಧ್ಯೆಯೂ ಅವರಲ್ಲಿ ಹಾಡಬೇಕು ಎನ್ನುವ ಛಲ ಅದಮ್ಯವಾಗಿದೆ. ಹೀಗಾಗಿ, ಅದು ಸಮಸ್ಯೆ ಎಂದೇ ಅವರಿಗೆ ಅನಿಸಿಲ್ಲ. ಈ ಉಗ್ಗು ಸಮಸ್ಯೆಯನ್ನು ಅದಮಿಟ್ಟು ಸೂರ್ಯಕಾಂತ್​ ಅದ್ಭುತವಾಗಿ ಹಾಡಿದ್ದಾರೆ.

‘ರವೀಂದ್ರ ಹಂದಿಗನೂರು ಅವರು ಅದ್ಭುತ ಗಾಯಕರು, ಸಂಗೀತ ಸಂಯೋಜಕರು. ಅವರ ಹಾಡನ್ನು ಹಾಡಬೇಕು ಎಂದರೆ ಒಂದು ವಾರ ವಾರ್ಮ್​​ಅಪ್​ ಬೇಕು. ನೀವು ಹಾಡಿ ಕೇಳೋಣ’ ಎಂದರು ರಾಜೇಶ್​ ಕೃಷ್ಣನ್​.  ‘ಮೂಕನಾಗಬೇಕು ಜಗದೊಳು..’ ಎಂದು ಅದ್ಭುತವಾಗಿ ಹಾಡುವ ಮೂಲಕ ಸೂರ್ಯಕಾಂತ್​ ಎಲ್ಲರ ಗಮನಸೆಳೆದರು.

ಸೂರ್ಯಕಾಂತ್​ ಹಾಡಿದ ಹಾಡು ಕೇಳಿ ರಾಜೇಶ್​ ಕೃಷ್ಣನ್​ ಭಾವುಕರಾದರು. ‘ಸೂರ್ಯಕಾಂತ್ ಗೆಲ್ಲೋಕೂ ಮುಂಚೆನೇ ಗೆದ್ದಾಯ್ತು. ಸೂರ್ಯಕಾಂತ್ ಪ್ರತಿಭೆ ಎದೆ ತುಂಬಿ ಹಾಡುವೆನು ಅಷ್ಟೇ ಅಲ್ಲಾ ಇಡೀ ಕರ್ನಾಟಕಕ್ಕೇ ಹೆಮ್ಮೆ’ ಎನ್ನುವ ಕ್ಯಾಪ್ಶನ್​ ಅಡಿಯಲ್ಲಿ ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಎಸ್​.ಪಿ ಬಾಲಸುಬ್ರಹ್ಮಣ್ಯಂ​ ಅವರು ಅಭಿಮಾನಿ ಬಳಗದ ಜತೆಗೆ ದೊಡ್ಡ ಶಿಷ್ಯವರ್ಗವನ್ನೂ ಹೊಂದಿದ್ದಾರೆ. ನೇರವಾಗಿ ಹಾಗೂ ಪರೋಕ್ಷವಾಗಿ ಸಾಕಷ್ಟು ಮಂದಿ ಅವರಿಂದ ಹಲವು ವಿಚಾರಗಳನ್ನು ಕಲಿತಿದ್ದಾರೆ. ಈ ಕಾರಣಕ್ಕೆ ಎಸ್​ಪಿಬಿ ಎಂದರೆ ಎಲ್ಲರಿಗೂ ಅಪಾರ ಗೌರವ. ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಎರಡನೇ ಇನ್ನಿಂಗ್ಸ್​ ಮತ್ತೆ ಆರಂಭಿಸಲಾಗಿದೆ. ಈ ವೇದಿಕೆ ಸಾಕಷ್ಟು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ. ಜಡ್ಜ್​ಗಳು ಎಸ್​ಪಿಬಿ ಅವರನ್ನು ನೆನೆನೆನೆದು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

Published On - 8:13 am, Mon, 23 August 21

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ