AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ರವೀಂದ್ರ ಹಂದಿಗನೂರು ಅವರು ಸಂಗೀತ ಸಂಯೋಜನೆ ಮಾಡಿದ ‘ಮೂಕನಾಗಬೇಕು ಜಗದೊಳು..’ ತತ್ವಪದವನ್ನು ಸೂರ್ಯಕಾಂತ್​ ಹಾಡಿದ್ದಾರೆ.

ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್
ಸೂರ್ಯಕಾಂತ್, ರಾಜೇಶ್ ಕೃಷ್ಣನ್
TV9 Web
| Edited By: |

Updated on:Aug 23, 2021 | 9:43 AM

Share

ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೇತೃತ್ವದಲ್ಲಿ ಈ ಮೊದಲು ಪ್ರಸಾರವಾಗಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಅನೇಕ ಕಲಾವಿದರಿಗೆ ವೇದಿಕೆ ಆಗಿತ್ತು. ಈಗ ಈ ಕಾರ್ಯಕ್ರಮ ಮತ್ತೆ ಆರಂಭಗೊಂಡಿದೆ. ಕಲರ್ಸ್​ ಕನ್ನಡ ವಾಹಿನಿ ಹೊಸ ರೀತಿಯಲ್ಲಿ ಈ ಶೋ ಆರಂಭಿಸಿದ್ದು, ಸಾಕಷ್ಟು ಪ್ರತಿಭೆಗಳಿಗೆ ವೇದಿಕೆ ಆಗಿದೆ. ಇದರಲ್ಲಿ ಎಲ್ಲರ ಗಮನ ಸೆಳೆದಿದ್ದು  ಸೂರ್ಯಕಾಂತ್​ ಹೆಸರಿನ ಸ್ಪರ್ಧಿ. ಭಾನುವಾರದ (ಆಗಸ್ಟ್​ 22) ಎಪಿಸೋಡ್​ನಲ್ಲಿ ವೇದಿಕೆ ಏರಿದ ಅವರು, ಎಲ್ಲರ ಹೃದಯ ಗೆದ್ದರು.

ಸೂರ್ಯಕಾಂತ್​ ಅವರು ಕಲಬುರಗಿ ಜಿಲ್ಲೆಯ ಗಡಿಲಿಂಗದಹಳ್ಳಿಯವರು. ವೃತ್ತಿಯಲ್ಲಿ ಗಾಯಕ.  ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ರವೀಂದ್ರ ಹಂದಿಗನೂರು ಅವರು ಸಂಗೀತ ಸಂಯೋಜನೆ ಮಾಡಿದ ‘ಮೂಕನಾಗಬೇಕು ಜಗದೊಳು..’ ತತ್ವಪದವನ್ನು ಸೂರ್ಯಕಾಂತ್​ ಹಾಡಿದ್ದಾರೆ. ಸೂರ್ಯಕಾಂತ್​ ಸಾಮಾನ್ಯರಂತೆ ಇದ್ದಿದ್ದರೆ ಬಹುಶಃ ವೀಕ್ಷಕರಿಗೆ ಇಷ್ಟರ ಮಟ್ಟಿಗೆ ಹತ್ತಿರವಾಗುತ್ತಿರಲಿಲ್ಲವೇನೋ. ಆದರೆ, ಅವರು ಮಾತನಾಡುವಾಗ ತೊದಲುತ್ತಾರೆ. ಈ ಸಮಸ್ಯೆ ಮಧ್ಯೆಯೂ ಅವರಲ್ಲಿ ಹಾಡಬೇಕು ಎನ್ನುವ ಛಲ ಅದಮ್ಯವಾಗಿದೆ. ಹೀಗಾಗಿ, ಅದು ಸಮಸ್ಯೆ ಎಂದೇ ಅವರಿಗೆ ಅನಿಸಿಲ್ಲ. ಈ ಉಗ್ಗು ಸಮಸ್ಯೆಯನ್ನು ಅದಮಿಟ್ಟು ಸೂರ್ಯಕಾಂತ್​ ಅದ್ಭುತವಾಗಿ ಹಾಡಿದ್ದಾರೆ.

‘ರವೀಂದ್ರ ಹಂದಿಗನೂರು ಅವರು ಅದ್ಭುತ ಗಾಯಕರು, ಸಂಗೀತ ಸಂಯೋಜಕರು. ಅವರ ಹಾಡನ್ನು ಹಾಡಬೇಕು ಎಂದರೆ ಒಂದು ವಾರ ವಾರ್ಮ್​​ಅಪ್​ ಬೇಕು. ನೀವು ಹಾಡಿ ಕೇಳೋಣ’ ಎಂದರು ರಾಜೇಶ್​ ಕೃಷ್ಣನ್​.  ‘ಮೂಕನಾಗಬೇಕು ಜಗದೊಳು..’ ಎಂದು ಅದ್ಭುತವಾಗಿ ಹಾಡುವ ಮೂಲಕ ಸೂರ್ಯಕಾಂತ್​ ಎಲ್ಲರ ಗಮನಸೆಳೆದರು.

ಸೂರ್ಯಕಾಂತ್​ ಹಾಡಿದ ಹಾಡು ಕೇಳಿ ರಾಜೇಶ್​ ಕೃಷ್ಣನ್​ ಭಾವುಕರಾದರು. ‘ಸೂರ್ಯಕಾಂತ್ ಗೆಲ್ಲೋಕೂ ಮುಂಚೆನೇ ಗೆದ್ದಾಯ್ತು. ಸೂರ್ಯಕಾಂತ್ ಪ್ರತಿಭೆ ಎದೆ ತುಂಬಿ ಹಾಡುವೆನು ಅಷ್ಟೇ ಅಲ್ಲಾ ಇಡೀ ಕರ್ನಾಟಕಕ್ಕೇ ಹೆಮ್ಮೆ’ ಎನ್ನುವ ಕ್ಯಾಪ್ಶನ್​ ಅಡಿಯಲ್ಲಿ ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಎಸ್​.ಪಿ ಬಾಲಸುಬ್ರಹ್ಮಣ್ಯಂ​ ಅವರು ಅಭಿಮಾನಿ ಬಳಗದ ಜತೆಗೆ ದೊಡ್ಡ ಶಿಷ್ಯವರ್ಗವನ್ನೂ ಹೊಂದಿದ್ದಾರೆ. ನೇರವಾಗಿ ಹಾಗೂ ಪರೋಕ್ಷವಾಗಿ ಸಾಕಷ್ಟು ಮಂದಿ ಅವರಿಂದ ಹಲವು ವಿಚಾರಗಳನ್ನು ಕಲಿತಿದ್ದಾರೆ. ಈ ಕಾರಣಕ್ಕೆ ಎಸ್​ಪಿಬಿ ಎಂದರೆ ಎಲ್ಲರಿಗೂ ಅಪಾರ ಗೌರವ. ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಎರಡನೇ ಇನ್ನಿಂಗ್ಸ್​ ಮತ್ತೆ ಆರಂಭಿಸಲಾಗಿದೆ. ಈ ವೇದಿಕೆ ಸಾಕಷ್ಟು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ. ಜಡ್ಜ್​ಗಳು ಎಸ್​ಪಿಬಿ ಅವರನ್ನು ನೆನೆನೆನೆದು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

Published On - 8:13 am, Mon, 23 August 21

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?