AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೂಲಿನಾಲಿ ಮಾಡಿ ತಾಯಿಯೇ ನನ್ನನ್ನು ಸಾಕಿದ್ದು’; ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಕಣ್ಣೀರಿಟ್ಟ ಸೂರ್ಯಕಾಂತ್​

ಸೂರ್ಯಕಾಂತ್​ ವೃತ್ತಿಯಲ್ಲಿ ಗಾಯಕರು. ಅವರು ತೊದಲು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಕಾರಣಕ್ಕೆ ಅವರ ಬಾಯಿಯಿಂದ ಶಬ್ದಗಳನ್ನು ಹೊರ ಹಾಕುವಾಗ ಕಷ್ಟಪಡಬೇಕಾಗುತ್ತದೆ.

‘ಕೂಲಿನಾಲಿ ಮಾಡಿ ತಾಯಿಯೇ ನನ್ನನ್ನು ಸಾಕಿದ್ದು’; ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಕಣ್ಣೀರಿಟ್ಟ ಸೂರ್ಯಕಾಂತ್​
TV9 Web
| Edited By: |

Updated on:Aug 27, 2021 | 2:45 PM

Share

‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮವನ್ನು ಅನೇಕ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ನಡೆಸಿಕೊಡುತ್ತಿದ್ದ ಈ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಈ ಶೋ ಆರಂಭವಾಗಿದೆ. ಸಾಕಷ್ಟು ಗಾಯಕರಿಗೆ ಈ ಶೋ ವೇದಿಕೆ ಕಲ್ಪಿಸಿಕೊಡುತ್ತಿದೆ. ಅದರಲ್ಲೂ ವಿಶೇಷವಾಗಿ ಗಮನ ಸೆಳೆದಿದ್ದು ಕಲಬುರಗಿ ಜಿಲ್ಲೆಯ ಸೂರ್ಯಕಾಂತ್​ ಅವರು.

ಸೂರ್ಯಕಾಂತ್​ ವೃತ್ತಿಯಲ್ಲಿ ಗಾಯಕರು. ಅವರು ತೊದಲು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಕಾರಣಕ್ಕೆ ಅವರ ಬಾಯಿಯಿಂದ ಶಬ್ದಗಳನ್ನು ಹೊರ ಹಾಕುವಾಗ ಕಷ್ಟಪಡಬೇಕಾಗುತ್ತದೆ. ಆದರೆ, ಹಾಡನ್ನು ಮಾತ್ರ ಅವರು ಅದ್ಭುತವಾಗಿ ಹಾಡುತ್ತಾರೆ. ಕಳೆದ ವಾರ ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ರವೀಂದ್ರ ಹಂದಿಗನೂರು ಅವರು ಸಂಗೀತ ಸಂಯೋಜನೆ ಮಾಡಿದ ‘ಮೂಕನಾಗಬೇಕು ಜಗದೊಳು..’ ತತ್ವಪದವನ್ನು ಸೂರ್ಯಕಾಂತ್​ ಹಾಡಿದ್ದರು. ಹಾಡು ಹೇಳಿದ ರೀತಿಗೆ ಅವರಿಗೆ ದೊಡ್ಡ ಅಭಿಮಾನಿ ಬಳಗವೇ ಹುಟ್ಟಿಕೊಂಡಿದೆ.

ಈ ಕುರಿತಂತೆ ಕಲರ್ಸ್​ ಕನ್ನಡ ವಾಹಿನಿ ವೀಕ್ಷಕರ ಬಳಿ ಹೋಗಿ ಅಭಿಪ್ರಾಯ ಕೇಳಿದೆ. ಈ ವೇಳೆ ಅನೇಕರು ಸೂರ್ಯಕಾಂತ್​ ಅವರ ಹಾಡು ಹೇಳಿದ ರೀತಿಯನ್ನು ಮನಃಪೂರ್ವಕವಾಗಿ ಹೊಗಳಿದ್ದಾರೆ.

ಇನ್ನು, ವೇದಿಕೆ ಮೇಲೆ ಸೂರ್ಯಕಾಂತ್​ ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ‘ನಾನು ಇಲ್ಲಿಗೆ ಬರೋಕೆ ಕಾರಣ ನನ್ನ ತಾಯಿ. ಅವರು ಕೂಲಿನಾಲಿ ಮಾಡಿ ನನ್ನನ್ನು ಸಾಕಿದ್ದಾರೆ. ನನ್ನ ತಾಯಿ ಎಂದೆಂದಿಗೂ ಹೃದಯದಲ್ಲೇ ಇದ್ದಾಳೆ. ಅವಳೇ ನನಗೆ ಮೆಡಲ್​’ ಎನ್ನುತ್ತಲೇ ಸೂರ್ಯಕಾಂತ್​ ಕಣ್ಣೀರು ಹಾಕಿದರು.

ಕಳೆದ ಎಪಿಸೋಡ್​​ನಲ್ಲಿ ಸೂರ್ಯಕಾಂತ್​ ಹಾಡಿದ ಹಾಡು ಕೇಳಿ ರಾಜೇಶ್​ ಕೃಷ್ಣನ್​ ಭಾವುಕರಾದರು. ‘ಸೂರ್ಯಕಾಂತ್ ಗೆಲ್ಲೋಕೂ ಮುಂಚೆನೇ ಗೆದ್ದಾಯ್ತು. ಸೂರ್ಯಕಾಂತ್ ಪ್ರತಿಭೆ ಎದೆ ತುಂಬಿ ಹಾಡುವೆನು ಅಷ್ಟೇ ಅಲ್ಲಾ ಇಡೀ ಕರ್ನಾಟಕಕ್ಕೇ ಹೆಮ್ಮೆ’ ಎಂದಿದ್ದರು.

ಎಸ್​.ಪಿ ಬಾಲಸುಬ್ರಹ್ಮಣ್ಯಂ​ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಎರಡನೇ ಇನ್ನಿಂಗ್ಸ್​ ಇದಾಗಿದೆ. ಈ ವೇದಿಕೆ ಸಾಕಷ್ಟು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ. ಜಡ್ಜ್​ಗಳು ಎಸ್​ಪಿಬಿ ಅವರನ್ನು ನೆನೆನೆನೆದು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್

Published On - 2:39 pm, Fri, 27 August 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ