AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ede Tumbi Haaduvenu Winner: ‘ಎದೆ ತುಂಬಿ ಹಾಡುವೆನು’ ವಿನ್ನರ್​ ಆಗಿ ಹೊರ ಹೊಮ್ಮಿದ ಬಳ್ಳಾರಿಯ ಚಿನ್ಮಯ್​

ಬಳ್ಳಾರಿಯ ಚಿನ್ಮಯ್​ ಜೋಶಿ  ಅವರು ‘ಎದೆ ತುಂಬಿ ಹಾಡುವೆನು ಸೀಸನ್ 1’ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ತೀರ್ಪುಗಾರರಾದ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ, ರಘು ದೀಕ್ಷಿತ್ ಚಿನ್ಮಯ್​ಗೆ ಟ್ರೋಫಿ ನೀಡಿದರು.

Ede Tumbi Haaduvenu Winner: ‘ಎದೆ ತುಂಬಿ ಹಾಡುವೆನು’ ವಿನ್ನರ್​ ಆಗಿ ಹೊರ ಹೊಮ್ಮಿದ ಬಳ್ಳಾರಿಯ ಚಿನ್ಮಯ್​
TV9 Web
| Edited By: |

Updated on:Dec 20, 2021 | 7:35 PM

Share

ಎಸ್​.ಪಿ. ಬಾಲಸುಬ್ರಹ್ಮಣ್ಯಂ​ (S. P. Balasubrahmanyam) ತೀರ್ಪುಗಾರರಾಗಿ ನಡೆಸಿಕೊಡುತ್ತಿದ್ದ  ‘ಎದೆ ತುಂಬಿ ಹಾಡುವೆನು’ (Ede Tumbi Haaduvenu) ಸಂಗೀತ  ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು. ಇತ್ತೀಚೆಗೆ ಕಲರ್ಸ್​ ಕನ್ನಡ ವಾಹಿನಿ ಈ ಶೋನ ಹೊಸ ಸೀಸನ್​ ಆರಂಭಿಸಿತ್ತು. ಆಗಸ್ಟ್​ 14ರಂದು ಈ ರಿಯಾಲಿಟಿ ಶೋ ಪ್ರಾರಂಭಗೊಂಡಿತ್ತು. ಸತತ ಐದು ತಿಂಗಳ ಕಾಲ ನಡೆದ ಈ ರಿಯಾಲಿಟಿ ಶೋ ಈಗ ಪೂರ್ಣಗೊಂಡಿದೆ. ಭಾನುವಾರ (ಡಿಸೆಂಬರ್​ 19) ನಡೆದ ಫಿನಾಲೆಯಲ್ಲಿ ವಿನ್ನರ್ (Ede Tumbi Haaduvenu Winner)​ ಘೋಷಣೆ  ಆಗಿದೆ. ಹಾಗಾದರೆ, ಇದರ ವಿನ್ನರ್​ ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬಳ್ಳಾರಿಯ ಚಿನ್ಮಯ್​ ಜೋಶಿ  ಅವರು ‘ಎದೆ ತುಂಬಿ ಹಾಡುವೆನು ಸೀಸನ್ 1’ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ತೀರ್ಪುಗಾರರಾದ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ, ರಘು ದೀಕ್ಷಿತ್ ಅವರು ಚಿನ್ಮಯ್​ಗೆ ಟ್ರೋಫಿ ನೀಡಿದರು. ಈ ಸಂದರ್ಭದಲ್ಲಿ ಎಸ್​ಪಿಬಿ ಮಗ ಎಸ್.ಪಿ. ಚರಣ್ ಕೂಡ ಇದ್ದರು.

ಸಂದೇಶ್​​, ನಾದಿರಾ ಬಾನು, ಕಿರಣ್​, ಚಿನ್ಮಯ್​ ಫಿನಾಲೆ ರೇಸ್​ನಲ್ಲಿ ಇದ್ದರು. ಈ ನಾಲ್ವರು ತಮ್ಮ ಅದ್ಭುತ ಕಂಠದಿಂದ ಹಾಡನ್ನು ಹಾಡಿದರು. ಚಿನ್ಮಯ್​ ಅವರು ಎಲ್ಲರನ್ನೂ ಹಿಂದಿಕ್ಕಿ ವಿನ್ನರ್​ ಆಗಿ ಹೊರಹೊಮ್ಮಿದ್ದಾರೆ. ಈ ಕಾರ್ಯಕ್ರಮದಿಂದ ಅವರ ಖ್ಯಾತಿ ಹೆಚ್ಚಿದೆ. ಈ ಮೊದಲು ಎಸ್​​.ಪಿ.ಬಿ. ಹಾಡು ಹಾಡಲು ಬಳಕೆ ಮಾಡುತ್ತಿದ್ದ ಮೈಕ್​ಅನ್ನು ಫಿನಾಲೆಯಲ್ಲಿ ಬಳಕೆ ಮಾಡಲಾಗಿತ್ತು. ಈ ಮೈಕ್​ ಹಿಡಿದು ಸ್ಪರ್ಧಿಗಳು ಹಾಡನ್ನು ಹಾಡಿದ್ದರು ಎಂಬುದು ವಿಶೇಷ.

ಈ ಸೀಸನ್​ ಆರಂಭದಲ್ಲಿ,  ‘ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ’ ಹಾಡನ್ನು ಎಸ್​ಪಿಬಿ ಮಗ ಚರಣ್ ಹಾಡಿದ್ದರು ಹಾಡು ಮುಗಿದ ನಂತರದಲ್ಲಿ ಮಾತನಾಡಿದ್ದ ಚರಣ್​, ‘ಎಲ್ಲೆಲ್ಲಿ ಸಂಗೀತ ಇರುತ್ತದೆಯೋ ಅಲ್ಲಿ ನಮ್ಮ ತಂದೆ ಇರುತ್ತಾರೆ. ಅವರೆಲ್ಲಿ ಇರುತ್ತಾರೋ ನಾನು ಅಲ್ಲಿರ್ತೀನಿ’ ಎಂದಿದ್ದರು. ಈ ವೇಳೆ ಎಸ್​ಪಿಬಿ ಅವರ ಹಳೆಯ ವಾಯ್ಸ್​ನೋಟ್​ ಹಾಕಲಾಗಿತ್ತು. ‘ಚರಣ್​ ನಿನ್ನೊಂದಿಗೆ ನಾನು ಸದಾ ಇರ್ತೀನಿ. ಅದು ನಿನಗೆ ಗೊತ್ತಿರೋ ವಿಷಯ. ಕಾರ್ಯಕ್ರಮ ಆನಂದಿಸು. ತುಂಬಾ ಸೊಗಸಾಗಿದೆ. ದೇವರ ಆಶೀರ್ವಾದ ಸದಾ ನಿನ್ನ ಮೇಲಿರಲಿ’ ಎಂದು ಎಸ್​ಪಿಬಿ ಧ್ವನಿಯಲ್ಲಿ ಕೇಳಿ ಬಂದಿತ್ತು. ಈ ಧ್ವನಿ ಕೇಳುತ್ತಿದ್ದಂತೆ ಚರಣ್​ ಭಾವುಕರಾಗಿದ್ದರು.

ಇದನ್ನೂ ಓದಿ: ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಪುನೀತ್​ಗೆ ಸ್ವರ ನಮನ; ಗುರು ಕಿರಣ್ ಹೇಳಿದ್ದೇನು?

Published On - 6:20 pm, Mon, 20 December 21

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು