AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ede Tumbi Haaduvenu Winner: ‘ಎದೆ ತುಂಬಿ ಹಾಡುವೆನು’ ವಿನ್ನರ್​ ಆಗಿ ಹೊರ ಹೊಮ್ಮಿದ ಬಳ್ಳಾರಿಯ ಚಿನ್ಮಯ್​

ಬಳ್ಳಾರಿಯ ಚಿನ್ಮಯ್​ ಜೋಶಿ  ಅವರು ‘ಎದೆ ತುಂಬಿ ಹಾಡುವೆನು ಸೀಸನ್ 1’ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ತೀರ್ಪುಗಾರರಾದ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ, ರಘು ದೀಕ್ಷಿತ್ ಚಿನ್ಮಯ್​ಗೆ ಟ್ರೋಫಿ ನೀಡಿದರು.

Ede Tumbi Haaduvenu Winner: ‘ಎದೆ ತುಂಬಿ ಹಾಡುವೆನು’ ವಿನ್ನರ್​ ಆಗಿ ಹೊರ ಹೊಮ್ಮಿದ ಬಳ್ಳಾರಿಯ ಚಿನ್ಮಯ್​
TV9 Web
| Edited By: |

Updated on:Dec 20, 2021 | 7:35 PM

Share

ಎಸ್​.ಪಿ. ಬಾಲಸುಬ್ರಹ್ಮಣ್ಯಂ​ (S. P. Balasubrahmanyam) ತೀರ್ಪುಗಾರರಾಗಿ ನಡೆಸಿಕೊಡುತ್ತಿದ್ದ  ‘ಎದೆ ತುಂಬಿ ಹಾಡುವೆನು’ (Ede Tumbi Haaduvenu) ಸಂಗೀತ  ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು. ಇತ್ತೀಚೆಗೆ ಕಲರ್ಸ್​ ಕನ್ನಡ ವಾಹಿನಿ ಈ ಶೋನ ಹೊಸ ಸೀಸನ್​ ಆರಂಭಿಸಿತ್ತು. ಆಗಸ್ಟ್​ 14ರಂದು ಈ ರಿಯಾಲಿಟಿ ಶೋ ಪ್ರಾರಂಭಗೊಂಡಿತ್ತು. ಸತತ ಐದು ತಿಂಗಳ ಕಾಲ ನಡೆದ ಈ ರಿಯಾಲಿಟಿ ಶೋ ಈಗ ಪೂರ್ಣಗೊಂಡಿದೆ. ಭಾನುವಾರ (ಡಿಸೆಂಬರ್​ 19) ನಡೆದ ಫಿನಾಲೆಯಲ್ಲಿ ವಿನ್ನರ್ (Ede Tumbi Haaduvenu Winner)​ ಘೋಷಣೆ  ಆಗಿದೆ. ಹಾಗಾದರೆ, ಇದರ ವಿನ್ನರ್​ ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬಳ್ಳಾರಿಯ ಚಿನ್ಮಯ್​ ಜೋಶಿ  ಅವರು ‘ಎದೆ ತುಂಬಿ ಹಾಡುವೆನು ಸೀಸನ್ 1’ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ತೀರ್ಪುಗಾರರಾದ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ, ರಘು ದೀಕ್ಷಿತ್ ಅವರು ಚಿನ್ಮಯ್​ಗೆ ಟ್ರೋಫಿ ನೀಡಿದರು. ಈ ಸಂದರ್ಭದಲ್ಲಿ ಎಸ್​ಪಿಬಿ ಮಗ ಎಸ್.ಪಿ. ಚರಣ್ ಕೂಡ ಇದ್ದರು.

ಸಂದೇಶ್​​, ನಾದಿರಾ ಬಾನು, ಕಿರಣ್​, ಚಿನ್ಮಯ್​ ಫಿನಾಲೆ ರೇಸ್​ನಲ್ಲಿ ಇದ್ದರು. ಈ ನಾಲ್ವರು ತಮ್ಮ ಅದ್ಭುತ ಕಂಠದಿಂದ ಹಾಡನ್ನು ಹಾಡಿದರು. ಚಿನ್ಮಯ್​ ಅವರು ಎಲ್ಲರನ್ನೂ ಹಿಂದಿಕ್ಕಿ ವಿನ್ನರ್​ ಆಗಿ ಹೊರಹೊಮ್ಮಿದ್ದಾರೆ. ಈ ಕಾರ್ಯಕ್ರಮದಿಂದ ಅವರ ಖ್ಯಾತಿ ಹೆಚ್ಚಿದೆ. ಈ ಮೊದಲು ಎಸ್​​.ಪಿ.ಬಿ. ಹಾಡು ಹಾಡಲು ಬಳಕೆ ಮಾಡುತ್ತಿದ್ದ ಮೈಕ್​ಅನ್ನು ಫಿನಾಲೆಯಲ್ಲಿ ಬಳಕೆ ಮಾಡಲಾಗಿತ್ತು. ಈ ಮೈಕ್​ ಹಿಡಿದು ಸ್ಪರ್ಧಿಗಳು ಹಾಡನ್ನು ಹಾಡಿದ್ದರು ಎಂಬುದು ವಿಶೇಷ.

ಈ ಸೀಸನ್​ ಆರಂಭದಲ್ಲಿ,  ‘ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ’ ಹಾಡನ್ನು ಎಸ್​ಪಿಬಿ ಮಗ ಚರಣ್ ಹಾಡಿದ್ದರು ಹಾಡು ಮುಗಿದ ನಂತರದಲ್ಲಿ ಮಾತನಾಡಿದ್ದ ಚರಣ್​, ‘ಎಲ್ಲೆಲ್ಲಿ ಸಂಗೀತ ಇರುತ್ತದೆಯೋ ಅಲ್ಲಿ ನಮ್ಮ ತಂದೆ ಇರುತ್ತಾರೆ. ಅವರೆಲ್ಲಿ ಇರುತ್ತಾರೋ ನಾನು ಅಲ್ಲಿರ್ತೀನಿ’ ಎಂದಿದ್ದರು. ಈ ವೇಳೆ ಎಸ್​ಪಿಬಿ ಅವರ ಹಳೆಯ ವಾಯ್ಸ್​ನೋಟ್​ ಹಾಕಲಾಗಿತ್ತು. ‘ಚರಣ್​ ನಿನ್ನೊಂದಿಗೆ ನಾನು ಸದಾ ಇರ್ತೀನಿ. ಅದು ನಿನಗೆ ಗೊತ್ತಿರೋ ವಿಷಯ. ಕಾರ್ಯಕ್ರಮ ಆನಂದಿಸು. ತುಂಬಾ ಸೊಗಸಾಗಿದೆ. ದೇವರ ಆಶೀರ್ವಾದ ಸದಾ ನಿನ್ನ ಮೇಲಿರಲಿ’ ಎಂದು ಎಸ್​ಪಿಬಿ ಧ್ವನಿಯಲ್ಲಿ ಕೇಳಿ ಬಂದಿತ್ತು. ಈ ಧ್ವನಿ ಕೇಳುತ್ತಿದ್ದಂತೆ ಚರಣ್​ ಭಾವುಕರಾಗಿದ್ದರು.

ಇದನ್ನೂ ಓದಿ: ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಪುನೀತ್​ಗೆ ಸ್ವರ ನಮನ; ಗುರು ಕಿರಣ್ ಹೇಳಿದ್ದೇನು?

Published On - 6:20 pm, Mon, 20 December 21

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ