AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

ಎಸ್.ಪಿ. ಬಾಲಸುಬ್ರಹ್ಮಣ್ಯಂ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಈಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಹೊಸ ಸೀಸನ್​ನಲ್ಲಿ ರಾಜೇಶ್ ಕೃಷ್ಣನ್, ವಿ. ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಕಾರ್ಯಕ್ರಮದ ತೀರ್ಪುಗಾರರಾಗಿ ಇರಲಿದ್ದಾರೆ.

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​
TV9 Web
| Edited By: |

Updated on:Aug 13, 2021 | 1:37 PM

Share

ಎಸ್​.ಪಿ. ಬಾಲಸುಬ್ರಹ್ಮಣ್ಯಂ​ ತೀರ್ಪುಗಾರರಾಗಿ ನಡೆಸಿಕೊಡುತ್ತಿದ್ದ  ‘ಎದೆ ತುಂಬಿ ಹಾಡುವೆನು’ ಸಂಗೀತ  ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು. ಈಗ ಕಲರ್ಸ್​ ಕನ್ನಡ ವಾಹಿನಿ ಈ ಶೋನ ಹೊಸ ಸೀಸನ್​ ಆರಂಭಿಸುತ್ತಿದೆ. ಇದೇ ಆಗಸ್ಟ್​ 14ರಿಂದ ಈ ರಿಯಾಲಿಟಿ ಶೋ ಎಪಿಸೋಡ್​ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ತೀರ್ಪುಗಾರರಾಗಿ ಎಸ್‌ಪಿಬಿ ಅವರ ಪುತ್ರ ಎಸ್.ಪಿ. ಚರಣ್ ಇರುತ್ತಾರೆ ಅನ್ನೋದು ವಿಶೇಷ. ಈಗ ಕಲರ್ಸ್​ ಕನ್ನಡ ವಾಹಿನಿ ವಿಶೇಷ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಎಸ್​​ಪಿಬಿ ಧ್ವನಿ ಕೇಳಿ ಚರಣ್​ ಅತ್ತಿದ್ದಾರೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಈಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಹೊಸ ಸೀಸನ್​ನಲ್ಲಿ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಕಾರ್ಯಕ್ರಮದ ತೀರ್ಪುಗಾರರಾಗಿ ಇರಲಿದ್ದಾರೆ. ಈ ಕಾರ್ಯಕ್ರಮದ ಮೇಲೆ ವೀಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ.

ಎಸ್​ಪಿಬಿ ಅವರು ‘ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ’ ಹಾಡನ್ನು ಹಾಡಿದ್ದರು. ಅಂದು ಪ್ರಸಾರವಾಗುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ವೇದಿಕೆ ಮೇಲೂ ಅವರ ಕಂಠದಿಂದ ಈ ಹಾಡು ಮೊಳಗಿತ್ತು. ಈಗ ಅವರ ಮಗ ಚರಣ್​, ಹೊಸ ಸೀಸನ್​ನಲ್ಲಿ ಈ ಹಾಡನ್ನು ಹಾಡಿದ್ದಾರೆ. ಹಾಡು ಮುಗಿದ ನಂತರದಲ್ಲಿ ಮಾತನಾಡಿರುವ ಚರಣ್​, ‘ಎಲ್ಲೆಲ್ಲಿ ಸಂಗೀತ ಇರುತ್ತದೆಯೋ ಅಲ್ಲಿ ನಮ್ಮ ತಂದೆ ಇರುತ್ತಾರೆ. ಅವರೆಲ್ಲಿ ಇರುತ್ತಾರೋ ನಾನು ಅಲ್ಲಿರ್ತೀನಿ’ ಎಂದಿದ್ದಾರೆ.

ಈ ವೇಳೆ ಎಸ್​ಪಿಬಿ ಅವರ ಹಳೆಯ ವಾಯ್ಸ್​ನೋಟ್​ ಹಾಕಲಾಗಿದೆ. ‘ಚರಣ್​ ನಿನ್ನೊಂದಿಗೆ ನಾನು ಸದಾ ಇರ್ತೀನಿ. ಅದು ನಿನಗೆ ಗೊತ್ತಿರೋ ವಿಷಯ. ಕಾರ್ಯಕ್ರಮ ಆನಂದಿಸು. ತುಂಬಾ ಸೊಗಸಾಗಿದೆ. ದೇವರ ಆಶೀರ್ವಾದ ಸದಾ ನಿನ್ನ ಮೇಲಿರಲಿ’ ಎಂದು ಎಸ್​ಪಿಬಿ ಧ್ವನಿಯಲ್ಲಿ ಕೇಳಿ ಬಂದಿದೆ. ಈ ಧ್ವನಿ ಕೇಳುತ್ತಿದ್ದಂತೆ ಚರಣ್​ ಭಾವುಕರಾದರು.

ಈಗಾಗಲೇ ಆಡಿಷನ್ ಮೂಲಕ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ. ಆಗಸ್ಟ್​ 14ರಂದು ಮೊದಲ ಎಪಿಸೋಡ್​ ಪ್ರಸಾರವಾಗಲಿದೆ.

ಇದನ್ನೂ ಓದಿ: SPB Birth Anniversary: ಪ್ರೀತಿಯ ಎಸ್​ಪಿಬಿ ಸರ್, ಎದೆ ತುಂಬಿ ಹಾಡಲು ನೀವು ಮತ್ತೆ ಹುಟ್ಟಿಬರಬೇಕು

ಅಭಿಮಾನಿಗಳಿಗೆ ಗುಡ್​​ನ್ಯೂಸ್​ ಕೊಟ್ಟ ‘ನಮ್ಮನೆ ಯುವರಾಣಿ’ ಅಂಕಿತಾ; ಇದು ಫ್ಯಾನ್ಸ್​ಗೆ ಖುಷಿಯಾಗೋ ವಿಚಾರ

Published On - 1:22 pm, Fri, 13 August 21

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ