AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

ಎಸ್.ಪಿ. ಬಾಲಸುಬ್ರಹ್ಮಣ್ಯಂ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಈಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಹೊಸ ಸೀಸನ್​ನಲ್ಲಿ ರಾಜೇಶ್ ಕೃಷ್ಣನ್, ವಿ. ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಕಾರ್ಯಕ್ರಮದ ತೀರ್ಪುಗಾರರಾಗಿ ಇರಲಿದ್ದಾರೆ.

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​
TV9 Web
| Edited By: |

Updated on:Aug 13, 2021 | 1:37 PM

Share

ಎಸ್​.ಪಿ. ಬಾಲಸುಬ್ರಹ್ಮಣ್ಯಂ​ ತೀರ್ಪುಗಾರರಾಗಿ ನಡೆಸಿಕೊಡುತ್ತಿದ್ದ  ‘ಎದೆ ತುಂಬಿ ಹಾಡುವೆನು’ ಸಂಗೀತ  ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು. ಈಗ ಕಲರ್ಸ್​ ಕನ್ನಡ ವಾಹಿನಿ ಈ ಶೋನ ಹೊಸ ಸೀಸನ್​ ಆರಂಭಿಸುತ್ತಿದೆ. ಇದೇ ಆಗಸ್ಟ್​ 14ರಿಂದ ಈ ರಿಯಾಲಿಟಿ ಶೋ ಎಪಿಸೋಡ್​ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ತೀರ್ಪುಗಾರರಾಗಿ ಎಸ್‌ಪಿಬಿ ಅವರ ಪುತ್ರ ಎಸ್.ಪಿ. ಚರಣ್ ಇರುತ್ತಾರೆ ಅನ್ನೋದು ವಿಶೇಷ. ಈಗ ಕಲರ್ಸ್​ ಕನ್ನಡ ವಾಹಿನಿ ವಿಶೇಷ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಎಸ್​​ಪಿಬಿ ಧ್ವನಿ ಕೇಳಿ ಚರಣ್​ ಅತ್ತಿದ್ದಾರೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಈಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಹೊಸ ಸೀಸನ್​ನಲ್ಲಿ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಕಾರ್ಯಕ್ರಮದ ತೀರ್ಪುಗಾರರಾಗಿ ಇರಲಿದ್ದಾರೆ. ಈ ಕಾರ್ಯಕ್ರಮದ ಮೇಲೆ ವೀಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ.

ಎಸ್​ಪಿಬಿ ಅವರು ‘ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ’ ಹಾಡನ್ನು ಹಾಡಿದ್ದರು. ಅಂದು ಪ್ರಸಾರವಾಗುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ವೇದಿಕೆ ಮೇಲೂ ಅವರ ಕಂಠದಿಂದ ಈ ಹಾಡು ಮೊಳಗಿತ್ತು. ಈಗ ಅವರ ಮಗ ಚರಣ್​, ಹೊಸ ಸೀಸನ್​ನಲ್ಲಿ ಈ ಹಾಡನ್ನು ಹಾಡಿದ್ದಾರೆ. ಹಾಡು ಮುಗಿದ ನಂತರದಲ್ಲಿ ಮಾತನಾಡಿರುವ ಚರಣ್​, ‘ಎಲ್ಲೆಲ್ಲಿ ಸಂಗೀತ ಇರುತ್ತದೆಯೋ ಅಲ್ಲಿ ನಮ್ಮ ತಂದೆ ಇರುತ್ತಾರೆ. ಅವರೆಲ್ಲಿ ಇರುತ್ತಾರೋ ನಾನು ಅಲ್ಲಿರ್ತೀನಿ’ ಎಂದಿದ್ದಾರೆ.

ಈ ವೇಳೆ ಎಸ್​ಪಿಬಿ ಅವರ ಹಳೆಯ ವಾಯ್ಸ್​ನೋಟ್​ ಹಾಕಲಾಗಿದೆ. ‘ಚರಣ್​ ನಿನ್ನೊಂದಿಗೆ ನಾನು ಸದಾ ಇರ್ತೀನಿ. ಅದು ನಿನಗೆ ಗೊತ್ತಿರೋ ವಿಷಯ. ಕಾರ್ಯಕ್ರಮ ಆನಂದಿಸು. ತುಂಬಾ ಸೊಗಸಾಗಿದೆ. ದೇವರ ಆಶೀರ್ವಾದ ಸದಾ ನಿನ್ನ ಮೇಲಿರಲಿ’ ಎಂದು ಎಸ್​ಪಿಬಿ ಧ್ವನಿಯಲ್ಲಿ ಕೇಳಿ ಬಂದಿದೆ. ಈ ಧ್ವನಿ ಕೇಳುತ್ತಿದ್ದಂತೆ ಚರಣ್​ ಭಾವುಕರಾದರು.

ಈಗಾಗಲೇ ಆಡಿಷನ್ ಮೂಲಕ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ. ಆಗಸ್ಟ್​ 14ರಂದು ಮೊದಲ ಎಪಿಸೋಡ್​ ಪ್ರಸಾರವಾಗಲಿದೆ.

ಇದನ್ನೂ ಓದಿ: SPB Birth Anniversary: ಪ್ರೀತಿಯ ಎಸ್​ಪಿಬಿ ಸರ್, ಎದೆ ತುಂಬಿ ಹಾಡಲು ನೀವು ಮತ್ತೆ ಹುಟ್ಟಿಬರಬೇಕು

ಅಭಿಮಾನಿಗಳಿಗೆ ಗುಡ್​​ನ್ಯೂಸ್​ ಕೊಟ್ಟ ‘ನಮ್ಮನೆ ಯುವರಾಣಿ’ ಅಂಕಿತಾ; ಇದು ಫ್ಯಾನ್ಸ್​ಗೆ ಖುಷಿಯಾಗೋ ವಿಚಾರ

Published On - 1:22 pm, Fri, 13 August 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು