ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ರವೀಂದ್ರ ಹಂದಿಗನೂರು ಅವರು ಸಂಗೀತ ಸಂಯೋಜನೆ ಮಾಡಿದ ‘ಮೂಕನಾಗಬೇಕು ಜಗದೊಳು..’ ತತ್ವಪದವನ್ನು ಸೂರ್ಯಕಾಂತ್​ ಹಾಡಿದ್ದಾರೆ.

ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್
ಸೂರ್ಯಕಾಂತ್, ರಾಜೇಶ್ ಕೃಷ್ಣನ್
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 23, 2021 | 9:43 AM

ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೇತೃತ್ವದಲ್ಲಿ ಈ ಮೊದಲು ಪ್ರಸಾರವಾಗಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಅನೇಕ ಕಲಾವಿದರಿಗೆ ವೇದಿಕೆ ಆಗಿತ್ತು. ಈಗ ಈ ಕಾರ್ಯಕ್ರಮ ಮತ್ತೆ ಆರಂಭಗೊಂಡಿದೆ. ಕಲರ್ಸ್​ ಕನ್ನಡ ವಾಹಿನಿ ಹೊಸ ರೀತಿಯಲ್ಲಿ ಈ ಶೋ ಆರಂಭಿಸಿದ್ದು, ಸಾಕಷ್ಟು ಪ್ರತಿಭೆಗಳಿಗೆ ವೇದಿಕೆ ಆಗಿದೆ. ಇದರಲ್ಲಿ ಎಲ್ಲರ ಗಮನ ಸೆಳೆದಿದ್ದು  ಸೂರ್ಯಕಾಂತ್​ ಹೆಸರಿನ ಸ್ಪರ್ಧಿ. ಭಾನುವಾರದ (ಆಗಸ್ಟ್​ 22) ಎಪಿಸೋಡ್​ನಲ್ಲಿ ವೇದಿಕೆ ಏರಿದ ಅವರು, ಎಲ್ಲರ ಹೃದಯ ಗೆದ್ದರು.

ಸೂರ್ಯಕಾಂತ್​ ಅವರು ಕಲಬುರಗಿ ಜಿಲ್ಲೆಯ ಗಡಿಲಿಂಗದಹಳ್ಳಿಯವರು. ವೃತ್ತಿಯಲ್ಲಿ ಗಾಯಕ.  ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ರವೀಂದ್ರ ಹಂದಿಗನೂರು ಅವರು ಸಂಗೀತ ಸಂಯೋಜನೆ ಮಾಡಿದ ‘ಮೂಕನಾಗಬೇಕು ಜಗದೊಳು..’ ತತ್ವಪದವನ್ನು ಸೂರ್ಯಕಾಂತ್​ ಹಾಡಿದ್ದಾರೆ. ಸೂರ್ಯಕಾಂತ್​ ಸಾಮಾನ್ಯರಂತೆ ಇದ್ದಿದ್ದರೆ ಬಹುಶಃ ವೀಕ್ಷಕರಿಗೆ ಇಷ್ಟರ ಮಟ್ಟಿಗೆ ಹತ್ತಿರವಾಗುತ್ತಿರಲಿಲ್ಲವೇನೋ. ಆದರೆ, ಅವರು ಮಾತನಾಡುವಾಗ ತೊದಲುತ್ತಾರೆ. ಈ ಸಮಸ್ಯೆ ಮಧ್ಯೆಯೂ ಅವರಲ್ಲಿ ಹಾಡಬೇಕು ಎನ್ನುವ ಛಲ ಅದಮ್ಯವಾಗಿದೆ. ಹೀಗಾಗಿ, ಅದು ಸಮಸ್ಯೆ ಎಂದೇ ಅವರಿಗೆ ಅನಿಸಿಲ್ಲ. ಈ ಉಗ್ಗು ಸಮಸ್ಯೆಯನ್ನು ಅದಮಿಟ್ಟು ಸೂರ್ಯಕಾಂತ್​ ಅದ್ಭುತವಾಗಿ ಹಾಡಿದ್ದಾರೆ.

‘ರವೀಂದ್ರ ಹಂದಿಗನೂರು ಅವರು ಅದ್ಭುತ ಗಾಯಕರು, ಸಂಗೀತ ಸಂಯೋಜಕರು. ಅವರ ಹಾಡನ್ನು ಹಾಡಬೇಕು ಎಂದರೆ ಒಂದು ವಾರ ವಾರ್ಮ್​​ಅಪ್​ ಬೇಕು. ನೀವು ಹಾಡಿ ಕೇಳೋಣ’ ಎಂದರು ರಾಜೇಶ್​ ಕೃಷ್ಣನ್​.  ‘ಮೂಕನಾಗಬೇಕು ಜಗದೊಳು..’ ಎಂದು ಅದ್ಭುತವಾಗಿ ಹಾಡುವ ಮೂಲಕ ಸೂರ್ಯಕಾಂತ್​ ಎಲ್ಲರ ಗಮನಸೆಳೆದರು.

ಸೂರ್ಯಕಾಂತ್​ ಹಾಡಿದ ಹಾಡು ಕೇಳಿ ರಾಜೇಶ್​ ಕೃಷ್ಣನ್​ ಭಾವುಕರಾದರು. ‘ಸೂರ್ಯಕಾಂತ್ ಗೆಲ್ಲೋಕೂ ಮುಂಚೆನೇ ಗೆದ್ದಾಯ್ತು. ಸೂರ್ಯಕಾಂತ್ ಪ್ರತಿಭೆ ಎದೆ ತುಂಬಿ ಹಾಡುವೆನು ಅಷ್ಟೇ ಅಲ್ಲಾ ಇಡೀ ಕರ್ನಾಟಕಕ್ಕೇ ಹೆಮ್ಮೆ’ ಎನ್ನುವ ಕ್ಯಾಪ್ಶನ್​ ಅಡಿಯಲ್ಲಿ ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಎಸ್​.ಪಿ ಬಾಲಸುಬ್ರಹ್ಮಣ್ಯಂ​ ಅವರು ಅಭಿಮಾನಿ ಬಳಗದ ಜತೆಗೆ ದೊಡ್ಡ ಶಿಷ್ಯವರ್ಗವನ್ನೂ ಹೊಂದಿದ್ದಾರೆ. ನೇರವಾಗಿ ಹಾಗೂ ಪರೋಕ್ಷವಾಗಿ ಸಾಕಷ್ಟು ಮಂದಿ ಅವರಿಂದ ಹಲವು ವಿಚಾರಗಳನ್ನು ಕಲಿತಿದ್ದಾರೆ. ಈ ಕಾರಣಕ್ಕೆ ಎಸ್​ಪಿಬಿ ಎಂದರೆ ಎಲ್ಲರಿಗೂ ಅಪಾರ ಗೌರವ. ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಎರಡನೇ ಇನ್ನಿಂಗ್ಸ್​ ಮತ್ತೆ ಆರಂಭಿಸಲಾಗಿದೆ. ಈ ವೇದಿಕೆ ಸಾಕಷ್ಟು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ. ಜಡ್ಜ್​ಗಳು ಎಸ್​ಪಿಬಿ ಅವರನ್ನು ನೆನೆನೆನೆದು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

Published On - 8:13 am, Mon, 23 August 21

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!