AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ರವೀಂದ್ರ ಹಂದಿಗನೂರು ಅವರು ಸಂಗೀತ ಸಂಯೋಜನೆ ಮಾಡಿದ ‘ಮೂಕನಾಗಬೇಕು ಜಗದೊಳು..’ ತತ್ವಪದವನ್ನು ಸೂರ್ಯಕಾಂತ್​ ಹಾಡಿದ್ದಾರೆ.

ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್
ಸೂರ್ಯಕಾಂತ್, ರಾಜೇಶ್ ಕೃಷ್ಣನ್
TV9 Web
| Edited By: |

Updated on:Aug 23, 2021 | 9:43 AM

Share

ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೇತೃತ್ವದಲ್ಲಿ ಈ ಮೊದಲು ಪ್ರಸಾರವಾಗಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಅನೇಕ ಕಲಾವಿದರಿಗೆ ವೇದಿಕೆ ಆಗಿತ್ತು. ಈಗ ಈ ಕಾರ್ಯಕ್ರಮ ಮತ್ತೆ ಆರಂಭಗೊಂಡಿದೆ. ಕಲರ್ಸ್​ ಕನ್ನಡ ವಾಹಿನಿ ಹೊಸ ರೀತಿಯಲ್ಲಿ ಈ ಶೋ ಆರಂಭಿಸಿದ್ದು, ಸಾಕಷ್ಟು ಪ್ರತಿಭೆಗಳಿಗೆ ವೇದಿಕೆ ಆಗಿದೆ. ಇದರಲ್ಲಿ ಎಲ್ಲರ ಗಮನ ಸೆಳೆದಿದ್ದು  ಸೂರ್ಯಕಾಂತ್​ ಹೆಸರಿನ ಸ್ಪರ್ಧಿ. ಭಾನುವಾರದ (ಆಗಸ್ಟ್​ 22) ಎಪಿಸೋಡ್​ನಲ್ಲಿ ವೇದಿಕೆ ಏರಿದ ಅವರು, ಎಲ್ಲರ ಹೃದಯ ಗೆದ್ದರು.

ಸೂರ್ಯಕಾಂತ್​ ಅವರು ಕಲಬುರಗಿ ಜಿಲ್ಲೆಯ ಗಡಿಲಿಂಗದಹಳ್ಳಿಯವರು. ವೃತ್ತಿಯಲ್ಲಿ ಗಾಯಕ.  ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ರವೀಂದ್ರ ಹಂದಿಗನೂರು ಅವರು ಸಂಗೀತ ಸಂಯೋಜನೆ ಮಾಡಿದ ‘ಮೂಕನಾಗಬೇಕು ಜಗದೊಳು..’ ತತ್ವಪದವನ್ನು ಸೂರ್ಯಕಾಂತ್​ ಹಾಡಿದ್ದಾರೆ. ಸೂರ್ಯಕಾಂತ್​ ಸಾಮಾನ್ಯರಂತೆ ಇದ್ದಿದ್ದರೆ ಬಹುಶಃ ವೀಕ್ಷಕರಿಗೆ ಇಷ್ಟರ ಮಟ್ಟಿಗೆ ಹತ್ತಿರವಾಗುತ್ತಿರಲಿಲ್ಲವೇನೋ. ಆದರೆ, ಅವರು ಮಾತನಾಡುವಾಗ ತೊದಲುತ್ತಾರೆ. ಈ ಸಮಸ್ಯೆ ಮಧ್ಯೆಯೂ ಅವರಲ್ಲಿ ಹಾಡಬೇಕು ಎನ್ನುವ ಛಲ ಅದಮ್ಯವಾಗಿದೆ. ಹೀಗಾಗಿ, ಅದು ಸಮಸ್ಯೆ ಎಂದೇ ಅವರಿಗೆ ಅನಿಸಿಲ್ಲ. ಈ ಉಗ್ಗು ಸಮಸ್ಯೆಯನ್ನು ಅದಮಿಟ್ಟು ಸೂರ್ಯಕಾಂತ್​ ಅದ್ಭುತವಾಗಿ ಹಾಡಿದ್ದಾರೆ.

‘ರವೀಂದ್ರ ಹಂದಿಗನೂರು ಅವರು ಅದ್ಭುತ ಗಾಯಕರು, ಸಂಗೀತ ಸಂಯೋಜಕರು. ಅವರ ಹಾಡನ್ನು ಹಾಡಬೇಕು ಎಂದರೆ ಒಂದು ವಾರ ವಾರ್ಮ್​​ಅಪ್​ ಬೇಕು. ನೀವು ಹಾಡಿ ಕೇಳೋಣ’ ಎಂದರು ರಾಜೇಶ್​ ಕೃಷ್ಣನ್​.  ‘ಮೂಕನಾಗಬೇಕು ಜಗದೊಳು..’ ಎಂದು ಅದ್ಭುತವಾಗಿ ಹಾಡುವ ಮೂಲಕ ಸೂರ್ಯಕಾಂತ್​ ಎಲ್ಲರ ಗಮನಸೆಳೆದರು.

ಸೂರ್ಯಕಾಂತ್​ ಹಾಡಿದ ಹಾಡು ಕೇಳಿ ರಾಜೇಶ್​ ಕೃಷ್ಣನ್​ ಭಾವುಕರಾದರು. ‘ಸೂರ್ಯಕಾಂತ್ ಗೆಲ್ಲೋಕೂ ಮುಂಚೆನೇ ಗೆದ್ದಾಯ್ತು. ಸೂರ್ಯಕಾಂತ್ ಪ್ರತಿಭೆ ಎದೆ ತುಂಬಿ ಹಾಡುವೆನು ಅಷ್ಟೇ ಅಲ್ಲಾ ಇಡೀ ಕರ್ನಾಟಕಕ್ಕೇ ಹೆಮ್ಮೆ’ ಎನ್ನುವ ಕ್ಯಾಪ್ಶನ್​ ಅಡಿಯಲ್ಲಿ ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಎಸ್​.ಪಿ ಬಾಲಸುಬ್ರಹ್ಮಣ್ಯಂ​ ಅವರು ಅಭಿಮಾನಿ ಬಳಗದ ಜತೆಗೆ ದೊಡ್ಡ ಶಿಷ್ಯವರ್ಗವನ್ನೂ ಹೊಂದಿದ್ದಾರೆ. ನೇರವಾಗಿ ಹಾಗೂ ಪರೋಕ್ಷವಾಗಿ ಸಾಕಷ್ಟು ಮಂದಿ ಅವರಿಂದ ಹಲವು ವಿಚಾರಗಳನ್ನು ಕಲಿತಿದ್ದಾರೆ. ಈ ಕಾರಣಕ್ಕೆ ಎಸ್​ಪಿಬಿ ಎಂದರೆ ಎಲ್ಲರಿಗೂ ಅಪಾರ ಗೌರವ. ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಎರಡನೇ ಇನ್ನಿಂಗ್ಸ್​ ಮತ್ತೆ ಆರಂಭಿಸಲಾಗಿದೆ. ಈ ವೇದಿಕೆ ಸಾಕಷ್ಟು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ. ಜಡ್ಜ್​ಗಳು ಎಸ್​ಪಿಬಿ ಅವರನ್ನು ನೆನೆನೆನೆದು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

Published On - 8:13 am, Mon, 23 August 21

ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ